Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಮಾನ ಪತನಗೊಂಡು 157 ಮಂದಿ ಮೃತ್ಯು:...

ವಿಮಾನ ಪತನಗೊಂಡು 157 ಮಂದಿ ಮೃತ್ಯು: ಹಿಂದಿರುಗಲು ಬಯಸಿದ್ದ ಪೈಲಟ್

ವಾರ್ತಾಭಾರತಿವಾರ್ತಾಭಾರತಿ10 March 2019 10:22 PM IST
share
ವಿಮಾನ ಪತನಗೊಂಡು 157 ಮಂದಿ ಮೃತ್ಯು: ಹಿಂದಿರುಗಲು ಬಯಸಿದ್ದ ಪೈಲಟ್

ಅಡಿಸ್ ಅಬಾಬ, ಮಾ. 10: ಇಥಿಯೋಪಿಯ ರಾಜಧಾನಿ ಅಡಿಸ್ ಅಬಾಬದಿಂದ ಕೆನ್ಯ ರಾಜಧಾನಿ ನೈರೋಬಿಗೆ ಹೋಗುತ್ತಿದ್ದ ಇಥಿಯೋಪಿಯನ್ ಏರ್‌ಲೈನ್ಸ್‌ಗೆ ಸೇರಿದ ವಿಮಾನವೊಂದು ರವಿವಾರ ಬೆಳಗ್ಗೆ ಪತನಗೊಂಡಿದೆ ಹಾಗೂ ವಿಮಾನದಲ್ಲಿದ್ದ ಎಲ್ಲ 157 ಮಂದಿ ಮೃತಪಟ್ಟಿದ್ದಾರೆ.

ಬೋಯಿಂಗ್ 737-8 ಮ್ಯಾಕ್ಸ್ ವಿಮಾನದ ಪತನಕ್ಕೆ ಕಾರಣ ಏನು ಎನ್ನುವುದು ತಕ್ಷಣಕ್ಕೆ ಗೊತ್ತಾಗಿಲ್ಲ. ಅದು ಹೊಸ ವಿಮಾನವಾಗಿತ್ತು ಹಾಗೂ ಕಳೆದ ವರ್ಷದ ನವೆಂಬರ್‌ನಲ್ಲಷ್ಟೇ ಅದನ್ನು ಇಥಿಯೋಪಿಯ ಏರ್‌ಲೈನ್ಸ್ ಪಡೆದುಕೊಂಡಿತ್ತು.

ಸರಕಾರಿ ಒಡೆತನದ ಇಥಿಯೋಪಿಯ ಏರ್‌ಲೈನ್ಸ್ ಆಫ್ರಿಕದ ಅತ್ಯುತ್ತಮ ಏರ್‌ಲೈನ್ ಸಂಸ್ಥೆ ಎಂಬುದಾಗಿ ಪರಿಗಣಿಸಲ್ಪಟ್ಟಿದೆ.

‘‘ನೈರೋಬಿಗೆ ತೆರಳುತ್ತಿದ್ದ ವಿಮಾನದಲ್ಲಿ 149 ಪ್ರಯಾಣಿಕರು ಮತ್ತು ಎಂಟು ಸಿಬ್ಬಂದಿ ಇದ್ದರು ಎಂಬುದಾಗಿ ಭಾವಿಸಲಾಗಿದೆ. ಹಾರಾಟ ಆರಂಭಿಸಿದ ಆರು ನಿಮಿಷಗಳಲ್ಲಿ ವಿಮಾನ ಪತನಗೊಂಡಿತು. ಅಡಿಸ್ ಅಬಾಬದ ದಕ್ಷಿಣಕ್ಕೆ ಸುಮಾರು 50 ಕಿ.ಮೀ. ದೂರದ ಬಿಶೊಫು ಅಥವಾ ಡೆಬ್ರೆ ಝೀಟ್‌ನ ಸುತ್ತಮುತ್ತ ಬೆಳಗ್ಗೆ 8:44ರ ಸುಮಾರಿಗೆ ವಿಮಾನ ಪತನಗೊಂಡಿದೆ’’ ಎಂದು ಇಥಿಯೋಪಿಯ ಏರ್‌ಲೈನ್ಸ್‌ನ ಹೇಳಿಕೆಯೊಂದು ತಿಳಿಸಿದೆ.

ವಿಮಾನದಲ್ಲಿ 33 ದೇಶಗಳ ನಾಗರಿಕರು ಪ್ರಯಾಣಿಸುತ್ತಿದ್ದರು ಎಂದು ಇಥಿಯೋಪಿಯದ ಸರಕಾರಿ ಸುದ್ದಿವಾಹಿನಿ ಇಬಿಸಿ ವರದಿ ಮಾಡಿದೆ.

ಇದೇ ಮಾದರಿಯ ವಿಮಾನ ಹಿಂದೆಯೂ ಪತನ

ಅಕ್ಟೋಬರ್‌ನಲ್ಲಿ ಇಂಡೋನೇಶ್ಯ ರಾಜಧಾನಿ ಜಕಾರ್ತದಿಂದ ದೇಶದ ಇನ್ನೊಂದು ಪಟ್ಟಣಕ್ಕೆ ಹೋಗುತ್ತಿದ್ದ ಇನ್ನೊಂದು ಬೋಯಿಂಗ್ 737-8 ಮ್ಯಾಕ್ಸ್ ವಿಮಾನವು ಜಾವಾ ಸಮುದ್ರದಲ್ಲಿ ಪತನಗೊಂಡಿರುವುದನ್ನು ಸ್ಮರಿಸಬಹುದಾಗಿದೆ. ಅದರಲ್ಲಿದ್ದ ಎಲ್ಲ 189 ಮಂದಿ ಮೃತಪಟ್ಟಿದ್ದಾರೆ.

ಹಿಂದಿರುಗಲು ಬಯಸಿದ್ದ ಪೈಲಟ್

 ವಿಮಾನವು ಪತನಗೊಳ್ಳುವುದಕ್ಕೆ ಮೊದಲು, ತಾನು ಸಮಸ್ಯೆಗಳನ್ನು ಎದುರಿಸುತ್ತಿದ್ದೇನೆ ಎಂಬ ಸಂದೇಶವನ್ನು ಪೈಲಟ್ ವಾಯು ನಿಯಂತ್ರಣ ಸಿಬ್ಬಂದಿಗೆ ನೀಡಿದ್ದರು ಹಾಗೂ ವಿಮಾನ ನಿಲ್ದಾಣಕ್ಕೆ ಹಿಂದಿರುಗಲು ಬಯಸಿದ್ದರು ಎಂದು ಇಥಿಯೋಪಿಯನ್ ಏರ್‌ಲೈನ್ಸ್ ಹೇಳಿದೆ.

ಅಡಿಸ್ ಅಬಾಬ ವಿಮಾನ ನಿಲ್ದಾಣಕ್ಕೆ ಹಿಂದಿರುಗಲು ಪೈಲಟ್‌ಗೆ ಅನುಮತಿ ನೀಡಲಾಗಿತ್ತು ಎಂದು ವಿಮಾನಯಾನ ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟೆವೊಲ್ಡೆ ಗೆಬ್ರೆ ಮರಿಯಮ್ ಅಡಿಸ್ ಅಬಾಬದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X