Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅರಣ್ಯವಾಸಿಗಳ ಒಕ್ಕಲ್ಲೆಬ್ಬಿಸುವ...

ಅರಣ್ಯವಾಸಿಗಳ ಒಕ್ಕಲ್ಲೆಬ್ಬಿಸುವ ವಿಚಾರದಲ್ಲಿ ಜನಪ್ರತಿನಿಧಿಗಳು ಮೌನವಹಿಸಿರುವುದು ನಾಚಿಕೆಗೇಡಿತನ: ಸುಧೀರ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ12 March 2019 10:56 PM IST
share
ಅರಣ್ಯವಾಸಿಗಳ ಒಕ್ಕಲ್ಲೆಬ್ಬಿಸುವ ವಿಚಾರದಲ್ಲಿ ಜನಪ್ರತಿನಿಧಿಗಳು ಮೌನವಹಿಸಿರುವುದು ನಾಚಿಕೆಗೇಡಿತನ: ಸುಧೀರ್ ಕುಮಾರ್

ಬೆಳ್ತಂಗಡಿ, ಮಾ. 12: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಿಸಲು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಹೋರಾಟ ಮಾಡಿದ ಸಂಸದರು ಹಾಗೂ ಶಾಸಕರು ಅದೇ ಕೋರ್ಟ್ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಕುರಿತು ನೀಡಿದ ತೀರ್ಪಿನ ವಿಚಾರದಲ್ಲಿ ಮೌನ ವಹಿಸಿರುವುದು ನಾಚಿಕೆಗೇಡಿತನ ಎಂದು ಹೈಕೋರ್ಟ್ ವಕೀಲ, ಪ್ರಗತಿಪರ ಚಿಂತಕ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು.

ಅವರು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ನಡೆದ ಅರಣ್ಯವಾಸಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ತೀರ್ಪಿನ ಪ್ರಕಾರ ಒಕ್ಕಲೆಬ್ಬಿಸುವಿಕೆಯ ವಿರುದ್ಧ ಜಾತಿ, ಧರ್ಮವನ್ನು ಮರೆತು ಸಂಘಟಿತ ಹೋರಾಟ ಅಗತ್ಯವಿದೆ. ಸುಪ್ರೀಂಕೋರ್ಟಿನ ತೀರ್ಪಿನ ಹಿನ್ನಲೆ ಯಲ್ಲಿ ಕೋಟ್ಯಾಂತರ ಜನರನ್ನು ಒಕ್ಕಲೆಬ್ಬಿಸುವ ಭೀತಿಯಿಂದ ಬದುಕನ್ನು ನಡೆಸುತ್ತಿದ್ದಾರೆ. ತೀರ್ಪಿಗೆ ತಡೆಯಾಜ್ಞೆ ಇದೆಯೇ ಹೊರತು ತೀರ್ಪು ರದ್ದುಗೊಂಡಿಲ್ಲ. ಕೇಂದ್ರ ಸರ್ಕಾರದ ಪರವಾಗಿ ಯಾವುದೇ ವಕೀಲರು ಸರ್ವೋಚ್ಚ ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡದಿರುವುದೇ ಪರೋಕ್ಷವಾಗಿ ಇಂತಹ ತೀರ್ಪು ಬರಲು ಕಾರಣವಾಗಿದೆ. ಜನರನ್ನು ಭಾವನಾತ್ಮಕವಾಗಿ ಒಡೆಯುವ ಜನರು ತಮ್ಮ ಹೊಣೆಗಾರಿಕೆಯನ್ನು ನಿರ್ಲಕ್ಷಿಸಿ, ಅರಣ್ಯವಾಸಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದ್ದಾರೆ ಎಂದರು.

ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಸಹಸಂಚಾಲಕ ಎಸ್. ವೈ. ಗುರುಶಾಂತ್ ಮಾತನಾಡಿ, ನಮ್ಮನ್ನಾಳುವ ಸರ್ಕಾರಗಳ ಧೋರಣೆಯ ಭಾಗವಾಗಿ ಅರಣ್ಯ ಸಂಪತ್ತಿನ ಲೂಟಿಗಾಗಿ ಮುಕ್ತ ಬಾಗಿಲು ತೆರೆದು ಬಹುರಾಷ್ಟ್ರೀಯ ಕಂಪನಿಗಳಿಗಾಗಿ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಹುನ್ನಾರದ ಭಾಗವಾಗಿ  ಸುಪ್ರೀಂ ಕೋರ್ಟಿನ ತೀರ್ಪು ಪೂರಕವಾಗಿದೆ. ಇದರಿಂದ ಆದಿವಾಸಿಗಳಿಗೆ ಸಮಸ್ಯೆ ಎದುರಾಗಲಿದೆ. ನಾವು ಮಾಡು ಇಲ್ಲವೇ ಮಡಿ ಹೋರಾಟ ಮಾಡಬೇಕಾದ ಅಗತ್ಯವಿದೆ ಎಂದರು.

ಮಾಜಿ ಶಾಸಕ ಕೆ.ವಸಂತ ಬಂಗೇರ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಜನಸಾಮಾನ್ಯರ ಬದುಕುವ ಸಂವಿಧಾನ ಬದ್ದ ಹಕ್ಕನ್ನು ಕಸಿದುಕೊಂಡಿದೆ. ಇದೀಗ ಸುಪ್ರೀಂ ಕೋರ್ಟ್  ತೀರ್ಪಿನ ವಿಚಾರದಲ್ಲಿಯೂ ಯಾವುದೇ ಮೇಲ್ಮನವಿ ಸಲ್ಲಿಸಿಲ್ಲ, ಈ ತಪ್ಪನ್ನು ಮರೆಮಾಚಲು ಬೆಳ್ತಂಗಡಿ ಶಾಸಕರು ಆದಿವಾಸಿ ಗಳ ಸಭೆ ಕರೆದು ಅವರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಈ ಬಗ್ಗೆ ಅರಣ್ಯವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದರು.

ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಅಧ್ಯಕ್ಷ ವಸಂತ ನಡ ಅಧ್ಯಕ್ಷತೆ ವಹಿಸಿದ್ದರು. ಸಿಪಿಐ(ಎಂ) ಮುಖಂಡ ಶಿವಕುಮಾರ್ ಎಸ್.ಎಂ ಮಾತನಾಡಿದರು. ವೇದಿಕೆಯಲ್ಲಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಕಾರ್ಯದರ್ಶಿ ಜಯಾನಂದ ಪಿಲಿಕಲ, ಉಪಾಧ್ಯಕ್ಷ ಲಕ್ಷ್ಮಣ ಆಲಂಗಾಯಿ ಉಪಸ್ಥಿತರಿದ್ದರು. ಸಂಚಾಲಕ ಶೇಖರ್ ಲಾಯಿಲ ಸ್ವಾಗತಿಸಿ,ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X