Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊಹಾಲಿಯಲ್ಲಿ ಮುಗ್ಗರಿಸಿದ ಕೊಹ್ಲಿ ಬಳಗ:...

ಮೊಹಾಲಿಯಲ್ಲಿ ಮುಗ್ಗರಿಸಿದ ಕೊಹ್ಲಿ ಬಳಗ: ಸರಣಿ ಸಮಬಲಗೊಳಿಸಿದ ಆಸೀಸ್

ನಾಲ್ಕನೇ ಏಕದಿನಕ್ಕೆ ಟರ್ನ್ ನೀಡಿದ ಟರ್ನರ್

ವಾರ್ತಾಭಾರತಿವಾರ್ತಾಭಾರತಿ10 March 2019 9:48 PM IST
share
ಮೊಹಾಲಿಯಲ್ಲಿ ಮುಗ್ಗರಿಸಿದ ಕೊಹ್ಲಿ ಬಳಗ: ಸರಣಿ ಸಮಬಲಗೊಳಿಸಿದ ಆಸೀಸ್

ಮೊಹಾಲಿ, ಮಾ.10: ಗರಿಷ್ಠ ಮೊತ್ತದ ಹಣಾಹಣಿಯಲ್ಲಿ ಪೀಟರ್ ಹ್ಯಾಂಡ್ಸ್‌ಕಾಂಬ್ ಚೊಚ್ಚಲ ಶತಕ(117),ಉಸ್ಮಾನ್ ಖ್ವಾಜಾ(91) ಹಾಗೂ ಟರ್ನರ್(ಔಟಾಗದೆ 84)ಅರ್ಧಶತಕದ ಕೊಡುಗೆ ನೆರವಿನಿಂದ ಆಸ್ಟ್ರೇಲಿಯ ತಂಡ ನಾಲ್ಕನೇ ಏಕದಿನ ಪಂದ್ಯದಲ್ಲಿ ಭಾರತವನ್ನು 4 ವಿಕೆಟ್‌ಗಳಿಂದ ರೋಚಕವಾಗಿ ಮಣಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯ 5 ಪಂದ್ಯಗಳ ಸರಣಿಯಲ್ಲಿ 2-2 ರಿಂದ ಸಮಬಲ ಸಾಧಿಸಿದೆ.

 ಗೆಲ್ಲಲು ಕಠಿಣ ಸವಾಲು ಪಡೆದ ಆಸ್ಟ್ರೇಲಿಯದ ಪರ ಚೊಚ್ಚಲ ಅರ್ಧಶತಕ ಸಿಡಿಸಿದ ಮಧ್ಯಮ ಕ್ರಮಾಂಕದ ದಾಂಡಿಗ ಟರ್ನರ್ ಹೆಸರಿಗೆ ತಕ್ಕಂತೆ ಪಂದ್ಯಕ್ಕೆ ಟರ್ನ್ ನೀಡಿದರು. ವಿಕೆಟ್‌ಕೀಪರ್ ಅಲೆಕ್ಸ್ ಕಾರೆಯೊಂದಿಗೆ(21) ಆರನೇ ವಿಕೆಟ್‌ಗೆ ಜೊತೆಯಾಟದಲ್ಲಿ 86 ರನ್ ಸೇರಿಸಿ ಆಸ್ಟ್ರೇಲಿಯಕ್ಕೆ ಇನ್ನೂ 13 ಎಸೆತಗಳು ಬಾಕಿ ಇರುವಾಗಲೇ ಅನಿರೀಕ್ಷಿತ ಗೆಲುವು ತಂದುಕೊಟ್ಟರು. ಆಸ್ಟ್ರೇಲಿಯ 47.5 ಓವರ್‌ಗಳಲ್ಲಿ 6 ವಿಕೆಟ್‌ಗೆ 359 ರನ್ ಗಳಿಸಿ ಗೆಲುವಿನ ಕೇಕೆ ಹಾಕಿತು. ಪಂಜಾಬ್ ಕ್ರಿಕೆಟ್ ಸ್ಟೇಡಿಯಂನ ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಟಾಸ್ ಜಯಿಸಿದ ನಾಯಕ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಕಳಪೆ ಫಾರ್ಮ್‌ನಿಂದಾಗಿ ಟೀಕೆಗೆ ಗುರಿಯಾಗಿದ್ದ ಆರಂಭಿಕ ಜೋಡಿ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ನಡೆಸಿ ಭಾರತ 9 ವಿಕೆಟ್ ನಷ್ಟಕ್ಕೆ 358 ರನ್ ಗಳಿಸಲು ಕಾರಣರಾದರು.

