Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂತ್ಯೋದಯ ಭವನದ ಅಗ್ನಿ ಅವಘಡದಲ್ಲಿ...

ಅಂತ್ಯೋದಯ ಭವನದ ಅಗ್ನಿ ಅವಘಡದಲ್ಲಿ ಒಳಗಿನವರ ಕೈವಾಡ: ಅಧಿಕಾರಿಗಳ ಶಂಕೆ

ಘಟನೆಗೆ ಒಂದು ವಾರ ಮೊದಲಷ್ಟೇ 5ನೆ ಮಹಡಿಯಲ್ಲಿ ನೆಲೆಯೂರಿತ್ತು ಆಡಿಟ್ ತಂಡ !

ವಾರ್ತಾಭಾರತಿವಾರ್ತಾಭಾರತಿ8 March 2019 10:56 PM IST
share
ಅಂತ್ಯೋದಯ ಭವನದ ಅಗ್ನಿ ಅವಘಡದಲ್ಲಿ ಒಳಗಿನವರ ಕೈವಾಡ: ಅಧಿಕಾರಿಗಳ ಶಂಕೆ

ಹೊಸದಿಲ್ಲಿ,ಮಾ.8: ಮಾರ್ಚ್ 6ರಂದು ದಿಲ್ಲಿಯ ಅಂತ್ಯೋದಯ ಭವನದಲ್ಲಿ ಸಂಭವಿಸಿದ ಅಗ್ನಿ ಅವಘಡದ ಹಿಂದೆ ಕಾಣದ ಕೈಗಳು ಕೈಯಾಡಿಸಿವೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಅಗ್ನಿ ದುರಂತದಲ್ಲಿ ಸಿಐಎಸ್‌ಎಫ್ ಅಧಿಕಾರಿ ಎಂ.ಪಿ ಗೊಡರ ಪ್ರಾಣ ಕಳೆದುಕೊಳ್ಳುವ ಜೊತೆಗೆ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳ ಸಬಲೀಕರಣ ಇಲಾಖೆಗೆ ಸೇರಿದ ಅನೇಕ ದಾಖಲೆಗಳು ಬೆಂಕಿಗಾಹುತಿಯಾಗಿದ್ದವು. ಈ ಅವಘಡದಲ್ಲಿ ಮೋದಿ ಸರಕಾರದ ಮಹಾತ್ವಾಕಾಂಕ್ಷೆಯ ಪ್ರವೇಶಸಾಧ್ಯ ಭಾರತ ಅಭಿಯಾನ (ಎಐಸಿ)ಗೆ ಸೇರಿದ ದೊಡ್ಡ ಪ್ರಮಾಣದ ಆಡಿಟ್ ದಾಖಲೆಗಳು ಭಸ್ಮವಾಗಿದ್ದವು. ಈ ದಾಖಲೆಗಳನ್ನು ಪರಿಶೀಲಿಸಲು ಸಂಪೂರ್ಣ ಆಡಿಟ್ ತಂಡ ಒಂದು ವಾರ ಮೊದಲಷ್ಟೇ ಈ ಕಟ್ಟಡದ ಐದನೇ ಮಹಡಿಯಲ್ಲಿ ನೆಲೆಯೂರಿತ್ತು.

ಆಡಿಟ್ ಆರಂಭವಾಗುವುದಕ್ಕೂ ಮೊದಲೇ ಬೆಂಕಿ ಅವಘಡದಲ್ಲಿ ದಾಖಲೆಗಳು ಭಸ್ಮವಾಗಿರುವುದು ಹಲವು ಅಧಿಕಾರಿಗಳು ಘಟನೆ ಬಗ್ಗೆ ಶಂಕೆ ವ್ಯಕ್ತಪಡಿಸುವಂತೆ ಮಾಡಿದೆ. ಈ ಕುರಿತು ದಿ ವೈರ್ ಪತ್ರಿಕೆಗೆ ನೀಡಿದ ಹೇಳಿಕೆಯಲ್ಲಿ, ಪ್ರವೇಶಸಾಧ್ಯ ಭಾರತ ಅಭಿಯಾನದ ಸಂಪೂರ್ಣ ದಾಖಲೆಗಳು ಅಗ್ನಿ ದುರಂತದಲ್ಲಿ ನಾಶವಾಗಿದೆ. ಈ ಅಭಿಯಾನವನ್ನು 2015ರ ಡಿಸೆಂಬರ್‌ನಲ್ಲಿ ಆರಂಭಿಸಲಾಗಿತ್ತು. ಆದರೆ ಅದು ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿತ್ತು. ಈ ಬಗ್ಗೆ ಇಲಾಖೆಯ ಅಧಿಕಾರಿಗಳು, ಮುಖ್ಯವಾಗಿ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿಯನ್ನು ಪ್ರಶ್ನಿಸಿದಾಗ ಸರಿಯಾದ ಉತ್ತರ ನೀಡಲು ವಿಫಲವಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದು ಮೋದಿ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿತ್ತು. ಅಧಿಕಾರಿಗಳ ಪ್ರಶ್ನೆಯಿಂದ ಸರಕಾರಕ್ಕೂ ಮುಜುಗರ ಉಂಟಾಗಿತ್ತು. ಈ ಅಭಿಯಾನದಡಿ ಕಳೆದ ಐದು ವರ್ಷಗಳಲ್ಲಿ ಎಷ್ಟು ಸಾಧನೆ ಮಾಡಲಾಗಿದೆ ಎಂಬುದರ ಬಗ್ಗೆ ಇತ್ತೀಚೆಗೆ ಸರಕಾರ ಪರಿಶೀಲಿಸಲು ಮುಂದಾಗಿತ್ತು. ಆದರೆ ನಮಗೆಲ್ಲರಿಗೂ ತಿಳಿದಿರುವಂತೆ ಎಐಸಿಗೆ ನೀಡಲಾದ ಯಾವ ಗುರಿಯನ್ನೂ ಸಾಧಿಸಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಯೋಜನೆಗಳ ವೆಚ್ಚದ ಅಂದಾಜಿನ ದಾಖಲೆಗಳೂ ಸೇರಿದಂತೆ ಬಹುತೇಕ ಕಡತಗಳು ಬೆಂಕಿ ದುರಂತದಲ್ಲಿ ನಾಶವಾಗಿವೆ. ಇದು ಒಳಗಿನ ವ್ಯಕ್ತಿಗಳ ಕೆಲಸ ಎಂಬ ಆತಂಕ ಕೆಲವು ಅಧಿಕಾರಿಗಳಿಗೆ ಇದೆ ಎಂದು ವೈರ್ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X