Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜಕಾರಣವನ್ನು ಶೋಕಿಗಾಗಿ ಮಾಡಲು...

ರಾಜಕಾರಣವನ್ನು ಶೋಕಿಗಾಗಿ ಮಾಡಲು ಬಂದಿಲ್ಲ: ನಿಖಿಲ್ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ9 March 2019 10:48 PM IST
share
ರಾಜಕಾರಣವನ್ನು ಶೋಕಿಗಾಗಿ ಮಾಡಲು ಬಂದಿಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯ,ಮಾ.9: ನಾನು ಅಭ್ಯರ್ಥಿ ಆಗುತ್ತೇನೆ ಅಂದುಕೊಂಡಿರಲಿಲ್ಲ. ಇದು ಪಕ್ಷದ ತೀರ್ಮಾನ ಎಂದು ಜೆಡಿಎಸ್ ಲೋಕಸಭಾ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಮಳವಳ್ಳಿಯಲ್ಲಿ ನಡೆದ ಜೆಡಿಎಸ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನನಗೆ ಜೀವನದಲ್ಲಿ ಸ್ವಾಭಿಮಾನ ಜಾಸ್ತಿ. ಜಿಲ್ಲೆಯ ಎಲ್ಲ ನಾಯಕರ ಒಪ್ಪಿಗೆ ಪಡೆದು ನಿರ್ಧಾರ ಮಾಡಿ ಎಂದು ದೊಡ್ಡವರಿಗೆ, ತಂದೆಗೆ ಹೇಳಿದ್ದೆ. ನಮ್ಮ ತಂದೆ ಸಿಎಂ ಆದ ಮಾತ್ರಕ್ಕೆ ಮಗನನ್ನು ರಾಜಕೀಯಕ್ಕೆ ತಂದಿಲ್ಲ. ನಾನು ರಾಜಕಾರಣವನ್ನು ಶೋಕಿಗಾಗಿ ಮಾಡಲು ಬಂದಿಲ್ಲ. ಕೇವಲ ನಟನಾಗಿ ಕಾಲ ಕಳೆಯಬಹುದಿತ್ತು ಎಂದು ಹೇಳಿದರು. 

ನಾನು ಈ ಕುಟುಂಬದಲ್ಲಿ ಹುಟ್ಟಿರುವುದು ನನ್ನ ಪುಣ್ಯ. ನಿಮ್ಮೆಲ್ಲರ ಗುಲಾಮನಾಗಿ, ಸೇವೆ ಮಾಡಲು ಬಂದಿದ್ದೇನೆ. ಕಳೆದ ಎರಡು ಚುನಾವಣೆಯಿಂದಲೂ ನನಗೆ ಒತ್ತಡ ಇತ್ತು. ಆಗಲೇ ಒಪ್ಪಿದ್ದರೆ ನಾನು ಶಾಸಕ ಆಗುತ್ತಿದ್ದೆನೋ ಏನೋ ಎಂದ ಅವರು, ಮಗನ ರಾಜಕೀಯಕ್ಕಾಗಿ ಅನುದಾನ ಬಿಡುಗಡೆ ಮಾಡಿದ್ದಲ್ಲ. ಇದರಲ್ಲಿ ಯಾವುದೇ ಸ್ವಾರ್ಥ ಇಲ್ಲ. ಮಂಡ್ಯ ಜನರ ಋಣ ತೀರಿಸಲು ನಮ್ಮಿಂದ ಸಾಧ್ಯವೇ ಇಲ್ಲ. ಟೀಕೆ ಮಾಡುವವರು ಯೋಚನೆ ಮಾಡಿ ಟೀಕೆ ಮಾಡಬೇಕು ಎಂದು ತಿರುಗೇಟು ನೀಡಿದರು. 

ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಸರಣಿ ಸುದ್ದಿಯಾಗುತ್ತಿದೆ. ಅಂಬಿ ಅಣ್ಣನನ್ನು ಕಳೆದುಕೊಂಡ ನಮಗೆಲ್ಲ ತುಂಬಾ ನೋವಾಗಿದೆ. ಕುಮಾರಸ್ವಾಮಿ ಸಿಎಂ ಆಗಿ, ಅಂಬಿ ಸ್ನೇಹಿತರಾಗಿ ನಡೆದುಕೊಂಡದ್ದನ್ನು ನೀವೇ ನೋಡಿದ್ದೀರ. ನಾನೊಬ್ಬ ಮನುಷ್ಯನಾಗಿ, ಸಂಬಂಧಗಳಿಗೆ ಬೆಲೆ ಕೊಡುತ್ತೇನೆ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧೆ ಮಾಡಬಹುದು. ಯಾರೇ ನಿಲ್ಲಲಿ, ಒಳ್ಳೆಯ ಮನಸ್ಸಿನಿಂದ ಸ್ವಾಗತಿಸಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಅಂತಿಮವಾಗಿ ತೀರ್ಪು ನೀಡುವುದು ನೀವು. ತೀರ್ಪು ಏನೇ ಆದರೂ ಅದನ್ನು ನಾವು ಪ್ರೀತಿಯಿಂದ ಸ್ವಾಗತಿಸುತ್ತೇನೆ. ನನ್ನನ್ನು ಲೋಕಸಭಾ ಸದಸ್ಯನಾಗಿ ಆಯ್ಕೆ ಮಾಡಿದರೆ ನಿಮಗೆ ನಾನು ಋಣಿಯಾಗಿರುತ್ತೇನೆ. ನನಗೆ ಇದೊಂದು ಬಾರಿ ಅವಕಾಶ ಮಾಡಿಕೊಡಿ ಕೊಡಿ ಎಂದು ಮನವಿ ಮಾಡಿದ ಅವರು, ಕುಮಾರಣ್ಣನಿಗೆ ಜನ್ಮಕೊಟ್ಟಿದ್ದು ರಾಮನಗರ ಜಿಲ್ಲೆ. ಮರು ಜನ್ಮ ಕೊಟ್ಟಿದ್ದು ಮಂಡ್ಯ ಜಿಲ್ಲೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆಲ್ಲಿಸಿ. ಜಾತ್ಯಾತೀತ ಶಕ್ತಿ ಒಂದು ಮಾಡಲು ಜೆಡಿಎಸ್ ಗೆಲ್ಲಿಸಿ ಎಂದು ಮನವಿ ಮಾಡಿದರು.

ಬಳಿಕ ಸೀತಾರಾಮ ಕಲ್ಯಾಣ ಚಿತ್ರದ ನಿನ್ನ ರಾಜ ನಾನು, ನನ್ನ ರಾಣಿ ನೀನು ಗೀತೆಗೆ ಧನಿಯಾಗಿ ನಿಖಿಲ್ ನೃತ್ಯ ಮಾಡಿ ಚಪ್ಪಾಳೆ, ಶಿಳ್ಳೆ ಗಿಟ್ಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X