Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀರವ್ ಮೋದಿ ಬಂಧನಕ್ಕೆ ಇಂಗ್ಲೆಂಡ್ ದಾಖಲೆ...

ನೀರವ್ ಮೋದಿ ಬಂಧನಕ್ಕೆ ಇಂಗ್ಲೆಂಡ್ ದಾಖಲೆ ಕೇಳಿತ್ತು, ಭಾರತ ಪ್ರತಿಕ್ರಿಯಿಸಿರಲಿಲ್ಲ !

ಎನ್ ಡಿಟಿವಿ ವರದಿ

ವಾರ್ತಾಭಾರತಿವಾರ್ತಾಭಾರತಿ11 March 2019 10:54 PM IST
share
ನೀರವ್ ಮೋದಿ ಬಂಧನಕ್ಕೆ ಇಂಗ್ಲೆಂಡ್ ದಾಖಲೆ ಕೇಳಿತ್ತು, ಭಾರತ ಪ್ರತಿಕ್ರಿಯಿಸಿರಲಿಲ್ಲ !

 ಹೊಸದಿಲ್ಲಿ, ಮಾ. 11: ದೇಶದಿಂದ ಪರಾರಿಯಾಗಿರುವ ವಜ್ರೋದ್ಯಮಿ ನೀರವ್ ಮೋದಿ ದುಬಾರಿ ಆಸ್ಟ್ರಿಚ್-ಗರಿಗಳ ಜಾಕೆಟ್ ಹಾಕಿಕೊಂಡು ಕಳೆದ ವಾರ ಲಂಡನ್ ಬೀದಿಯಲ್ಲಿ ತಿರುಗುತ್ತಿದ್ದ ಸಂದರ್ಭ ಭಾರತ ಸರಕಾರ, ನೀರವ್ ಮೋದಿಯನ್ನು ಗಡಿಪಾರು ಮಾಡಲು ವಿಚಾರಣೆ ನಡೆಸುವ ಪ್ರಯತ್ನ ಭಾರತದ ಭಾಗದಲ್ಲಿ ಯಾವುದೇ ವಿಳಂಬ ಆಗಲಾರದು ಎಂದು ಹೇಳಿದೆ. ಆದರೆ, ಈ ಎರಡೂ ಸನ್ನಿವೇಶ  ವಿರೋಧಾಬಾಸದಂತೆ ಕಾಣುತ್ತಿದೆ. ಬ್ರಿಟಿಶ್ ಪ್ರಾಧಿಕಾರ ಮಾಹಿತಿಗಾಗಿ ಹಲವು ಪ್ರಶ್ನೆಗಳನ್ನು ಭಾರತಕ್ಕೆ ಕಳುಹಿಸಿಕೊಟ್ಟಿತ್ತು. ಆದರೆ, ಭಾರತದಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಇದಲ್ಲದೆ, ನೀರವ್ ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ನೆರವು ನೀಡಲು ಭಾರತಕ್ಕೆ ಆಗಮಿಸಬೇಕೇ ಎಂದು ಇಂಗ್ಲೆಂಡ್‌ನ ಕಾನೂನು ತಜ್ಞರ ತಂಡ ಭಾರತವನ್ನು ಕೇಳಿತ್ತು. ಆದರೆ, ಅದಕ್ಕೂ ಭಾರತ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