ಆಸೀಸ್ 3.3 ಓವರ್‌ಗಳಲ್ಲಿ 12 ರನ್‌ಗೆ 2 ವಿಕೆಟ್ ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ಆಗ ಜೊತೆಯಾದ ಖ್ವಾಜಾ(91,99 ಎಸೆತ, 7 ಬೌಂಡರಿ)ಹಾಗೂ ಹ್ಯಾಂಡ್ಸ್‌ಕಾಂಬ್(117,105 ಎಸೆತ, 8 ಬೌಂಡರಿ, 3 ಸಿಕ್ಸರ್)3ನೇ ವಿಕೆಟ್‌ಗೆ 192 ರನ್ ಜೊತೆಯಾಟ ನಡೆಸಿ ತಂಡದ ಮೊತ್ತವನ್ನು 204ಕ್ಕೆ ತಲುಪಿಸಿ ಆಸೀಸ್‌ನ ರನ್ ಚೇಸಿಂಗ್‌ಗೆ ಬಲ ನೀಡಿದರು. ಖ್ವಾಜಾ ವಿಕೆಟ್ ಉರುಳಿಸಿದ ಬುಮ್ರಾ ಈ ಜೋಡಿಯನ್ನು ಬೇರ್ಪಡಿಸಿದರು.

ಖ್ವಾಜಾ ಔಟಾದ ಬಳಿಕ ದೃತಿಗೆಡದ ಹ್ಯಾಂಡ್ಸ್‌ಕಾಂಬ್ 92 ಎಸೆತಗಳಲ್ಲಿ 6 ಬೌಂಡರಿ, 3 ಸಿಕ್ಸರ್ ನೆರವಿನಿಂದ ಚೊಚ್ಚಲ ಶತಕ ಸಿಡಿಸಿದರು.

ಮ್ಯಾಕ್ಸ್‌ವೆಲ್ 23 ರನ್‌ಗೆ ಔಟಾದಾಗ ಕ್ರೀಸ್ ಆಕ್ರಮಿಸಿಕೊಂಡ ಟರ್ನರ್, ಹ್ಯಾಂಡ್ಸ್‌ಕಾಂಬ್‌ರೊಂದಿಗೆ 5ನೇ ವಿಕೆಟ್‌ಗೆ 42 ರನ್ ಜೊತೆಯಾಟ ನಡೆಸಿ ತಂಡಕ್ಕೆ ಗೆಲುವಿನ ವಿಶ್ವಾಸ ಮೂಡಿಸಿದರು.

ಶತಕವೀರ ಹ್ಯಾಂಡ್ಸ್‌ಕಾಂಬ್ 42ನೇ ಔಟಾದಾಗ ಕಾರೆ ಅವರೊಂದಿಗೆ ಕೈಜೋಡಿಸಿದ ಟರ್ನರ್ ಮಿಂಚಿನ ವೇಗದಲ್ಲಿ ರನ್ ಸೇರಿಸಿ ಆಸ್ಟ್ರೇಲಿಯಕ್ಕೆ ಮೊಹಾಲಿಯಲ್ಲಿ ಗೆಲುವಿನ ಹಾರ ತೊಡಿಸಿದರು.

ಭಾರತದ ಪರ ಜಸ್‌ಪ್ರೀತ್ ಬುಮ್ರಾ 63ಕ್ಕೆ 3 ವಿಕೆಟ್ ಪಡೆದರು. ಹಲವು ಕ್ಯಾಚ್ ಕೈಚೆಲ್ಲಿದ ಭಾರತಕ್ಕೆ ಕಳಪೆ ಫೀಲ್ಡಿಂಗ್ ಮುಳುವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X