Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೆಹರೂ ಪಂಜಾಬನ್ನು ವಿಭಜಿಸಿದರು, ಇಂದಿರಾ...

ನೆಹರೂ ಪಂಜಾಬನ್ನು ವಿಭಜಿಸಿದರು, ಇಂದಿರಾ ಸ್ವರ್ಣ ಮಂದಿರಕ್ಕೆ ದಾಳಿ ಮಾಡಿದರು: ಕೇಂದ್ರ ಸಚಿವೆ

ವಾರ್ತಾಭಾರತಿವಾರ್ತಾಭಾರತಿ13 March 2019 10:19 PM IST
share
ನೆಹರೂ ಪಂಜಾಬನ್ನು ವಿಭಜಿಸಿದರು, ಇಂದಿರಾ ಸ್ವರ್ಣ ಮಂದಿರಕ್ಕೆ ದಾಳಿ ಮಾಡಿದರು: ಕೇಂದ್ರ ಸಚಿವೆ

ಹೊಸದಿಲ್ಲಿ, ಮಾ.13: ಸಿಖ್ಖರ ಆತ್ಮಸ್ಥೈರ್ಯ ಕುಂದಿಸುವ ಉದ್ದೇಶದಿಂದ ಜವಾಹರಲಾಲ್ ನೆಹರೂ ಪಂಜಾಬನ್ನು ವಿಭಜಿಸಿದರೆ, ಇಂದಿರಾ ಗಾಂಧಿ ಅಮೃತಸರದಲ್ಲಿರುವ ಸ್ವರ್ಣಮಂದಿರಕ್ಕೆ ದಾಳಿ ನಡೆಸಿ ಹಲವಾರು ಅಮಾಯಕರನ್ನು ಹತ್ಯೆ ಮಾಡಿದರು ಎಂದು ಕೇಂದ್ರ ಸಚಿವೆ ಹರ್‌ಸಿಮ್ರಾನ್ ಕೌರ್ ಆರೋಪಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದಿರಾ ಗಾಂಧಿಯ ಬಳಿಕ ಅಧಿಕಾರಕ್ಕೆ ಬಂದ ಅವರ ಮಗ ರಾಜೀವ್ ಗಾಂಧಿ ರಾಜಕೀಯ ಕಾರಣಕ್ಕಾಗಿ ಎಲ್ಲೆಡೆ ಮಿಲಿಯಾಂತರ ಸಿಖ್ ಜನರ ಸಾಮೂಹಿಕ ಹತ್ಯೆ ನಡೆಸಿದರು. ಈಗ ಅವರ ಮಗ ರಾಹುಲ್ ಗಾಂಧಿ ಪಾಕಿಸ್ತಾನೀಯರ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು ಎಂದು ಸುದ್ದಿಸಂಸ್ಥೆ ತಿಳಿಸಿದೆ.

ಪಂಜಾಬ್ ವಿಭಜನೆಯಾಗಲು ನೆಹರೂ ಕಾರಣ. ಸಿಖ್ಖರ ಸ್ಥೈರ್ಯಗೆಡಿಸುವ ಏಕೈಕ ಉದ್ದೇಶ ಇದರ ಹಿಂದಿದೆ ಎಂದ ಅವರು, ಅಂತೂ ಕಡೆಗೂ ನಮಗೆ 1984ರ ಅನ್ಯಾಯಕ್ಕೆ ನ್ಯಾಯ ದೊರಕಿದೆ. ಕಡೆಗೂ ನಮಗೆ ಕರ್ಥಾರ್‌ಪುರ ಸಾಹಬ್ ಕಾರಿಡಾರ್ ದೊರೆತಿದೆ. ಈಗ ನೀವು ಪ್ರಧಾನಿ ಮೋದಿ ಹಾಗೂ ಸರಕಾರದ ಬೆಂಬಲಕ್ಕೆ ನಿಲ್ಲದಿದ್ದರೆ, ಈ ಪ್ರಕ್ರಿಯೆಯನ್ನು ಕಾಂಗ್ರೆಸ್ ಹಾಗೂ ಗಾಂಧಿ ಕುಟುಂಬ ಮಾತುಕತೆ ಮತ್ತು ಭಯೋತ್ಪಾದನೆ ಎಂಬ ನೆಪದಲ್ಲಿ ಹಳಿ ತಪ್ಪಿಸಿ ಬಿಡುತ್ತದೆ ಎಂದರು.

ತನಗೆ ಪಾಕ್ ಪ್ರಧಾನಿ ಇಮ್ರಾನ್‌ಖಾನ್ ಜೊತೆಗಿರುವ ಆತ್ಮೀಯತೆ ಕರ್ಥಾರ್‌ಪುರ ಕಾರಿಡಾರ್‌ನ ಯಶಸ್ಸಿಗೆ ಕಾರಣ ಎಂಬ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಹೇಳಿಕೆಗೆ ಪ್ರತಿಕ್ರಿಯಿಸಿದ ಕೌರ್, ಸಿದು ಪಾಕಿಸ್ತಾನದ ಸರಕಾರದಿಂದ ಒಪ್ಪಿಗೆ ಪಡೆದುಕೊಂಡರು ಎಂದಾದರೆ, ನಮ್ಮ ಸರಕಾರದ ಕಡೆಯಿಂದ ಇದಕ್ಕೆ ಯಾರು ಒಪ್ಪಿಗೆ ಕೊಟ್ಟರು. ಯಾರು ಇದನ್ನು ಸಂಪುಟ ಸಭೆಯಲ್ಲಿ ಅನುಮೋದಿಸಿದರು ಎಂದು ಪ್ರಶ್ನಿಸಿದರು. ಸಿದು ಪಾಕಿಸ್ತಾನದ ಏಜೆಂಟ್. ಅವರು ಪಾಕ್ ಪರ ಮಾತಾಡುವುದರಲ್ಲಿ ಆಶ್ಚರ್ಯವೇನಿಲ್ಲ ಎಂದು ಕೌರ್ ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X