Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಾವುದಾದರೂ ಪ್ರಾಣಿಯ ಚಿಹ್ನೆ ಮುಂದಿಟ್ಟು...

ಯಾವುದಾದರೂ ಪ್ರಾಣಿಯ ಚಿಹ್ನೆ ಮುಂದಿಟ್ಟು ಚುನಾವಣೆ ಎದುರಿಸಿ: ಜೆಡಿಎಸ್ ವಿರುದ್ಧ ಈಶ್ವರಪ್ಪ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ12 March 2019 11:48 PM IST
share
ಯಾವುದಾದರೂ ಪ್ರಾಣಿಯ ಚಿಹ್ನೆ ಮುಂದಿಟ್ಟು ಚುನಾವಣೆ ಎದುರಿಸಿ: ಜೆಡಿಎಸ್ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಮೈಸೂರು,ಮಾ.12: ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಕ್ಷಮೆ ಕೇಳುವುದಕ್ಕೆ ಬರುವುದಿಲ್ಲವೇ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಮಾತನಾಡಿದ ಅವರು ಜೆಡಿಎಸ್ ನವರು ತೆನೆ ಹೊತ್ತ ಮಹಿಳೆಯ ಚಿಹ್ನೆ ಹೊಂದಿದ್ದಾರೆ. ಆದರೆ ಅವರು ನೀಡುತ್ತಿರುವ ಹೇಳಿಕೆಗಳು ಮಹಿಳೆಯರಿಗೆ ಗೌರವ ತರುತ್ತಿಲ್ಲ. ಸಹೋದರಿ ಸುಮಲತಾ ಅವರ ಕುರಿತು ತುಚ್ಛವಾಗಿ ಮಾತನಾಡುತ್ತಿದ್ದಾರೆ. ರೇವಣ್ಣ ಇದುವರೆಗೂ ಕ್ಷಮೆ ಕೇಳಿಲ್ಲ. ಅವರ ಬದಲಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್, ಸಿಎಂ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಎಲ್ಲರೂ ಕ್ಷಮೆ ಕೇಳಿದ್ದಾರೆ. ಈ ಕೂಡಲೇ ರೇವಣ್ಣರಿಂದ ಕ್ಷಮೆ ಕೇಳಿಸಿ ಎಂದು ದೇವೆಗೌಡರಲ್ಲಿ ನಾನು ಆಗ್ರಹಿಸುತ್ತೇನೆ. ಇಲ್ಲವಾದರೆ ನಿಮ್ಮ ಪಕ್ಷದ ಚಿಹ್ನೆಯನ್ನು ಬದಲಾಯಿಸಿ, ಯಾವುದಾದರೂ ಪ್ರಾಣಿಯ ಚಿಹ್ನೆ ಮುಂದಿಟ್ಟುಕೊಂಡು ಚುನಾವಣೆ ಎದುರಿಸಿ ಎಂದು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಯುವಕರು ಮೋದಿಯವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಬೇಕೆಂದು ಕಾಯುತ್ತಿದ್ದಾರೆ. 28 ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಬಲಿಷ್ಠವಾಗಿದೆ. ಇದಕ್ಕಾಗಿ  ವಿಧಾನಸಭೆಯಲ್ಲಿ 104 ಸ್ಥಾನ ಪಡೆದಿದ್ದೇವೆ. ಸಂಘಟನೆ ಶಕ್ತಿಯ ಜೊತೆಗೆ 'ಮೋದಿ' ಎಂಬ ಪದ ರೈತರು, ಯುವಕರು, ಹೆಣ್ಣು ಮಕ್ಕಳನ್ನು ಆಕರ್ಷಿಸುತ್ತಿದೆ ಎಂದರು. 20 ರಿಂದ 25 ಸ್ಥಾನಗಳನ್ನು ಗೆಲ್ಲಲೇಬೇಕೆಂಬ ಛಲ ನಮ್ಮಲ್ಲಿದೆ. ಇಡೀ ದೇಶ ಒಂದಾದ ಮೇಲೆ ಚಿಲ್ಲರೆ ಪಕ್ಷಗಳು ನಮಗ್ಯಾವ ಲೆಕ್ಕ ಎಂದು ಹೇಳಿದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ನಂತರ ಕುರ್ಚಿಗಾಗಿ ಸೆಣೆಸಿದ್ದು ಬಿಟ್ಟರೆ ಬೇರೆ ಯಾವ ಸಾಧನೆ ಮಾಡಿಲ್ಲ. ಜನತೆ ಮೈತ್ರಿ ಸರ್ಕಾರದ ಕಳಪೆ ಸಾಧನೆ ನೋಡಿ ರೋಸಿಹೋಗಿದ್ದು, ತಿರಸ್ಕಾರ ಭಾವನೆ ಬೆಳೆಸಿಕೊಂಡಿದ್ದಾರೆ. ಮೋದಿಯವರತ್ತ ಒಲವು ತೋರಿದ್ದಾರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಓರ್ವ ಪೇಪರ್ ಹುಲಿ. ತಮ್ಮನ್ನು ತಾವೇ ಹಿಂದುಳಿದ ವರ್ಗಗಳ ನಾಯಕನೆಂದು ಬಿಂಬಿಸಿಕೊಳ್ಳುತ್ತಾರೆ. ಪೇಪರ್ ಟೈಗರ್ ಎನ್ನುವ ಪದ ಅವರಿಗೆ ಹೇಳಿ ಮಾಡಿಸಿದಂತಿದೆ. ನನಗೆ ಬಿಪಿ ಶುಗರ್ ಇಲ್ಲ. ನನ್ನ ಬಗ್ಗೆ ಮಾತನಾಡುವವರಿಗೆಲ್ಲ ಬಿಪಿ, ಶುಗರ್ ಬರುತ್ತದೆ ಎಂದರು. ಸಿದ್ದರಾಮಯ್ಯನವರು ನನ್ನ ವಿಚಾರಕ್ಕೆ ಪದೇ ಪದೇ ಸಹನೆ ಕಳೆದುಕೊಳ್ಳುತ್ತಾರೆ. ಯಾಕೆ ಅಂತ ಅವರನ್ನೇ ಕೇಳಬೇಕೆಂದು ಟೀಕಿಸಿದರು.

ಈ ಸಂದರ್ಭ ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ನಗರಾಧ್ಯಕ್ಷ ಡಾ.ಬಿ.ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X