Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳೆಯರ ಸಮಸ್ಯೆ ಪರಿಹಾರಕ್ಕೆ ಪೊಲೀಸರು...

ಮಹಿಳೆಯರ ಸಮಸ್ಯೆ ಪರಿಹಾರಕ್ಕೆ ಪೊಲೀಸರು ಸಹಕರಿಸುತ್ತಿಲ್ಲ: ಮೋಹಿನಿ ಸಿದ್ದೇಗೌಡ ಆರೋಪ

ವಾರ್ತಾಭಾರತಿವಾರ್ತಾಭಾರತಿ13 March 2019 11:06 PM IST
share
ಮಹಿಳೆಯರ ಸಮಸ್ಯೆ ಪರಿಹಾರಕ್ಕೆ ಪೊಲೀಸರು ಸಹಕರಿಸುತ್ತಿಲ್ಲ: ಮೋಹಿನಿ ಸಿದ್ದೇಗೌಡ ಆರೋಪ

ಚಿಕ್ಕಮಗಳೂರು, ಮಾ.13: ನೊಂದ ಮಹಿಳೆಯರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಸ್ತೂರಿ ಬಾ ಸದನ ಮಹಿಳಾ ಸಾಂತ್ವಾನ ಕೇಂದ್ರ ಅವಿರತವಾಗಿ ಶ್ರಮಿಸುತ್ತಿದೆ. ಆದರೆ ಇದಕ್ಕೆ ಪೊಲೀಸ್ ಇಲಾಖೆಯಲ್ಲಿನ ಕೆಲ ಅಧಿಕಾರಿಗಳು ಸಹಕಾರ ನೀಡುತ್ತಿಲ್ಲ ಎಂದು ಸದನದ ಅಧ್ಯಕ್ಷೆ ಮೋಹಿನಿ ಸಿದ್ದೇಗೌಡ ದೂರಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ಬಾ ಸದನ ಕಳೆದ ಅನೇಕ ವರ್ಷಗಳಿಂದ ಮಹಿಳಾ ದೌರ್ಜನ್ಯದ ವಿರುದ್ಧ ಕಾನೂನು ಹೋರಾಟ ಮಾಡುತ್ತಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಪ್ರಕರಣಗಳಲ್ಲಿ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸುವಲ್ಲಿ ಸಫಲವಾಗಿದೆ. ಮಹಿಳಾ ದೌರ್ಜನ್ಯ, ಅತ್ಯಾಚಾರ, ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳ ಮತ್ತಿತರ ಪ್ರಕರಣಗಳಲ್ಲಿ ಕಸ್ತೂರಿ ಸದನಕ್ಕೆ ಬರುವ ಪ್ರಕರಣಗಳಲ್ಲಿ ನೊಂದವರಿಗೆ ನ್ಯಾಯ ಒದಗಿಸಲು ಪೊಲೀಸ್ ಇಲಾಖೆಯ ಸಹಕಾರ ಅತ್ಯಗತ್ಯವಾಗಿದೆ. ಸದ್ಯ ಪೊಲೀಸ್ ವರಿಷ್ಠಾಧಿಕಾರಿಗಲಾಗಿರುವ ಹರೀಶ್ ಪಾಂಡೆ ಅವರು ನಮ್ಮ ಹೋರಾಟಕ್ಕೆ ಸಹಕಾರ ನೀಡುತ್ತಿದ್ದಾರೆ. 

ಆದರೆ ಕೆಲ ಪೊಲೀಸ್ ಠಾಣೆಗಳ ಎಸೈ, ಪಿಎಸೈಗಳು ನೊಂದ ಮಹಿಳೆಯರು ನೀಡುವ ದೂರುಗಳನ್ನು ದಾಖಲಿಸಲು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದರಿಂದ ಕೆಲ ಪ್ರಕರಣಗಳಲ್ಲಿ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಆದರೆ ಎಲ್ಲ ಪ್ರಕರಣಗಳನ್ನು ಅವರ ಬಳಿಯೇ ಕೊಂಡೊಯ್ಯುವುದು ತರವಲ್ಲ. ಆದ್ದರಿಂದ ಪೊಲೀಸ್ ಠಾಣೆಗಳಲ್ಲೇ ಪ್ರಕರಣಗಳನ್ನು ಇತ್ಯರ್ಥ ಪಡಿಸಲು, ದೂರು ದಾಖಲಿಸಲು ಸಂಸ್ಥೆ ಪ್ರಯತ್ನ ನಡೆಸುತ್ತಿದೆ. ಆದರೆ ಕೆಲ ಪೊಲೀಸ್ ಠಾಣಾಧಿಕಾರಿಗಳು ಮಹಿಳೆಯರು ನ್ಯಾಯ ಕೇಳಿ ಹೋದಾಗ ಉಡಾಫೆ ಉತ್ತರ ನೀಡುತ್ತಿದ್ದಾರೆಂದು ಅವರು ಆರೋಪಿಸಿದರು.

