Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಮ್ಮಾಡಿ ಒಂಟಿ ಮಹಿಳೆ ಕೊಲೆ ಪ್ರಕರಣ:...

ಹೆಮ್ಮಾಡಿ ಒಂಟಿ ಮಹಿಳೆ ಕೊಲೆ ಪ್ರಕರಣ: ಆರೋಪಿ ಬಂಧನ

ಚಿನ್ನಾಭರಣಕ್ಕಾಗಿ ಕೃತ್ಯ, ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ

ವಾರ್ತಾಭಾರತಿವಾರ್ತಾಭಾರತಿ11 March 2019 10:14 PM IST
share
ಹೆಮ್ಮಾಡಿ ಒಂಟಿ ಮಹಿಳೆ ಕೊಲೆ ಪ್ರಕರಣ: ಆರೋಪಿ ಬಂಧನ

ಕುಂದಾಪುರ, ಮಾ.11: ಹೆಮ್ಮಾಡಿ ಸಮೀಪದ ಹರೆಗೋಡು ಸುಳ್ಸೆ ಒಂಟಿ ಮಹಿಳೆಯ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಕುಂದಾ ಪುರ ಪೊಲೀಸರು, ಈ ಸಂಬಂಧ ಓರ್ವನನ್ನು ಬಂಧಿಸಿದ್ದಾರೆ.

ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಸೋಮವಾರ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಬಂಧಿತನನ್ನು ಕುಂದಾಪುರ ಜಡ್ಕಲ್ ಗ್ರಾಮದ ಸುಳ್ಕೋಡು ನಿವಾಸಿ ರವಿರಾಜ್ (31) ಎಂದು ಗುರುತಿಸಲಾಗಿದೆ.

ಈತನನ್ನು ಮಾ.11 ರಂದು ಬೆಳಗ್ಗೆ 7.45ರ ಸುಮಾರಿಗೆ ಸಿದ್ಧಾಪುರ ಪೆಟ್ರೋಲ್ ಬಂಕ್ ಬಳಿ ಬಂಧಿಸಿ, ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಮನೆಯಲ್ಲಿ ಒಂಟಿಯಾಗಿದ್ದ ಗುಲಾಬಿ ಮಾ.1ರಂದು ಬೆಳಗ್ಗೆ ಅನುಮಾಸ್ಪದವಾಗಿ ಮೃತಪಟ್ಟಿದ್ದು, ಅವರ ಮೈ ಮೇಲೆ ಇದ್ದ 2. 70 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಕಳವು ಆಗಿರುವುದು ಕಂಡುಬಂದಿತ್ತು. ಬಳಿಕ ನಡೆದ ಮರಣೋತ್ತರ ಪರೀಕ್ಷೆಯಲ್ಲಿ ಗುಲಾಬಿ ಅವರನ್ನು ಕೊಲೆ ಮಾಡಿರುವುದು ದೃಢಪಟ್ಟಿತ್ತು.

ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗಾಗಿ ಎಸ್ಪಿ ನಿಶಾ ಜೇಮ್ಸ್ ಹಾಗೂ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಕುಂದಾಪುರ ಡಿವೈಎಸ್ಪಿ ಬಿ.ಪಿ.ದಿನೇಶ್ ಕುಮಾರ್, ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್. ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ತನಿಖೆ ನಡೆಸಿದ ತಂಡವು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು.

