Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.13ರಂದು ಶ್ರೀಕೃಷ್ಣ ಮಠದ ಸುವರ್ಣ...

ಮಾ.13ರಂದು ಶ್ರೀಕೃಷ್ಣ ಮಠದ ಸುವರ್ಣ ಗೋಪುರ ಕಾರ್ಯಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ12 March 2019 6:15 PM IST
share
ಮಾ.13ರಂದು ಶ್ರೀಕೃಷ್ಣ ಮಠದ ಸುವರ್ಣ ಗೋಪುರ ಕಾರ್ಯಕ್ಕೆ ಚಾಲನೆ

ಉಡುಪಿ, ಮಾ. 12: ಪರ್ಯಾಯ ಪಲಿಮಾರು ಮಠದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಶ್ರೀಕೃಷ್ಣ ಮಠದ ಗರ್ಭಗುಡಿಯ ಮೇಲ್ಛಾವಣಿಯನ್ನು ಸುವರ್ಣಮಯ ಗೋಪುರವನ್ನಾಗಿಸುವ ಕಾರ್ಯಕ್ಕೆ ಮಾ.13ರಂದು ವಿದ್ಯುಕ್ತ ಚಾಲನೆ ದೊರೆಯಲಿದೆ.

ಬುಧವಾರ ಮುಂಜಾನೆಯಿಂದ ಮಧ್ಯಾಹ್ನದವರೆಗಿನ ಪೂಜೆಗಳನ್ನು ಬೆಳಗ್ಗೆ 11ಗಂಟೆಗೆ ಮುಗಿಸಿ, ಗರ್ಭಗೃಹದ ಬಾಗಿಲು ಮುಚ್ಚಿದ ಬಳಿಕ ಮಾಡಿನ ಕೆಲಸ ಆರಂಭಿಸಲಾಗುವುದು. ಸಂಜೆ 5ಗಂಟೆಗೆ ಕೆಲಸವನ್ನು ಮುಗಿಸಿ ರಾತ್ರಿ ಪೂಜೆಯ ಬಳಿಕ ಅಗತ್ಯ ಇದ್ದಲ್ಲಿ ಮತ್ತೆ ರಾತ್ರಿ ಕೆಲಸ ಮುಂದುವರಿಸಲಾಗುವುದು ಎಂದು ಪರ್ಯಾಯ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಸುದ್ದಿಗಾರರಿಗೆ ತಿಳಿಸಿದರು.

ಸುವರ್ಣ ಗೋಪುರದ ಕೆಲಸದಿಂದ ಶ್ರೀಕೃಷ್ಣ ದೇವರಿಗೆ ನಿತ್ಯ ನಡೆಯುವ ಎಲ್ಲ ಸೇವೆಗಳು ಅಬಾಧಿತವಾಗಿ ನಡೆಯಲಿದ್ದು, ಉತ್ಸವಾದಿಗಳು ಯಥಾ ಪ್ರಕಾರ ನಡೆಯಲಿವೆ. ಆದರೆ ಸಮಯದಲ್ಲಿ ಬದಲಾವಣೆ ಮಾಡಲಾಗುತ್ತದೆ. ಇದರಿಂದ ಭಕ್ತರಿಗೆ ಶ್ರೀದೇವರ ದರ್ಶನಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ವಾಸ್ತುತಜ್ಞ ಸುಬ್ರಹ್ಮಣ್ಯ ಅವದಾನಿ ಹೇಳಿದರು.

ಗೋಪುರದ ಉಸ್ತುವಾರಿ ವೆಂಕಟೇಶ್ ಶೇಟ್ ಮಾತನಾಡಿ, ಮೊದಲ ಹಂತ ದಲ್ಲಿ 1100 ಚದರ ಅಡಿ ವಿಸ್ತ್ರೀರ್ಣದ ಮೇಲಿನ ಮಾಡು ಮತ್ತು ಎರಡನೆ ಹಂತದಲ್ಲಿ 1200 ಚದರ ಅಡಿ ವಿಸ್ತ್ರೀರ್ಣದ ಕೆಳಗಿನ ಮಾಡಿನ ಕೆಲಸ ನಡೆಸಲಾಗುವುದು. ಗೋಪುರದ ಮೇಲ್ಛಾವಣಿಯಲ್ಲಿ ಮರ, ತಾಮ್ರದ ಹೊದಿಕೆ, ನಂತರ ಬೆಳ್ಳಿ ಶೀಟುಗಳನ್ನು ಹಾಕಿ ಮೇಲೆ ಚಿನ್ನವನ್ನು ಹಾಕಲಾಗುವುದು ಎಂದು ತಿಳಿಸಿದರು.

ಸುವರ್ಣ ಗೋಪುರಕ್ಕೆ ಒಟ್ಟು 23 ಕ್ಯಾರೆಟ್‌ನ 100 ಕೆ.ಜಿ. ಚಿನ್ನ, 800 ಕೆ.ಜಿ. ಬೆಳ್ಳಿ, 100 ಕೆ.ಜಿ. ತಾಮ್ರವನ್ನು ಬಳಸಲಾಗುತ್ತಿದೆ. ಈಗಾಗಲೇ ಶೇ.70 ರಷ್ಟು ಚಿನ್ನ ಸಂಗ್ರಹವಾಗಿದೆ. ಹೊದಿಕೆಯಲ್ಲಿ 14 ಇಂಚಿನ ಒಂದು ಶೀಟಿನಲ್ಲಿ 20ಗ್ರಾಂ ಚಿನ್ನ, 160 ಗ್ರಾಂ ಬೆಳ್ಳಿ ಇರುತ್ತದೆ. ಇಂತಹ 5000 ಶೀಟುಗಳನ್ನು ಬಳಸಲಾಗುತ್ತದೆ. 15 ಮಂದಿ ಬಂಗಾರದ ಕೆಲಸದಲ್ಲಿ ಹಾಗೂ 10 ಮಂದಿ ಮರದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮುಂದಿನ ಮೂರು ತಿಂಗಳಲ್ಲಿ ಸುವರ್ಣ ಗೋಪುರದ ಕಾರ್ಯ ಪೂರ್ಣಗೊಳಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X