Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೆಯದ್ ಮುಷ್ತಾಕ್ ಅಲಿ ಟಿ20: ಮುಂದುವರಿದ...

ಸೆಯದ್ ಮುಷ್ತಾಕ್ ಅಲಿ ಟಿ20: ಮುಂದುವರಿದ ಕರ್ನಾಟಕದ ಗೆಲುವಿನ ಓಟ

ಉ.ಪ್ರ. ವಿರುದ್ಧ 10 ರನ್‌ಗಳ ರೋಚಕ ಜಯ

ವಾರ್ತಾಭಾರತಿವಾರ್ತಾಭಾರತಿ9 March 2019 11:20 PM IST
share
ಸೆಯದ್ ಮುಷ್ತಾಕ್ ಅಲಿ ಟಿ20: ಮುಂದುವರಿದ ಕರ್ನಾಟಕದ ಗೆಲುವಿನ ಓಟ

ಇಂದೋರ್, ಮಾ.9: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಸೂಪರ್ ಲೀಗ್ ಹಂತದ ‘ಬಿ’ ಗುಂಪಿನ ಎರಡನೇ ಪಂದ್ಯದಲ್ಲಿ ಕರ್ನಾಟಕ ತಂಡ ಉತ್ತರಪ್ರದೇಶವನ್ನು ಶನಿವಾರ 10 ರನ್‌ಗಳಿಂದ ಮಣಿಸಿದೆ.

ಬೌಲರ್‌ಗಳಾದ ವೇಗಿ ವಿನಯ ಕುಮಾರ್(24ಕ್ಕೆ 2), ಮಧ್ಯಮ ವೇಗಿ ವಿ.ಕೌಶಿಕ್ (22ಕ್ಕೆ 3) ಹಾಗೂ ಆಫ್‌ಸ್ಪಿನ್ನರ್ ಜೆ.ಸುಚಿತ್ (19ಕ್ಕೆ 2) ಕರುನಾಡಿನ ಗೆಲುವಿನ ರೂವಾರಿಗಳಾದರು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡವನ್ನು ಉತ್ತರ ಪ್ರದೇಶದ ಬೌಲರ್‌ಗಳು 6 ವಿಕೆಟ್‌ಗೆ 149 ರನ್‌ಗಳಿಗೆ ನಿಯಂತ್ರಿಸಿದರು. ಆರಂಭಿಕ ದಾಂಡಿಗ ರೋಹನ್ ಕದಮ್ (35, 30 ಎಸೆತ) ಕರ್ನಾಟಕದ ಗರಿಷ್ಠ ಸ್ಕೋರರ್ ಎನಿಸಿದರೆ ರಾಷ್ಟ್ರೀಯ ತಂಡದ ಆಟಗಾರ ಮಾಯಾಂಕ್ ಅಗರ್ವಾಲ್ (33, 27 ಎಸೆತ) ಪ್ರಭಾವಿ ಎನಿಸಿದರು. ಇವರಿಬ್ಬರೂ ಎರಡನೇ ವಿಕೆಟ್ ಜೊತೆಯಾಟದಲ್ಲಿ 60 ರನ್‌ಗಳನ್ನು ಜಮೆ ಮಾಡಿದರು. ಕರುಣ್ ನಾಯರ್ (21), ಮನೀಷ್ ಪಾಂಡೆ (22) ಹಾಗೂ ಮನೋಜ್ ಭಾಂಡಗೆ (25) ಕರ್ನಾಟಕಕ್ಕೆ ಬ್ಯಾಟಿಂಗ್‌ನಲ್ಲಿ ಉತ್ತಮ ಕೊಡುಗೆ ನೀಡಿದರು.

ಆ ಬಳಿಕ ಬ್ಯಾಟಿಂಗ್ ಆರಂಭಿಸಿದ ಉತ್ತರಪ್ರದೇಶಕ್ಕೆ ನಾಯಕ ಆಕಾಶ್‌ದೀಪ್ ನಾಥ್ (46, 41 ಎಸೆತ) ಉತ್ತಮ ಆರಂಭ ನೀಡಿದರು. 14ನೇ ಓವರ್‌ನಲ್ಲಿ ಆಕಾಶ್ ಔಟಾದ ಬಳಿಕ ಕರ್ನಾಟಕ ತನ್ನ ಹಿಡಿತವನ್ನು ಬಿಗಿಗೊಳಿಸಿತು.

ಕೊನೆಯ 2 ಓವರ್‌ಗಳಲ್ಲಿ ಉತ್ತರಪ್ರದೇಶಕ್ಕೆ 22 ರನ್‌ಗಳ ಅಗತ್ಯವಿತ್ತು. 19ನೇ ಓವರ್ ಬೌಲಿಂಗ್ ಮಾಡಿದ ವಿನಯ್ 8 ರನ್ ನೀಡಿ ಎರಡು ವಿಕೆಟ್ ಪಡೆದರು. ಆ ಬಳಿಕ ಕೊನೆಯ ಓವರ್‌ನಲ್ಲಿ 14 ರನ್ ಗಳಿಸಬೇಕಾದ ಒತ್ತಡಕ್ಕೆ ಸಿಲುಕಿದ ಎದುರಾಳಿ ತಂಡಕ್ಕೆ ಕೌಶಿಕ್ 3 ರನ್ ನೀಡಿ ಎರಡು ವಿಕೆಟ್ ಪಡೆದು ಆಘಾತ ನೀಡಿದರು. 139 ರನ್‌ಗಳಿಗೆ ಉತ್ತರಪ್ರದೇಶ ಸೀಮಿತಗೊಂಡಿತು.

ಈ ಗೆಲುವಿನೊಂದಿಗೆ ಕರ್ನಾಟಕ ‘ಬಿ’ ಗುಂಪಿನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X