Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೂಅತಿಕ್ರಮಣ ತೆರವಿನ ನೆಪದಲ್ಲಿ 200ಕ್ಕೂ...

ಭೂಅತಿಕ್ರಮಣ ತೆರವಿನ ನೆಪದಲ್ಲಿ 200ಕ್ಕೂ ಅಧಿಕ ಮುಸ್ಲಿಮರ ಮನೆಗಳ ಧ್ವಂಸ

ವಾರ್ತಾಭಾರತಿವಾರ್ತಾಭಾರತಿ10 March 2019 9:00 PM IST
share
ಭೂಅತಿಕ್ರಮಣ ತೆರವಿನ ನೆಪದಲ್ಲಿ 200ಕ್ಕೂ ಅಧಿಕ ಮುಸ್ಲಿಮರ ಮನೆಗಳ ಧ್ವಂಸ

ಹೊಸದಿಲ್ಲಿ,ಮಾ.10: ಉತ್ತರಪ್ರದೇಶದ ಮೀರತ್‌ ನಲ್ಲಿ ಭೂಅತಿಕ್ರಮಣವನ್ನು ತೆರವುಗೊಳಿಸುವ ನೆಪದಲ್ಲಿ ಸ್ಥಳೀಯಾಡಳಿತ ಸಂಸ್ಥೆಯ ಅಧಿಕಾರಿಗಳು 200ಕ್ಕೂ ಅಧಿಕ ಮುಸ್ಲಿಮರ ಮನೆಗಳನ್ನು ನೆಲಸಮಗೊಳಿಸಿದ್ದಾರೆ. ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ, ಕೆಲವು ಕಿಡಿಗೇಡಿಗಳು ಪರಿಸರದಲ್ಲಿದ್ದ ಗೂಡಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಪೊಲೀಸರು ಗೂಡಂಗಡಿಗಳಿಗೆ ಬೆಂಕಿಹಚ್ಚಿದ್ದಾರೆಂದು ಮುಸ್ಲಿಂ ವ್ಯಕ್ತಿಯೊಬ್ಬರು ಆರೋಪಿಸುತ್ತಿರುವುದನ್ನು ತೋರಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ.

  ಮೀರತ್ ಕಂಟೊನ್ಮೆಂಟ್ ಮಂಡಳಿಯ ಸದಸ್ಯರು ಪೊಲೀಸರೊಂದಿಗೆ ರವಿವಾರ ಕೊಳೆಗೇರಿಗಳನ್ನು ತೆರವುಗೊಳಿಸಲು ಸದರ್ ‌ಬಜಾರ್ ಪ್ರದೇಶಕ್ಕೆ ಆಗಮಿಸಿದಾಗ ಹಿಂಸಚಾರ ಭುಗಿಲೆದಿತ್ತು. ಕೊಳೆಗೇರಿಗಳನ್ನು ತೆರವುಗೊಳಿಸಲು ಪೊಲೀಸರು ಮುಂದಾದಾಗ, ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಕಲ್ಲೆಸೆತದಲ್ಲಿ ತೊಡಗಿದರು. ಈ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು, ಆಸುಪಾಸಿನಲ್ಲಿದ್ದ ಗೂಡಂಗಡಿಗಳಿಗೆ ಬೆಂಕಿ ಹಚ್ಚಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಅಜ್ಞಾತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಆರು ಮಂದಿಯನ್ನು ಬಂಧಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಮಾನವಹಕ್ಕುಗಳ ಸಂಘಟನೆ ‘ರಿಹಾಯಿಮಂಚ್’ನ ಸದಸ್ಯ ರಾಜೀವ್ ಯಾದವ್ ಅವರು. ‘‘ ಸಮಾಜವನ್ನು ಧ್ರುವೀಕರಿಸುವ ದುರುದ್ದೇಶದಿಂದ ಇತ್ತೀಚಿನ ದಿನಗಳಲ್ಲಿ ಉತ್ತರಪ್ರದೇಶದಲ್ಲಿ ಕಡಿಮೆ ತೀವ್ರತೆಯ ಹಿಂಸಾಚಾರದ ಘಟನೆಗಳಲ್ಲಿ ಏರಿಕೆಯಾಗಿವೆ. ಬಹುತೇಕ ಪ್ರಕರಣಗಳಲ್ಲಿ ಮುಸ್ಲಿಮರು ಕಡಿಮೆ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಗುರಿಯಿರಿಸಲಾಗುತ್ತಿದೆ. ಅಲ್ಲೆಲ್ಲಾ ಮುಸ್ಲಿಮರಲ್ಲಿ ಭೀತಿಯನ್ನು ಹುಟ್ಟುಹಾಕುವ ಏಕೈಕ ಕಾರ್ಯಸೂಚಿಯೊಂದಿಗೆ, ಹಿಂಸಾಚಾರವನ್ನು ಪ್ರಚೋದಿಸಲು, ದಲಿತರನ್ನು ಬಳಸಿ ಕೊಳ್ಳಲಾಗುತ್ತಿದೆ. ಆ ಮೂಲಕ ಮುಸ್ಲಿಮರು ಪ್ರದೇಶವನ್ನು ತೊರೆದುಹೋಗುವಂತೆ ಮಾಡಲಾಗುತ್ತಿದೆಯೆಂದು ರಾಜೀವ್ ಯಾದವ್ ಆರೋಪಿಸಿದ್ದಾರೆ.

