Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುಲ್ವಾಮ ದಾಳಿಯ ಸೂತ್ರಧಾರನ ಹೆಸರು...

ಪುಲ್ವಾಮ ದಾಳಿಯ ಸೂತ್ರಧಾರನ ಹೆಸರು ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ10 March 2019 9:03 PM IST
share
ಪುಲ್ವಾಮ ದಾಳಿಯ ಸೂತ್ರಧಾರನ ಹೆಸರು ಬಹಿರಂಗ

ಹೊಸದಿಲ್ಲಿ,ಮಾ.10: ಕನಿಷ್ಠ 40 ಮಂದಿ ಸಿಆರ್‌ಪಿಎಫ್ ಯೋಧರನ್ನು ಬಲಿತೆಗೆದುಕೊಂಡ ಪುಲ್ವಾಮ ಭಯೋತ್ಪಾದಕ ದಾಳಿಯ ಸೂತ್ರಧಾರಿ, ಜೈಷೆ ಮುಹಮ್ಮದ್ ಗುಂಪಿನ ಉಗ್ರಗಾಮಿ ಮುದಸ್ಸಿರ್ ಅಹ್ಮದ್ ಖಾನ್ ಯಾನೆ ಮುಹಮ್ಮದ್ ಭಾಯಿ ಎಂದು ತನಿಖಾಧಿಕಾರಿಗಳು ಗುರುತಿಸಿದ್ದಾರೆ.

ಜಮ್ಮುಕಾಶ್ಮೀರದ ತ್ರಾಲ್ ‌ನಲ್ಲಿರುವ ಮುದಸ್ಸಿರ್ ಖಾನ್‌ನ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಲಭ್ಯವಾದ ಸುಳಿವುಗಳನ್ನು ಆಧರಿಸಿ ತನಿಖಾಧಿಕಾರಿಗಳು ಈ ಬಗ್ಗೆ ಹೇಳಿಕೆಯನ್ನು ನೀಡಿದ್ದಾರೆ. ‘‘ 23 ವರ್ಷ ವಯಸ್ಸಿನ ಮುದಸ್ಸಿರ್ ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್ ಆಗಿದ್ದು, ಪದವಿ ಶಿಕ್ಷಣ ಪಡೆದಿದ್ದಾನೆ. ಪುಲ್ವಾಮದ ನಿವಾಸಿಯಾದ ಈತ, ಭಯೋತ್ಪಾದಕ ದಾಳಿಗೆ ಮಾರುತಿ ಈಕೊ ಕಾರು ಹಾಗೂ ಸ್ಫೋಟಕಗನ್ನು ವ್ಯವಸ್ಥೆಗೊಳಿಸಿದ್ದ. ಸ್ಫೋಟಕಗಳು ತುಂಬಿದ ವಾಹನವನ್ನು ಸಿಆರ್‌ಪಿಎಫ್ ವಾಹನಗಳ ಸಾಲಿಗೆ ಢಿಕ್ಕಿ ಹೊಡೆಸಿದ ಆತ್ಮಹತ್ಯಾ ಬಾಂಬರ್ ಅದಿಲ್ ಅಹ್ಮದ್ ದಾರ್, ಮುದಸ್ಸಿರ್ ಜೊತೆ ನಿರಂತರ ಸಂಪರ್ಕದಲ್ಲಿದ್ದನೆಂದು ಅಧಿಕಾರಿಗಳು ಹೇಳಿದ್ದಾರೆ.

ತ್ರಾಲ್‌ನ ಮಿರ್ ಮೊಹಲ್ಲಾದ ನಿವಾಸಿಯಾದ ಮುದಸ್ಸಿರ್, 2017ರಲ್ಲಿ ಜೈಶೆ ಮುಹಮ್ಮದ್ ಉಗ್ರಗಾಮಿ ಗುಂಪಿಗೆ ಸೇರ್ಪಡೆಗೊಂಡಿದ್ದನೆನ್ನಲಾಗಿದೆ. ಕಾಶ್ಮೀರ ಕಣಿವೆಯಲ್ಲಿ ಜೆಇಎಂನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದನೆನ್ನಲಾದ ನೂರ್ ಮುಹಮ್ಮದ್ ತಂತ್ರೆಯ್ ಯಾನೆ ‘ನೂರ್ ತ್ರಾಲಿ’ ಎಂಬಾತ ಮುದಸ್ಸಿರ್‌ನನ್ನು, ಉಗ್ರಗಾಮಿ ಗುಂಪಿನ ತೆಕ್ಕೆಗೆ ಸೆಳೆದಿದ್ದನೆನ್ನಲಾಗಿದೆ.

ನೂರ್ ಮುಹಮ್ಮದ್ ತಂತ್ರೆಯ ನಿಧನದ ಬಳಿಕ ಮುದಸ್ಸಿರ್ ತನ್ನ ಮನೆಯನ್ನು ತೊರೆದು, ಜೈಶೆ ಗುಂಪಿನ ಚಟುವಚಿಕೆಗಳಲ್ಲಿ ಸಕ್ರಿಯನಾಗಿದ್ದನೆಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಪದವಿ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಖಾನ್, ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ ಇಲೆಕ್ಟ್ರಿಶಿಯನ್ ಡಿಪ್ಲೊಮಾ ಮಾಡಿದ್ದ. ಕಾರ್ಮಿಕರೊಬ್ಬರ ಹಿರಿಯ ಪುತ್ರನಾದ ಈತ, ಕಳೆದ ವರ್ಷ ಸಂಜವಾನ್‌ನ ಸೇನಾ ನೆಲೆಯ ಮೇಲೆ ನಡೆದ ದಾಳಿಯಲ್ಲೂ ಮುಖ್ಯವಾದ ಪಾತ್ರ ವಹಿಸಿದ್ದ. ಈ ದಾಳಿಯಲ್ಲಿ ಆರು ಮಂದಿ ಸೈನಿಕರು ಹಾಗೂ ಓರ್ವ ನಾಗರಿಕರ ಸಾವನ್ನಪಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X