Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಪರೂಪದ ಅನುವಂಶಿಕ ಕಾಯಿಲೆಯಿಂದ...

ಅಪರೂಪದ ಅನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಯ ರಕ್ಷಣೆ: ಆ್ಯಸ್ಟರ್ ಸಿಎಂಐ ವೈದ್ಯರ ಸಾಧನೆ

ವಾರ್ತಾಭಾರತಿವಾರ್ತಾಭಾರತಿ13 March 2019 9:19 PM IST
share
ಅಪರೂಪದ ಅನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಯ ರಕ್ಷಣೆ: ಆ್ಯಸ್ಟರ್ ಸಿಎಂಐ ವೈದ್ಯರ ಸಾಧನೆ

ಬೆಂಗಳೂರು, ಮಾ.13: ಮಾರಿಷಸ್‌ನ 13 ವರ್ಷದ ಬಾಲಕಿ ಸಿಯಾರ(ಹೆಸರು ಬದಲಿಸಲಾಗಿದೆ) ತನ್ನ 2ನೇ ವರ್ಷದಿಂದ ಅತೀ ಅಪರೂಪವಾದ ‘ಕಾಂಪ್ಲಿಮೆಂಟ್ ಡಿಫಿಷಿಯೆನ್ಸಿ’ ಎಂಬ ಅನುವಂಶಿಕ ಕಾಯಿಲೆ, ಸಿ1ಕ್ಯೂ ನ್ಯೂನತೆಯಿಂದ ಬಳಲುತ್ತಿದ್ದು, ಏಷ್ಯಾದಲ್ಲೇ ಈ ಜಟಿಲವಾದ ಸ್ಥಿತಿಯಿಂದ ಬಳಲುತ್ತಿರುವ ಮೂಳೆ ಮಜ್ಜೆಯ ಕಸಿ ಅಗತ್ಯವಿರುವ ಮೊದಲ ಬಾಲಕಿ ಎನಿಸಿಕೊಂಡಿದ್ದಳು. ಬೆಂಗಳೂರಿನ ಆ್ಯಸ್ಟರ್ ಸಿಎಂಐ ಆಸ್ಪತ್ರೆಯ ವೈದ್ಯರ ತಂಡ ಆಕೆಗೆ ಹೊಸ ಜೀವನವನ್ನು ನೀಡಿದೆ. ಸಿಯಾರ ಮರುಕಳಿಸುವ ಚರ್ಮದ ಗಾಯಗಳು ಮತ್ತು ಕಿಡ್ನಿ ತೊಂದರೆಯನ್ನು ಸುಮಾರು ಒಂದು ದಶಕದಿಂದಲೇ ಅನುಭವಿಸುತ್ತಿದ್ದಳು ಮತ್ತು ದೇಹದ ಕೆಲ ಅಂಗಗಳ ಮರಗಟ್ಟುವಿಕೆಯಿಂದ ಇತ್ತೀಚೆಗೆ ಆಕೆಗೆ ನಡೆಯುವುದೂ ಕಷ್ಟವಾಗಿತ್ತು.

ನಗರದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಆ್ಯಸ್ಟರ್ ಸಿಎಂಐ ಆಸ್ಪತ್ರೆಯ ಸಿಇಓ ಡಾ.ನಿತೀಶ್ ಶೆಟ್ಟಿ ಮಾತನಾಡಿ, ಕಸಿ ಮಾಡುವ ತನಕ, ಸಿಯಾರ, ಸಿಸ್ಟಮಿಕ್ ಲಪಸ್ ಎರಿಥೆಮಾಟೊಸಸ್- ಸ್ವಯಂ ನಿರೋಧಕ ಸ್ಥಿತಿಯನ್ನು ನಿಯಂತ್ರಿಸಲು ಬಹು ರೋಗ ನಿರೋಧಕ ನಿಗ್ರಾಹಕಗಳನ್ನು ಆಕೆಗೆ ನೀಡಲಾಗಿತ್ತು ಎಂದರು.

