Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೇ.33ರ ಮಹಿಳಾ ಮೀಸಲಾತಿಗೂ ಮಹಿಳಾ...

ಶೇ.33ರ ಮಹಿಳಾ ಮೀಸಲಾತಿಗೂ ಮಹಿಳಾ ಸಂಗ್ರಾಮ ನಡೆಸಬೇಕು: ಮಾಜಿ ಸಚಿವೆ ಲಲಿತಾ ನಾಯಕ್

ವಾರ್ತಾಭಾರತಿವಾರ್ತಾಭಾರತಿ10 March 2019 11:25 PM IST
share
ಶೇ.33ರ ಮಹಿಳಾ ಮೀಸಲಾತಿಗೂ ಮಹಿಳಾ ಸಂಗ್ರಾಮ ನಡೆಸಬೇಕು: ಮಾಜಿ ಸಚಿವೆ ಲಲಿತಾ ನಾಯಕ್

ಮಂಡ್ಯ, ಮಾ.10: ಅಯ್ಯಪ್ಪ ದೇಗುಲ ಪ್ರವೇಶಕ್ಕಾಗಿ ನಡೆಸಿದ ಸಂಘಟನಾತ್ಮಕ ಹೋರಾಟದ ಮಾದರಿಯಲ್ಲೇ ಶೇ.33ರ ಮಹಿಳಾ ಮೀಸಲಾತಿಗೂ ರಾಷ್ಟ್ರೀಯ ಮಟ್ಟದ ಮಹಿಳಾ ಸಂಗ್ರಾಮ ನಡೆಸುವ ಅನಿವಾರ್ಯತೆ ಇದೆ ಎಂದು ಮಾಜಿ ಸಚಿವೆ ಬಿ.ಟಿ ಲಲಿತಾನಾಯಕ್ ಪ್ರತಿಪಾದಿಸಿದ್ದಾರೆ. 

ಜಿಲ್ಲಾ ಕಲಾವಿದರ ಟ್ರಸ್ಟ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಗಾಂಧಿ ಭವನದಲ್ಲಿ ರವಿವಾರ ನಡೆದ ಮಹಿಳಾ ಹಬ್ಬ, ಸಾಧಕಿಯರಿಗೆ ಜನಪರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಜಾತಿ, ಹಣಬಲ ಹಾಗೂ ಅಕ್ರಮದ ಮೇಲೆಯೇ ಇಂದಿನ ಚುನಾವಣೆಗಳು ನಡೆಯುತ್ತಿರುವುದರಿಂದ ಸಮರ್ಥ ಮಹಿಳೆಯರು ಚುನಾವಣೆ ಮೂಲಕ ಗೆಲ್ಲಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ರಾಜಕೀಯ ಅಸಮಾನತೆ ಸೃಷ್ಟಿಯಾಗಿದೆ. ಈ ಕಾರಣಕ್ಕಾಗಿಯೇ ಮಹಿಳೆಯರಿಗೆ ಸಂವಿಧಾನಾತ್ಮಕವಾದ ಮೀಸಲಾತಿ ದೊರೆಯಬೇಕಿದೆ ಎಂದರು.

ದೇಶದಲ್ಲಿ ಸಂವಿಧಾನ ಬರುವ ಮುನ್ನ ಮಹಿಳೆ ಮನು ಸಂಸ್ಕೃತಿಯಲ್ಲಿ ಬಹಳ ಹಿಂಸೆಯನ್ನು ಅನುಭವಿಸಿದ್ದಾಳೆ. ಈ ದೇಶವನ್ನು ಕಟ್ಟುವುದು ಹೇಗೆ ಎಂಬ ಚಿಂತನೆ ನಮ್ಮಲ್ಲಿ ಬಂದಾಗ ಮಾತ್ರ ಮಹಿಳೆ ಪ್ರಬಲಳಾಗುವುದಕ್ಕೆ ಸಾಧ್ಯ ಎಂದು ಅವರು ಅಭಿಪ್ರಾಯಿಸಿದರು. 

