Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಂತ್ ಕಳಪೆ ವಿಕೆಟ್‌ಕೀಪಿಂಗ್: ಧೋನಿ ಕರೆ...

ಪಂತ್ ಕಳಪೆ ವಿಕೆಟ್‌ಕೀಪಿಂಗ್: ಧೋನಿ ಕರೆ ತನ್ನಿ ಎಂದ ಕ್ರಿಕೆಟ್ ಅಭಿಮಾನಿ

ವಾರ್ತಾಭಾರತಿವಾರ್ತಾಭಾರತಿ11 March 2019 11:40 PM IST
share
ಪಂತ್ ಕಳಪೆ ವಿಕೆಟ್‌ಕೀಪಿಂಗ್: ಧೋನಿ ಕರೆ ತನ್ನಿ ಎಂದ ಕ್ರಿಕೆಟ್ ಅಭಿಮಾನಿ

ಮೊಹಾಲಿ, ಮಾ.11: ಆಸ್ಟ್ರೇಲಿಯ ವಿರುದ್ಧ ರವಿವಾರ ಇಲ್ಲಿನ ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್‌ನ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಭಾರತ ನಾಲ್ಕನೇ ಪಂದ್ಯ ಆಡುತ್ತಿದ್ದಾಗ ನೆರೆದಿದ್ದ ಪ್ರೇಕ್ಷಕರು ಧೋನಿ ಪರ ಘೋಷಣೆ ಮೊಳಗಿಸಿದರು. ಯುವ ವಿಕೆಟ್‌ಕೀಪರ್ ರಿಷಭ್ ಪಂತ್ ನಿರ್ಣಾಯಕ ಸಂದರ್ಭದಲ್ಲಿ ವಿಕೆಟ್‌ಕೀಪಿಂಗ್‌ನಲ್ಲಿ ಕೆಲವು ತಪ್ಪೆಸಗಿದಾಗ ಧೋನಿಗಾಗಿ ಅಭಿಮಾನಿಗಳ ಆಗ್ರಹವು ಮುಗಿಲು ಮುಟ್ಟಿತು.

ಭಾರತ ನಾಯಕ ವಿರಾಟ್ ಕೊಹ್ಲಿ ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್ ನಿರತರಾಗಿದ್ದಾಗ ಕ್ರಿಕೆಟ್ ಅಭಿಮಾನಿಯೊಬ್ಬ, ‘‘ವಿರಾಟ್ ಭಾಯ್, ಧೋನಿ ಕೋ ಬುಲಾವ್(ಧೋನಿಯನ್ನು ಮತ್ತೆ ಕರೆ ತನ್ನಿ)ಎಂಬ ಬೇಡಿಕೆ ಇಡುತ್ತಿದ್ದ ವೀಡಿಯೊ ವೈರಲ್ ಆಗಿದೆ. ಭಾರತ 4ನೇ ಏಕದಿನ ಪಂದ್ಯದಲ್ಲಿ ಬೃಹತ್ ಮೊತ್ತ ಗಳಿಸಿದ ಹೊರತಾಗಿಯೂ 4 ವಿಕೆಟ್‌ಗಳಿಂದ ಸೋಲುಂಡಿತ್ತು. ಪ್ರವಾಸಿ ಆಸೀಸ್ ತಂಡ 5 ಪಂದ್ಯಗಳ ಸರಣಿಯನ್ನು 2-2 ರಿಂದ ಸಮಬಲಗೊಳಿಸಿತ್ತು.

ದಿಲ್ಲಿಯ ಆಟಗಾರ ರಿಷಭ್ ಪಂತ್ ಇನಿಂಗ್ಸ್‌ನ 44ನೇ ಓವರ್‌ನಲ್ಲಿ ಆಸ್ಟ್ರೇಲಿಯದ ಮ್ಯಾಚ್ ವಿನ್ನರ್ ಆ್ಯಶ್ಟನ್ ಟರ್ನರ್ 38 ರನ್ ಗಳಿಸಿ ಆಡುತ್ತಿದ್ದಾಗ ಕೀಪಿಂಗ್‌ನಲ್ಲಿ ದೊಡ್ಡ ಪ್ರಮಾದ ಎಸಗಿದ್ದರು. ಯಜುವೇಂದ್ರ ಚಹಾಲ್ ಅವರು ಚೆಂಡನ್ನು ಲೆಗ್‌ಸೈಡ್‌ನಲ್ಲಿ ಎಸೆದಿದ್ದರು. ಆಗ ಟರ್ನರ್ ಮುನ್ನುಗ್ಗಿ ಆಡಲು ಮುಂದಾದರು. ಆಗ ಚೆಂಡನ್ನು ಪಡೆಯಲು ವಿಫಲವಾದ ಪಂತ್ ಸ್ಟಂಪಿಂಗ್ ಅವಕಾಶವನ್ನು ಕೈಚೆಲ್ಲಿದ್ದರು. ಆಗ ಮೊಹಾಲಿ ಪ್ರೇಕ್ಷಕರು ಪಂತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ, ಧೋನಿ ಹೆಸರನ್ನು ಕೂಗತೊಡಗಿದರು. 4ನೇ ಏಕದಿನ ಪಂದ್ಯದ ಬ್ಯಾಟಿಂಗ್ ಹೀರೋ ಶಿಖರ್ ಧವನ್, ಪಂತ್ ಸಮರ್ಥನೆಗೆ ಮುಂದಾಗಿದ್ದು, ‘‘ರಿಷಭ್ ಯುವ ಆಟಗಾರ. ಇತರ ಯುವ ಆಟಗಾರರಂತೆ ಆತನಿಗೂ ಸ್ವಲ್ಪ ಸಮಯಾವಕಾಶ ನೀಡಬೇಕು. ರಿಷಭ್ ಈಗಷ್ಟೇ ಕಾಲೂರುತ್ತಿದ್ದಾರೆ. ಅವರನ್ನು ಧೋನಿಗೆ ಹೋಲಿಸಲು ಸಾಧ್ಯವಿಲ್ಲ. ಇನ್ನಷ್ಟು ವರ್ಷ ಆಡಿದರೆ ಅನುಭವ ಪಡೆಯುತ್ತಾರೆ’’ ಎಂದರು.

ಭಾರತ-ಆಸೀಸ್ ಮಧ್ಯೆ ಸರಣಿ ನಿರ್ಣಾಯಕ 5ನೇ ಪಂದ್ಯ ಬುಧವಾರ ಹೊಸದಿಲ್ಲಿಯ ಫಿರೋಝ್ ಶಾ ಕೋಟ್ಲಾ ಸ್ಟೇಡಿಯಂನಲ್ಲಿ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X