ಗಂಭೀರ ಚರ್ಮದ ಕಾಯಿಲೆ, ಕಿಡ್ನಿ ಸಮಸ್ಯೆ ಮತ್ತು ಶ್ವಾಸಕೋಶದ ಅಧಿಕ ರಕ್ತದೊತ್ತಡಕ್ಕಾಗಿ 10ಕ್ಕೂ ಅಧಿಕ ಔಷಧಿಗಳಿಂದ ಆಕೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆಕೆಯ ತಂದೆ ತಮ್ಮ ಮೂಳೆ ಮಜ್ಜೆಯನ್ನು ಸಿಯಾರಳಿಗೆ ದಾನ ಮಾಡಿದರು ಮತ್ತು ಈಗ ಆಕೆಯ ಸಮಸ್ಯೆ ಗುಣವಾಗಿ ಸಾಮಾನ್ಯ ಜೀವನ ನಡೆಸುವುದು ಸಾಧ್ಯವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಆಕೆ ಔಷಧಗಳನ್ನು ಸೇವಿಸುತ್ತಿದ್ದು, ಮುಂದಿನ ಆರು ತಿಂಗಳವರೆಗೆ ಹೆಚ್ಚಿನ ಅನುಸರಣೆ ಅಗತ್ಯವಿದೆ. ಆಕೆಯ ಕುಟುಂಬ 26.5 ಲಕ್ಷ ರೂ.ಗಳಷ್ಟು ಮೊತ್ತವನ್ನು ಒಗ್ಗೂಡಿಸಲು ಆಸ್ಪತ್ರೆಯ ಪ್ರಯತ್ನಗಳಿಂದ ಸಹಾಯವಾಗಿದೆ. ಗುಂಪು ನಿಧಿ ಸಂಗ್ರಹ ವೇದಿಕೆಯು ಯಶಸ್ವಿ ಕಸಿ ಮಾಡುವಿಕೆ ಸಾಧ್ಯವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ಹೇಳಿದರು.

ಈವರೆಗೆ, ಜಗತ್ತಿನಲ್ಲಿ 10ಕ್ಕೂ ಕಡಿಮೆ ಪ್ರಕರಣಗಳಲ್ಲಿ ಮಾತ್ರ ಯಶಸ್ವಿಯಾಗಿ ಇಂತಹ ಕಸಿ ಮಾಡಲಾಗಿದೆ. ಮೊದಲನೆಯದನ್ನು ಬ್ರಿಟನ್‌ನಲ್ಲಿ 2014ರಲ್ಲಿ ಮಾಡಲಾಗಿತ್ತು. ನಮ್ಮ ಆಸ್ಪತ್ರೆಯ ಪಿಡಿಯಾಟ್ರಿಕ್ ಇಮ್ಯುನಾಲಜಿ ಮತ್ತು ರೂಮಟಾಲಜಿ ವಿಭಾಗದ ಸಲಹಾ ತಜ್ಞ ಡಾ.ಸಾಗರ್ ಭಟ್ಟಾದ್ ಮತ್ತು ಪಿಡಿಯಾಟ್ರಿಕ್ ಹೆಮಟಾಲಜಿ ಮತ್ತು ಬಿಎಂಟಿ ವಿಭಾಗದ ಸಲಹಾತಜ್ಞ ಡಾ.ಸ್ಟಾಲಿನ್ ರಾಮ್ ಪ್ರಕಾಶ್ ಮತ್ತು ಡಾ.ಸಿ.ಪಿ.ರಘುರಾಮ್ ಒಗ್ಗಟ್ಟಿನ ಪ್ರಯತ್ನದ ಫಲವಾಗಿ ಈ ಕಸಿಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಅವರು ಹೇಳಿದರು.

ಬೇರೆ ದೇಶದ ಪುಟ್ಟ ಜೀವವೊಂದು ಭಾರತದಲ್ಲಿ ಹೊಸದಾಗಿ ಅರಳುವಂತಾಗಿದ್ದು ತುಂಬಾ ಸಂತೋಷದ ವಿಷಯ. ನಮ್ಮ ವೈದ್ಯರ ಪ್ರಯತ್ನ ಮತ್ತು ಕಠಿಣ ಪರಿಶ್ರಮಕ್ಕೆ ಧನ್ಯವಾದಗಳು. ನಾವು ಒಂದು ಬದ್ಧತೆಯುಳ್ಳ ಎಫ್ಪಿಐಡಿಯಿಂದ ಶ್ರೇಷ್ಠತೆಯ ಕೇಂದ್ರವೆಂದು ಗುರುತಿಸಲ್ಪಟ್ಟ ಇಮ್ಯುನಾಲಜಿ ಮತ್ತು ಮೂಳೆ ಮಜ್ಜೆಯ ಕಸಿ ಘಟಕ (ಬಿಎಂಟಿ)ವನ್ನು ಹೊಂದಿರುವುದಕ್ಕೆ ಸಂತಸವಾಗುತ್ತಿದೆ ಎಂದು ಅವರು ತಿಳಿಸಿದರು.

ವಿಶ್ವದಾದ್ಯಂತ ನಡೆಸಿದ ಸಂಶೋಧನೆಯ ಪ್ರಕಾರ, 2,000 ಮಕ್ಕಳಲ್ಲಿ 1 ಮಗು ರೋಗ ನಿರೋಧಕ ಕೊರತೆಯಿಂದ ಬಳಲುತ್ತಿದೆ. ಈ ಅಂಕಿ ಅಂಶಗಳನ್ನು ಬೆಂಗಳೂರಿಗೆ ಪರಿಗಣಿಸಿದರೆ, ಸುಮಾರು 5,000 ಮಕ್ಕಳಲ್ಲಿ ರೋಗ ನಿರೋಧಕ ಕೊರತೆ ಇರುತ್ತದೆ ಎಂದು ನಿತೀಶ್ ಶೆಟ್ಟಿ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X