ನ್ಯೂಯಾರ್ಕ್‍ನಲ್ಲಿ ಜವಳಿ ಕಾರ್ಖಾನೆಯಲ್ಲಿ ದುಡಿಮೆ ಮಾಡುತ್ತಿದ್ದ ಮಹಿಳೆಯರು ಕಾರ್ಖಾನೆಯ ಕಿರುಕುಳ, ಹಿಂಸೆಯ ವಿರುದ್ಧ 19ನೇ ಶತಮಾನದಲ್ಲೇ ಹೋರಾಟ ಪ್ರಾರಂಭಿಸಿದರು. ಸಮಾನ ವೇತನ, ಕಡಿಮೆ ಅವಧಿ, ಇತರೆ ಬೇಡಿಕೆಗಳನ್ನು ಮುಂದಿಟ್ಟು ಜಯ ಗಳಿಸಿದ್ದರಿಂದ ಮಾ.8ರಂದು ವಿಶ್ವ ಮಹಿಳಾ ದಿನವನ್ನಾಗಿ ಆಚರಿಸುವ ಪದ್ಧತಿ ಬಂತು ಎಂದು ಅವರು ವಿವರಿಸಿದರು. 

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್ ಮಾತನಾಡಿ, ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರು ಪ್ರತಿನಿಧಿಸುತ್ತಿಲ್ಲ. ಇದು ಅವರ ರಾಜಕೀಯ ಹಿನ್ನಡೆಯನ್ನು ಬಿಂಬಿಸುತ್ತದೆ. ಮಹಿಳೆಯರು ರಾಜಕೀಯ ಮೀಸಲಾತಿಗಾಗಿ ದೇಶಾದ್ಯಂತ ಗಂಭೀರ ಹೋರಾಟ ನಡೆಸಬೇಕು. ಅದಕ್ಕೆ ನಮ್ಮ ಬೆಂಬಲವಿದೆ ಎಂದರು. 

ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಹೇಮಲತಾ ಬಸವರಾಜು, ನಗರಸಭಾ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಕ್ರೈಸ್ತ್ ಕಿಂಗ್ ಸಂಸ್ಧೆ ಕಾರ್ಯದರ್ಶಿ ವಿಜಯವಾಣಿ ಜೋಸೆಫ್, ಬೆಂಗಳೂರಿನ ಡಾ. ಜಯಮಾಲಾ, ಎಇಟಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ನಂದಿನಿ, ಪ್ರಗತಿಪರ ರೈತ ಮಹಿಳೆ ಎ.ಟಿ. ಶೈಲಜಾ ಅವರಿಗೆ ಜನಪರ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಭಾರತ್ ಪಾದಯಾತ್ರಿ ಟಿ. ವೀರಣ್ಣ, ಉದ್ಯಮಿ ಎಂ. ಮಹೇಂದ್ರ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಂ, ರೈತ ಸಂಘದ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್, ಜಿಲ್ಲಾ ಕಲಾವಿದರ ಟ್ರಸ್ಟ್ ಅಧ್ಯಕ್ಷ ಎನ್. ಜೈಕುಮಾರ್, ಜ್ಞಾನಸಿಂಧು ವೃದ್ಧಾಶ್ರಮದ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಕುಂಬಾರ ಜಾಗೃತ ವೇದಿಕೆ ಅಧ್ಯಕ್ಷ ಎಂ. ಕೃಷ್ಣ, ಮಾನವ ಹಕ್ಕುಗಳ ಸಮಿತಿಯ ಪೌಲ್ ಪೀಟರ್‍ಸನ್, ಬಂಜಾರ ವೆಂಕಟೇಶ್, ರಾಧಿಕಾ, ವಿಷ್ಣವರ್ಧನ್ ಸಂಘದ ಅಧ್ಯಕ್ಷ ವಿಷ್ಣುವಿಠಲ್, ಮುಖಂಡರಾದ ಸಿ.ಸಿದ್ದಶೆಟ್ಟಿ, ರಾಜೇಂದ್ರ ಇತರರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X