Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫಡ್ನವೀಸ್ ಆಳ್ವಿಕೆಯಲ್ಲಿ ರೈತರ...

ಫಡ್ನವೀಸ್ ಆಳ್ವಿಕೆಯಲ್ಲಿ ರೈತರ ಆತ್ಮಹತ್ಯೆಗಳಲ್ಲಿ ಎರಡು ಪಟ್ಟು ಹೆಚ್ಚಳ: ಆರ್‌ಟಿಐಯಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ9 March 2019 9:32 PM IST
share
ಫಡ್ನವೀಸ್ ಆಳ್ವಿಕೆಯಲ್ಲಿ ರೈತರ ಆತ್ಮಹತ್ಯೆಗಳಲ್ಲಿ ಎರಡು ಪಟ್ಟು ಹೆಚ್ಚಳ: ಆರ್‌ಟಿಐಯಿಂದ ಬಹಿರಂಗ

 ಮುಂಬೈ,ಮಾ.9: ಮಹಾರಾಷ್ಟ್ರದಲ್ಲಿ 2011-2014ರ ಅವಧಿಗೆ ಹೋಲಿಸಿದರೆ, 2015-18ರಲ್ಲಿ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ ಸರಕಾರದ ಆಡಳಿತದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಎರಡು ಪಟ್ಟು ಏರಿಕೆಯಾಗಿದೆ ಎಂದು ಆರ್‌ಟಿಐ ಉತ್ತರವೊಂದು ಬಹಿರಂಗಪಡಿಸಿದೆ.

ಕಾಂಗ್ರೆಸ್-ಎನ್‌ಸಿಪಿ ಸರಕಾರದ ಆಳ್ವಿಕೆಯಿದ್ದ 2011-2014ರ ಅವಧಿಯಲ್ಲಿ 6268 ರೈತ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದರೆ, 2015-18ರಲ್ಲಿ ಬಿಜೆಪಿ ಸರಕಾರದ ಆಳ್ವಿಕೆಯಲ್ಲಿ ಅದಕ್ಕಿಂತ ಎರಡು ಪಟ್ಟು ಹೆಚ್ಚು ಅಂದರೆ 11,995 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಜಿತೇಂದ್ರ ಗಾಡ್ಗೆ ಅವರಿಗೆ ಲಭ್ಯವಾದ ದತ್ತಾಂಶಗಳು ತಿಳಿಸಿವೆ.

ರೈತ ಆತ್ಮಹತ್ಯೆ ಪ್ರಕರಣಗಳು ವ್ಯಾಪಕವಾಗಿ ವರದಿಯಾಗಿರುವ ಪೂರ್ವ ಮಹಾರಾಷ್ಟ್ರದ ವಿದರ್ಭ ಪ್ರಾಂತದ ಆಮರಾವತಿ ವಿಭಾಗದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ರೈತ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.

 ಕುತೂಹಲಕರವೆಂದರೆ, ಮುಖ್ಯಮಂತ್ರಿ ಫಡ್ನವೀಸ್ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇಬ್ಬರೂ ವಿದರ್ಭ ಪ್ರಾಂತದವರಾಗಿದ್ದಾರೆ.

 ಮಹಾರಾಷ್ಟ್ರದಲ್ಲಿ ರೈತ ಆತ್ಮಹತ್ಯೆಗಳ ಪ್ರಕರಣಗಳು ಅಧಿಕವಾಗಿರುವ ಹೊರತಾಗಿಯೂ, ಅನೇಕ ಸಂತ್ರಸ್ತ ರೈತ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರವನ್ನು ಕೂಡಾ ನೀಡಲಾಗಿಲ್ಲವೆಂದು ಆರ್‌ಟಿಐ ಉತ್ತರ ಬಹಿರಂಗಪಡಿಸಿದೆ.

2014ರಲ್ಲಿ 1358 ರೈತ ಕುಟುಂಬಗಳಿಗೆ ಪರಿಹಾರ ದೊರೆತರೆ, ಉಳಿದ 674 ಪ್ರಕರಣಗಳಲ್ಲಿ ಪರಿಹಾ ನಿರಾಕರಿಸಲಾಗಿದೆ. ಆದರೆ 2018ರಲ್ಲಿ ಒಟ್ಟು 1330 ರೈತ ಆತ್ಮಹತ್ಯೆ ಪ್ರಕರಣಗಳ ಪೈಕಿ 1050ರಲ್ಲಿ ಪರಿಹಾರ ನಿರಾಕರಿಸಲಾಗಿದೆ ಎಂದು ಅರ್ಜಿಯು ತಿಳಿಸಿದೆ.

 ಅತ್ಯಧಿಕ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿರುವ ಅಮರಾವತಿ ವಿಭಾಗದಲ್ಲಿ ಗರಿಷ್ಠ ಸಂಖ್ಯೆಯ ಪ್ರಕರಣಗಳಲ್ಲಿ ಪರಿಹಾರವನ್ನು ನಿರಾಕರಿಸಲಾಗಿದೆ. 2016 ಹಾಗೂ 2018ರಲ್ಲಿ ಅನುಮೋದನೆಗಿಂತಲೂ, ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ತಿರಸ್ಕೃತವಾಗಿವೆ ಎಂದು ಗಾಡ್ಗೆ ತಿಳಿಸಿದ್ದಾರೆ. ಸಂತ್ರಸ್ತ ರೈತ ಕುಟುಂಬಗಳಿಗೆ ಪರಿಹಾರ ಧನವನ್ನು ಹೆಚ್ಚಿಸುವ ಪ್ರಸ್ತಾವ ಇನ್ನೂ ನೆನೆಗುದಿಯಲ್ಲಿದೆ. 2018ರಲ್ಲಿ ಮಹಾರಾಷ್ಟ್ರ ಸರಕಾರವು ‘‘ಗೋಪಿನಾಥ ಮುಂಢೆ ಅವಘಡ ವಿಮೆ ಯೋಜನೆ’ಯನ್ನು ಜಾರಿಗೆ ತಂದಿತ್ತು. ಆದರೆ ಸರಕಾರ ಹೊರಡಿಸಿದ ಸುತ್ತೋಲೆಯಲ್ಲಿ ಅಪಘಾತ ಮಾತ್ರ ಈ ವಿಮೆಯ ವ್ಯಾಪ್ತಿಗೆ ಒಳಪಡುತ್ತದೆಯೇ ಹೊರತು ಅದರಲ್ಲಿ ಆತ್ಮಹತ್ಯೆಯ ಉಲ್ಲೇಖವಿಲ್ಲ’’ ಎಂದು ಅವರು ಹೇಳಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ರೈತರ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಸಾಲ ಮನ್ನಾ ಅಥವಾ ಬೆಳೆ ವಿಮೆಯಂತಹ ಉತ್ತೇಜಕ ಕ್ರಮಗಳು, ನಿರೀಕ್ಷಿತ ಪರಿಣಾಮವನ್ನುಂಟು ಮಾಡುವಲ್ಲಿ ವಿಫಲವಾಗಿದೆಯೆಂದು ಗಾಡ್ಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X