2018 ಫೆಬ್ರವರಿಯಲ್ಲಿ ಪರಸ್ಪರ ಕಾನೂನು ನೆರವು ಒಪ್ಪಂದ (ಎಂಎಲ್‌ಎಟಿ) ಅಡಿಯಲ್ಲಿ ಭಾರತ ಮೊದಲ ಬಾರಿಗೆ ಇಂಗ್ಲೆಂಡ್‌ಗೆ ನೀರವ್ ಮೋದಿ ಬಗ್ಗೆ ಮುನ್ನೆಚ್ಚರಿಕೆ ರವಾನಿಸಿತ್ತು. ಈ ಮುನ್ನೆಚ್ಚರಿಕೆ ರವಾನಿಸಿರುವುದು ಪಂಜಾಬ್ ನ್ಯಾಶನಲ್ ಬ್ಯಾಂಕ್ ಹಗರಣದಲ್ಲಿ 13 ಸಾವಿರ ಕೋಟಿ ರೂ. ವಂಚಿಸಿದ ನೀರವ್ ಮೋದಿ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಸಿಬಿಐ ಕ್ರಿಮಿನಲ್ ಪ್ರಕರಣ ದಾಖಲಿಸಿದ ಬಳಿಕ ಎಂಬುದನ್ನು ಲಂಡನ್‌ನ ಗಂಭೀರ ವಂಚನೆ ಕಚೇರಿ (ಎಸ್‌ಎಫ್‌ಒ)ಯಿಂದ ಎನ್‌ಡಿಟಿವಿಗೆ ತಿಳಿದು ಬಂದಿತ್ತು. ವಿದೇಶದಲ್ಲಿರುವ ಅಪರಾಧಿಗಳನ್ನು ಬಂಧಿಸಲು ಈ ಹಿಂದಿನ ಕಾನೂನು ನೆರವು ಪ್ರಯಾಸದಿಂದ ಕೂಡಿತ್ತು ಹಾಗೂ ಸಮಯ ತೆಗದುಕೊಳ್ಳುತ್ತಿತ್ತು. ಆದರೆ, ಕಾನೂನು ನೆರವು ಒಪ್ಪಂದ (ಎಂಎಲ್‌ಎಟಿ) ದಂತೆ ಗೃಹ ಸಚಿವಾಲಯ ನೇರವಾಗಿ ಸಮನ್ಸ್ ಅಥವಾ ವಾರಂಟ್ ಅನ್ನು ಲಂಡನ್‌ಲ್ಲಿರುವ ಹೈಕಮಿಷನ್‌ಗೆ ರವಾನಿಸಬಹುದಿತ್ತು. ಅದು ಅನಂತರ ಕೇಂದ್ರ ಪ್ರಾಧಿಕಾರಕ್ಕೆ ರವಾನೆಯಾಗುತ್ತಿತ್ತು. ನೀರವ್ ಮೋದಿ ಪ್ರಕರಣ ನಿಭಾಯಿಸಲು ಗಂಭೀರ ವಂಚನೆಗಳ ಕಚೇರಿ (ಎಸ್‌ಎಫ್‌ಒ)ಗೆ ವರ್ಗಾ ಯಿಸುವುದು ಉತ್ತಮ ಎಂದು ಬ್ರಿಟನ್ ಕೇಂದ್ರ ಪ್ರಾಧಿಕಾರ ನಿರ್ಧರಿಸಿತ್ತು.

ನೀರವ್ ಮೋದಿ ಇಂಗ್ಲೆಂಡ್‌ನಲ್ಲಿ ಇದ್ದಾರೆ ಎಂದು ಎಸ್‌ಎಫ್‌ಒ ಮಾರ್ಚ್‌ನಲ್ಲಿ ಭಾರತಕ್ಕೆ ದೃಢಪಡಿಸಿತ್ತು. ಅದಕ್ಕಿಂತ ಮೊದಲು ನೀರವ್ ಮೋದಿ ಯುರೋಪ್‌ನಲ್ಲಿದ್ದಾರೋ ಹಾಂಗ್‌ಕಾಂಗ್‌ನಲ್ಲಿದ್ದಾರೊ ಎಂಬ ಬಗ್ಗೆ ನಿರ್ಧರಿಸುವಲ್ಲಿ ಭಾರತ ಗೊಂದಲಕ್ಕೆ ಒಳಗಾಗಿತ್ತು. ಇದಾದ ಒಂದು ತಿಂಗಳ ಬಳಿಕ ಇಂಗ್ಲೆಂಡ್ ಅದನ್ನು ದೃಢಪಡಿಸಿತ್ತು. ಈ ಪ್ರಕರಣದಲ್ಲಿ ಭಾರತಕ್ಕೆ ನರೆವು ನೀಡಲು ಇಂಗ್ಲೆಂಡ್ ಎಸ್‌ಎಫ್‌ಒ ವಕೀಲ ಬೆರ್ರಿ ಸ್ಟಾನ್‌ಕೋಂಬೆ ಅವರನ್ನು ನಿಯೋಜಿಸಿತ್ತು.

ಭಾರತದ ಮನವಿಯನ್ನು ಪರಿಶೀಲಿಸಿದ ವಕೀಲ ಸ್ಟಾನ್‌ಕೋಂಬೆ ಹಾಗೂ ತಂಡ ಇನ್ನಷ್ಟು ದಾಖಲೆಗಳ ಅಗತ್ಯತೆ ಇದೆ ಎಂದು ಮನಗಂಡಿತ್ತು. ಅದಕ್ಕಾಗಿ ವಕೀಲರ ತಂಡ ಭಾರತಕ್ಕೆ ಮೂರು ಪತ್ರ ಬರೆದಿತ್ತು. ಆದರೆ, ಭಾರತ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ನೀರವ್ ಮೋದಿಯನ್ನು ಬಂಧಿಸಲು ಸಾಧ್ಯವಾಗುವಂತೆ ಪುರಾವೆಗಳನ್ನು ಸಂಗ್ರಹಿಸಲು ಭಾರತಕ್ಕೆ ಭೇಟಿ ನೀಡುವ ಇಚ್ಛೆಯನ್ನು ಕೂಡ ವಕೀಲರ ತಂಡ ವ್ಯಕ್ತಪಡಿಸಿತ್ತು. ಆದರೆ, ಭಾರತ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ ಎಂದು ಎನ್‌ಡಿಟಿವಿಗೆ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X