ಚಿನ್ನಾಭರಣಕ್ಕಾಗಿ ಕೊಲೆ

ರವಿರಾಜ್ ಪತ್ನಿ ಗುಲಾಬಿ ಮನೆಯ ಸಮೀಪದಲ್ಲೇ ಇರುವ ಗೇರುಬೀಜ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಫ್ಯಾಕ್ಟರಿಯವರು ನೀಡಿದ ವಸತಿಗೃಹದಲ್ಲಿ ರವಿರಾಜ್ ಪತ್ನಿ ಜೊತೆ ವಾಸವಾಗಿದ್ದನು. ಹೀಗೆ 2008ರಿಂದ ರವಿರಾಜ್‌ಗೆ ಗುಲಾಬಿ ಅವರ ಪರಿಚಯ ಇತ್ತೆನ್ನಲಾಗಿದೆ. ಅಲ್ಲದೆ ಗುಲಾಬಿ ಹಾಗೂ ರವಿರಾಜ್ ಮಧ್ಯೆ ಹಣಕಾಸಿನ ವ್ಯವಹಾರ ಕೂಡ ನಡೆಯುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಕೆಲಸ ಇಲ್ಲದೆ ತಿರುಗಾಡುತ್ತಿದ್ದ ರವಿರಾಜ್ ಹಣಕಾಸಿನ ಸಮಸ್ಯೆಗೆ ಒಳಗಾಗಿದ್ದನು. ಈ ಹಿನ್ನೆಲೆಯಲ್ಲಿ ರವಿರಾಜ್ ಫೆ. 28ರಂದು ಮಧ್ಯರಾತ್ರಿ ಗುಲಾಬಿ ಅವರ ಮನೆಗೆ ಹೋಗಿದ್ದು, ಗುಲಾಬಿ ಅವರಲ್ಲಿ ಅಡವಿರಿಸಲು ಚಿನ್ನಾಭರಣ ನೀಡುವಂತೆ ಕೇಳಿದ್ದನು. ಇದನ್ನು ನೀಡಲು ಒಪ್ಪದ ಗುಲಾಬಿಯ ಕುತ್ತಿಗೆಗೆ ತನ್ನ ಕೈಯಲ್ಲಿದ್ದ ಟವಲ್ ಹಾಕಿ ಬಿಗಿದು ಉಸಿರು ಕಟ್ಟಿಸಿ ಕೊಲೆ ಮಾಡಿದ್ದನು. ಬಳಿಕ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಚಿನ್ನದ ಕಿವಿಯ ಓಲೆ ಹಾಗೂ ಉಂಗುರವನ್ನು ಕಳವು ಮಾಡಿ, ನಂತರ ಅವುಗಳನ್ನು ಬೆಂಗಳೂರು ಹಾಗೂ ಕುಂದಾಪುರದಲ್ಲಿ ಅಡವಿರಿಸಿಕೊಂಡಿದ್ದ ಎಂದು ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ.

ಈ ತಂಡದಲ್ಲಿ ಕುಂದಾಪುರ ಗ್ರಾಮಾಂತ ಠಾಣಾಧಿಕಾರಿ ಶ್ರೀಧರ್ ನಾಯ್ಕಾ, ಕುಂದಾಪುರ ಠಾಣಾಧಿಕಾರಿ ಹರೀಶ್, ಸಿಬ್ಬಂದಿಗಳಾದ ವೆಂಕಟರಮಣ ದೇವಾಡಿಗ, ಮಂಜುನಾಥ್, ಮೋಹನ್ ಶಿರೂರು, ಸಂತೋಷ್, ಮಧು, ಸಂತೋಷ್ ಕುಮಾರ್, ರತ್ನಾಕರ್ ಶೆಟ್ಟಿ, ಸಂತೋಷ್ ಕೊರವಾಡಿ, ಸುಜಿತ್, ಆದರ್ಶ್, ಚಂದ್ರಶೇಖರ್, ಶ್ರೀಧರ, ವಿಜಯ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಶಿವಾನಂದ ಸಹಕರಿಸಿದ್ದು.

ರವಿರಾಜ್ ಪತ್ನಿಗೆ ಆಕ್ರೋಶಿತರಿಂದ ಹಲ್ಲೆ

ಬಂಧಿತ ಆರೋಪಿ ರವಿರಾಜ್‌ನನ್ನು ಇಂದು ಮಧ್ಯಾಹ್ನ ವೇಳೆ ಪೊಲೀಸರು ಮಹಜರು ನಡೆಸಲು ಮೃತ ಗುಲಾಬಿ ಅವರ ಮನೆಗೆ ಕರೆತಂದಿದ್ದರು. ಈ ಸಂದರ್ಭದಲ್ಲಿ ಅಲ್ಲೇ ಸಮೀಪದ ವಸತಿಗೃಹದಲ್ಲಿದ್ದ ರವಿರಾಜ್ ಪತ್ನಿ ಕೂಡ ಅಲ್ಲಿಗೆ ಬಂದಿದ್ದರು. ತನ್ನ ಪತಿ ಈ ಕೃತ್ಯದಲ್ಲಿ ಭಾಗಿಯಾಗಿರುವುದು ತಿಳಿಯದ ಪತ್ನಿ, ವಿಷಯ ತಿಳಿದು ವಿಚಾರಿಸಲು ಬಂದಿದ್ದರೆನ್ನಲಾಗಿದೆ. ಈ ವೇಳೆ ಆಕ್ರೋಶ ಗೊಂಡ ಗುಲಾಬಿ ಅವರ ಕುಟುಂಬದ ಮಹಿಳೆಯರು ರವಿರಾಜ್ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು, ಆಕೆಯನ್ನು ಅಲ್ಲಿಂದ ಕಳುಹಿಸಿಕೊಟ್ಟರು ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X