ಕಸ್ತೂರಿ ಬಾ ಮಹಿಳಾ ಸಾಂತ್ವಾನ ಕೇಂದ್ರಕ್ಕೆ 2018 ರಿಂದ 2019 ರ ಅವಧಿಯಲ್ಲಿ 73 ಪ್ರಕರಣಗಳು ನೋಂದಣಿಯಾಗಿದೆ. 62 ಪ್ರಕರಣಗಳು ಇತ್ಯರ್ಥ ಕಂಡಿದ್ದು, 11 ಪ್ರಕರಣಗಳು ಬಾಕಿ ಉಳಿದಿವೆ. ಈ ಪೈಕಿ 56 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದ್ದು, 6 ಪ್ರಕರಣಗಳನ್ನು ನ್ಯಾಯಾಲಯದ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದರು. 

ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಮಹಿಳೆಯ ಪತಿಯ ಅನೈತಿಕ ಸಂಬಂಧದ ದೂರುಗಳು ಹೆಚ್ಚು ಬರುತ್ತಿವೆ. ಇಂತಹ ಪ್ರಕರಣಗಳಿಗೆ ಪೊಲೀಸ್ ಠಾಣೆಗಳಿಗೆ ಹೋದಾಗ ಅನೈತಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಆದೇಶವಿದೆ ಎಂದು ಸಬೂಬು ಹೇಳಿ ಪ್ರಕರಣವನ್ನು ಕೈಬಿಡಲಾಗುತ್ತಿದೆ. ಇಂತಹ ಪ್ರಕರಣಗಳಲ್ಲಿ ಕೊನೆ ಪಕ್ಷ ಹೆಂಡತಿಗೆ ಪತಿ ನೀಡಿದ ಕಿರುಕುಳದ ಮೇಲಾದರೂ ದೂರು ದಾಖಲಿಸಬಹುದು. ಆದರೆ ಪೊಲೀಸರು ಅದನ್ನೂ ಮಾಡುತ್ತಿಲ್ಲ ಎಂದ ಅವರು, ಮಹಿಳೆಯರು ನೀಡುವ ದೂರಿನ ಮೇರೆಗೆ ಆರೋಪಿಗಳನ್ನು ವಿಚಾರಿಸಲು ಮೂರು ಪತ್ರಗಳನ್ನು ಬರೆದರೂ ಬರುವುದಿಲ್ಲ. ಆಗ ಪೊಲೀಸರ ಮೂಲಕ ಕರೆಸಲು ಪ್ರಯತ್ನಿಸುತ್ತೇವೆ. ಈ ಹಿಂದೆ ಕೆಲ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳನ್ನು ಕರೆಸಿ ವಿಚಾರಣೆಗೊಳಪಡಿಸುತ್ತಿದ್ದರು. ಆದರೆ ಸದ್ಯ ಕಾರ್ಯನಿರ್ವಹಿಸುತ್ತಿರುವ ಠಾಣಾಧಿಕಾರಿಗಳು ಆರೋಪಿಗಳನ್ನು ಕರೆಸಲು ಸಾಧ್ಯವಿಲ್ಲ ಎಂದು ಉಡಾಪೆ ಉತ್ತರ ನೀಡುತ್ತಿದ್ದಾರೆ. ಇದರಿಂದಾಗಿ ಇಂತಹ ಪ್ರಕರಣಗಳಲ್ಲಿ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಹಿಳಾ ಸಾಂತ್ವಾನ ಕೇಂದ್ರದ ಸದಸ್ಯೆಯರಾದ ಸಾವಿತ್ರಿ, ಪಾರ್ವತಿ, ಗೀತಾ ಮತ್ತಿತರರು ಉಪಸ್ಥಿತರಿದ್ದರು.

ಮಹಿಳಾ ಸಾಂತ್ವಾನಕ್ಕೆ ವರದಕ್ಷಿಣೆ ಕಿರುಕುಳ ಪ್ರಕರಣಗಳು ಇತ್ತೀಚೆಗೆ ಬರುತ್ತಿಲ್ಲ. ಆದರೆ ಹಿರಿಯ ನಾಗರಿಕರ ಸಮಸ್ಯೆಗಳು ಹೆಚ್ಚು ಬರುತ್ತಿವೆ. ಮಕ್ಕಳು ತಮ್ಮ ಪೋಷಕರಿಗೆ ವಯಸ್ಸಾದ ಮೇಲೆ ಆಸ್ತಿಗಾಗಿ ಕಿರುಕುಳ ನೀಡುವುದು ಹೆಚ್ಚಾಗುತ್ತಿದೆ. ಮಹಿಳಾ ಸಾಂತ್ವಾನ ಕೇಂದ್ರ ಹಿರಿಯ ನಾಗರಿಕರಿಂದ ಬರುವ ಬಹುತೇಕ ಪ್ರಕರಣಗಳನ್ನು ರಾಜಿ ಸಂಧಾನ, ಕಾನೂನು ಹೋರಾಟದ ಮೂಲಕ ಬಗೆಹರಿಸಿದೆ.
- ಮೋಹಿನಿ ಸಿದ್ದೇಗೌಡ, ಅಧ್ಯಕ್ಷೆ ಕಸ್ತೂರಿ ಬಾ ಮಹಿಳಾ ಸಾಂತ್ವಾನ ಕೇಂದ್ರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X