ಬಹುತೇಕ ಪ್ರಕರಣಗಳಲ್ಲಿ ಮುಸ್ಲಿಮರನ್ನು ಬಂಧಿಸಿ, ಅವರ ಮೇಲೆ ಕರಾಳವಾದ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ)ಯಡಿ ಪ್ರಕರಣ ದಾಖಲಿಸಲಾಗುತ್ತಿದೆ. ಎನ್‌ಎಸ್‌ಎ ಕಾಯ್ದೆಯಡಿ ಬಂಧಿತನಾದ ಯಾವುದೇ ವ್ಯಕ್ತಿಯು ದೇಶದ್ರೋಹಿಯೆನಿಸಿಕೊಳ್ಳುತ್ತಾನೆ. ಮುಸ್ಲಿಮರನ್ನು ದೇಶವಿರೋಧಿಗಳೆಂದು ಬಿಂಬಿಸುವುದೇ ಈ ಬೃಹತ್ ಕಾರ್ಯಸೂಚಿಯ ಉದ್ದೇಶವಾಗಿದೆ.

    ಮೀರತ್ ನಲ್ಲಿ ಮುಸ್ಲಿಮರನ್ನು ಒಕ್ಕಲೆಬ್ಬಿಸಿದ ಪ್ರಕರಣವನ್ನು ಮುಖ್ಯವಾಹಿನಿಯ ಬಹುತೇಕ ಮಾಧ್ಯಮಗಳು ಪ್ರಸಾರ ಮಾಡದಿರುವ ಬಗ್ಗೆ ಪ್ರತಿಕ್ರಿಯಿಸಿರುವ ನಿವೃತ್ತ ಪೊಲೀಸ್ ಮಹಾನಿರೀಕ್ಷಕ ಎಸ್.ಆರ್.ದಾರಾಪುರಿ ಅವರು, ‘‘ ಮಾಧ್ಯಮ ಹಾಗೂ ಪೊಲೀಸರು ಮುಸ್ಲಿಮರ ಬಗ್ಗೆ ಪೂರ್ವಾಗ್ರಹ ಹೊಂದಿದ್ದಾರೆ. ಅಲ್ಪಸಂಖ್ಯಾತರನ್ನು ಗಲಭೆಯ ರೂವಾರಿಗಳೆಂದು ಬಿಂಬಿಸುವ ಪ್ರಕರಣಗಳ ವರದಿ ಮಾಡಲು ಮುಖ್ಯವಾಹಿನಿಯ ಮಾಧ್ಯಮಗಳು ಆದ್ಯತೆ ನೀಡುತ್ತಿವೆ. ಆದರೆ ಅಲ್ಪಸಂಖ್ಯಾತರನ್ನು ಸಂತ್ರಸ್ತರಾಗುವಂತೆ ಮಾಡಿದ ಘಟನೆಗಳ ಬಗ್ಗೆ ಮಾಧ್ಯಮಗಳು ಹೆಚ್ಚಿನ ಬೆಳಕು ಚೆಲ್ಲುತ್ತಿಲ್ಲವೆಂದು ಅವರು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X