Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಯುದಾಳಿಯ ಏಕೈಕ ಉದ್ದೇಶ ಚುನಾವಣೆಯ...

ವಾಯುದಾಳಿಯ ಏಕೈಕ ಉದ್ದೇಶ ಚುನಾವಣೆಯ ಗೆಲುವು: ಫಾರೂಕ್ ಅಬ್ದುಲ್ಲಾ

ವಾರ್ತಾಭಾರತಿವಾರ್ತಾಭಾರತಿ11 March 2019 10:05 PM IST
share
ವಾಯುದಾಳಿಯ ಏಕೈಕ ಉದ್ದೇಶ ಚುನಾವಣೆಯ ಗೆಲುವು: ಫಾರೂಕ್ ಅಬ್ದುಲ್ಲಾ

ಶ್ರೀನಗರ, ಮಾ.11: ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಏಕೈಕ ಉದ್ದೇಶ ಇರಿಸಿಕೊಂಡು ಕೇಂದ್ರ ಸರಕಾರ ಬಾಲಕೋಟ್ ವಾಯುದಾಳಿಗೆ ಆದೇಶ ನೀಡಿತ್ತು ಎಂದು ಎನ್‌ಸಿ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಆರೋಪಿಸಿದ್ದಾರೆ.

ಎಲ್ಲಾ ರಂಗದಲ್ಲೂ ವಿಫಲವಾಗಿರುವ ಬಿಜೆಪಿ, ಚುನಾವಣೆಗೂ ಮುನ್ನ ಪಾಕಿಸ್ತಾನದೊಂದಿಗೆ ಕದನ ನಡೆಸಲಿದೆ ಎಂಬುದನ್ನು ಮೊದಲೇ ಊಹಿಸಲಾಗಿತ್ತು. ಈ ಮೂಲಕ ಮೋದಿ ದೇಶವನ್ನು ರಕ್ಷಿಸಲು ಬಂದಿರುವ ಅವತಾರ ಪುರುಷ ಮತ್ತು ಅವರಿಲ್ಲದೆ ದೇಶ ಉಳಿಯದು ಎಂದು ಬಿಂಬಿಸುವ ಹುನ್ನಾರವಿದೆ. ಆದರೆ ಒಂದು ಮಾತನ್ನು ಮೋದಿಗೆ ನೆನಪಿಸ ಬಯಸುತ್ತೇನೆ. ಮೋದಿ ಅಥವಾ ನಾನು ಬದುಕುಳಿಯುತ್ತೇನೋ ಇಲ್ಲವೋ ಅದು ಬೇರೆ ವಿಷಯ, ಆದರೆ ಭಾರತ ಉಳಿಯಲಿದೆ ಮತ್ತು ಮುನ್ನಡೆಯಲಿದೆ ಎಂದು ಅಬ್ದುಲ್ಲಾ ಹೇಳಿದರು.

ಚುನಾವಣೆಯ ಏಕೈಕ ದೃಷ್ಟಿಯಿಂದ ನಡೆಸಲಾದ ಸರ್ಜಿಕಲ್ ದಾಳಿಯಿಂದ ದೇಶದ ಕೋಟ್ಯಾಂತರ ರೂಪಾಯಿ ವೌಲ್ಯದ ವಿಮಾನ ನಷ್ಟವಾಗಿದೆ. ಯುದ್ಧದ ಭಯ ಹರಡಿ ದೇಶದೆಲ್ಲೆಡೆ ಭೀತಿಯ ವಾತಾವರಣ ಮೂಡಿಸಲು ಅವರು ಬಯಸುತ್ತಿದ್ದಾರೆ. ಮೋದಿ ಇಲ್ಲದಿದ್ದರೆ ದೇಶ ಅಪಾಯಕ್ಕೆ ಸಿಲುಕಲಿದೆ ಎಂಬ ಭಾವನೆ ಮೂಡಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಮೋದಿ ದೇವರಲ್ಲ ಎಂದು ಅವರಿಗೆ ನೆನಪಿಸಬಯಸುತ್ತೇನೆ ಎಂದು ಫಾರೂಕ್ ಹೇಳಿದರು.

ಮೋದಿ ಸರಕಾರ ಕಾಶ್ಮೀರದ ವಿಷಯವನ್ನು ಈಗ ಅಂತರಾಷ್ಟ್ರೀಯ ಮಟ್ಟದ ಸುದ್ದಿಯನ್ನಾಗಿಸಿದೆ. ಇದೀಗ ಭಾರತ-ಪಾಕಿಸ್ತಾನ ದೇಶಗಳು ಕಾಶ್ಮೀರದ ವಿಷಯದಲ್ಲಿ ಚರ್ಚೆ ನಡೆಸಬೇಕೆಂಬ ಒತ್ತಾಯಕ್ಕೆ ಹಲವು ದೇಶಗಳು ಧ್ವನಿಗೂಡಿಸುವಂತಾಗಿದೆ. ಒಂದಂತೂ ಸತ್ಯ, ಉಭಯ ರಾಷ್ಟ್ರಗಳ ನಡುವಿನ ಮಾತುಕತೆಯೇ ಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕೆ ಇರುವ ಏಕೈಕ ಮಾರ್ಗವಾಗಿದೆ ಎಂದರು. ಕಾಶ್ಮೀರ ವಿಧಾನಸಭೆಗೆ ಈಗ ಚುನಾವಣೆ ನಡೆಸದಿರುವ ಆಯೋಗದ ನಿರ್ಧಾರವನ್ನು ಉಲ್ಲೇಖಿಸಿದ ಅವರು, ಇದರ ಹಿಂದೆ ಕೇಂದ್ರ ಸರಕಾರದ ಕೈವಾಡವಿದೆ. ಅವರು(ಕೇಂದ್ರ ಸರಕಾರ) ಕಾಶ್ಮೀರದಲ್ಲಿ ಯಾವುದೋ ಕೇಡಿನ ಕೃತ್ಯದ ಹುನ್ನಾರ ನಡೆಸಿರಬಹುದು. ಆದರೆ ವಿಪಕ್ಷಗಳು ಒಗ್ಗೂಡಿದರೆ ಅವರ ಸಂಚು ವಿಫಲವಾಗುತ್ತದೆ. ತಾನು ಬಲಿಷ್ಟ ಎಂದು ಹೇಳಿಕೊಳ್ಳುತ್ತಿರುವ ಕೇಂದ್ರ ಸರಕಾರ ರಾಜ್ಯದಲ್ಲಿ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿರುವುದೇಕೆ. ಇದು ಶರಣಾಗತಿಯಲ್ಲದೆ ಮತ್ತೇನು ಎಂದವರು ಪ್ರಶ್ನಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X