Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ:...

ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ: ಎ.11ರಂದು ಮೊದಲ ಹಂತದ ಮತದಾನ, ಮೇ 23ರಂದು ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ10 March 2019 5:32 PM IST
share
ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ: ಎ.11ರಂದು ಮೊದಲ ಹಂತದ ಮತದಾನ, ಮೇ 23ರಂದು ಫಲಿತಾಂಶ

ಹೊಸದಿಲ್ಲಿ, ಮಾ.10: ಮುಂದಿನ ಲೋಕಸಭಾ ಚುನಾವಣೆಯ ಮತದಾನ ಎಪ್ರಿಲ್ –ಮೇ ತಿಂಗಳಲ್ಲಿ 7  ಹಂತಗಳಲ್ಲಿ ನಡೆಯಲಿದ್ದು,  ಮೊದಲ ಹಂತದ ಚುನಾವಣೆಯ ಮತದಾನ ಎ.11ರಂದು ನಿಗದಿಯಾಗಿದೆ. ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ವಿಜ್ಞಾನ ಭವನದಲ್ಲಿ ಇಂದು ಸಂಜೆ  ನಡೆದ  ಕೇಂದ್ರ  ಚುನಾವಣಾ ಆಯೋಗದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಆಯುಕ್ತ  ಸುನೀಲ್ ಅರೋರಾ   ಚುನಾವಣಾ   ವೇಳಾಪಟ್ಟಿಯನ್ನು ಪ್ರಕಟಿಸಿದರು.

ಮೊದಲ ಹಂತದಲ್ಲಿ 20 ರಾಜ್ಯಗಳ 91 ಕ್ಷೇತ್ರಗಳಿಗೆ , ಎ.18ರಂದು ಎರಡನೇ ಹಂತದಲ್ಲಿ 13 ರಾಜ್ಯಗಳಲ್ಲಿ 97 ಕ್ಷೇತ್ರಗಳಲ್ಲಿ , ಎ.23ರಂದು ಮೂರನೇ ಹಂತಗಳ ಮತದಾನ ನಡೆಯಲಿದೆ . ಕರ್ನಾಟಕದಲ್ಲಿ ಎರಡು ಹಂತಗಳ ಮತದಾನ ನಡೆಯಲಿದ್ದು, ಮೊದಲ ಹಂತದಲ್ಲಿ ಎ.18ರಂದು 14 ಕ್ಷೇತ್ರಗಳಲ್ಲಿ ಮತ್ತು ಎರಡನೇ ಹಂತದಲ್ಲಿ ಎ.23ರಂದು ಉಳಿದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಮತದಾನ ವೇಳಾಪಟ್ಟಿ

ಎ.11 : ಮೊದಲ ಹಂತ-20 ರಾಜ್ಯಗಳ 91 ಕ್ಷೇತ್ರ

ಎ.18: ಎರಡನೇ ಹಂತ-13 ರಾಜ್ಯಗಳ 97 ಕ್ಷೇತ್ರ

ಎ.23: ಮೂರನೇ ಹಂತ-14 ರಾಜ್ಯಗಳ 115 ಕ್ಷೇತ್ರ

ಎ.29: ನಾಲ್ಕನೇ ಹಂತ-9 ರಾಜ್ಯಗಳ 71 ಕ್ಷೇತ್ರ

ಮೇ 06: ಐದನೇ ಹಂತ- 7 ರಾಜ್ಯಗಳ 51 ಕ್ಷೇತ್ರ

ಮೇ 12: ಆರನೇ ಹಂತ-7 ರಾಜ್ಯಗಳ 59 ಕ್ಷೇತ್ರ

ಮೇ 19: ಏಳನೇ ಹಂತ-8 ರಾಜ್ಯಗಳ 59 ಕ್ಷೇತ್ರ

 ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟ

16ನೇ ಲೋಕಸಭಾ ಅವಧಿ ಜೂನ್ 3ಕ್ಕೆ ಮುಗಿಯಲಿದೆ.  ಚುನಾವಣೆಗೆ ಸಂಬಂಧಿಸಿ ವಿವಿಧ ರಾಜ್ಯಗಳ  ಆಯುಕ್ತರ ಜತೆ ಸರಣಿ ಸಭೆ ನಡೆಸಿ ಸಕಲ ಸಿದ್ಧತೆ ಮಾಡಲಾಗಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.ನೀತಿ ಸಂಹಿತೆ ಉಲ್ಲಂಘಟಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು  ಎಂದರು.

ಎಲ್ಲ ಹಬ್ಬಗಳು, ಪರೀಕ್ಷೆಗಳನ್ನು ಪರಿಗಣಿಸಿ ಚುನಾವಣಾ ದಿನಾಂಕವನ್ನು  ನಿಗದಿಪಡಿಸಲಾಗಿದೆ. ಈ ಬಾರಿ 90 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. 8.6 ಕೋಟಿ ಮತದಾರರ ಹೊಸ ಸೇರ್ಪಡೆಯಾಗಿದೆ. ಮತದಾನಕ್ಕೆ 10 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಎಲ್ಲ  ಇವಿಎಂಗಳಿಗೂ ವಿ ವಿ ಪ್ಯಾಟ್ ಗಳನ್ನು  ಅಳವಡಿಸಲಾಗುವುದು, ಮತ ಯಂತ್ರಗಳಲ್ಲಿ ಅಭ್ಯರ್ಥಿಗಳ  ಫೋಟೊ ಇರಲಿದೆ ಎಂದು ಮಾಹಿತಿ ನೀಡಿದರು.

ಅಭ್ಯರ್ಥಿಗಳು ಪ್ಯಾನ್ ಕಾರ್ಡ್  ಕಡ್ಡಾಯವಾಗಿ ಹೊಂದಿರಬೇಕು. ಅಭ್ಯರ್ಥಿಗಳು ತಮ್ಮ  ಕ್ರಿಮಿನಲ್  ಹಿನ್ನೆಲೆಯ ಬಗ್ಗೆ ಪತ್ರಿಕೆಗಳಲ್ಲಿ ಜಾಹೀರಾತು ಮೂಲಕ ಮತದಾರರಿಗೆ ಮಾಹಿತಿ ನೀಡಬೇಕು ಎಂದರು.

ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕ ಬಳಸುವಂತಿಲ್ಲ. ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಸಿಆರ್ ಪಿಎಫ್ ಬಳಕೆ ಮಾಡಲಾಗುವುದು. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಆರ್ ಪಿಎಫ್ ನ್ನು ನಿಯೋಜಿಸಲಾಗುವುದು ಎಂದು ಹೇಳಿದರು.

ಸರಿಯಾಗಿ ನಾಮಪತ್ರ ಭರ್ತಿ ಮಾಡದಿದ್ದರೆ ನಾಮಪತ್ರವನ್ನು ತಿರಸ್ಕರಿಸಲಾಗುವುದು. ಅಭ್ಯರ್ಥಿಗಳು ಫಾರಂ 26ನ್ನು ಸರಿಯಾಗಿ ಭರ್ತಿ ಮಾಡಬೇಕು  ಎಂದು ನುಡಿದರು.

ಮತಗಟ್ಟೆಗಳಲ್ಲಿ ಅಕ್ರಮ ನಡೆದಿರುವುದು ಕಂಡು ಬಂದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X