Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಸಂವಿಧಾನದ ಕುರಿತಂತೆ ಜಾಗೃತಿ

ಸಂವಿಧಾನದ ಕುರಿತಂತೆ ಜಾಗೃತಿ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ17 March 2019 12:08 AM IST
share
ಸಂವಿಧಾನದ ಕುರಿತಂತೆ ಜಾಗೃತಿ

 ಸಂವಿಧಾನ ಅಪಾಯದಲ್ಲಿದೆ ಎನ್ನುವ ಮಾತುಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ. ಇದೇ ಸಂದರ್ಭದಲ್ಲಿ ಸಂವಿಧಾನವನ್ನು ಹೊಸ ತಲೆ ಮಾರು ಎಷ್ಟರ ಮಟ್ಟಿಗೆ ತನ್ನದಾಗಿಸಿಕೊಂಡಿದೆ ಎಂದು ನೋಡಿದರೆ ನಿರಾಶೆ ಕಟ್ಟಿಟ್ಟ ಬುತ್ತಿ. ಪ್ರಜಾಸತ್ತೆಯ ಅಡಿಗಲ್ಲಾಗಿರುವ, ನಮ್ಮ ದೈನಂದಿನ ಬದುಕಿನ ಭಾಗವಾಗಿರುವ ಸಂವಿಧಾನವನ್ನು ನಾವು ಪಠ್ಯ ಪುಸ್ತಕಕ್ಕಷ್ಟೇ ಸೀಮಿತಗೊಳಿಸಿದ್ದೇವೆ. ಸಂವಿಧಾನದ ಕುರಿತಂತೆ ದೇಶದ ಜನರ ವಿಸ್ಮತಿಯನ್ನೇ ಸಂವಿಧಾನ ವಿರೋಧಿಗಳು ತಮ್ಮ ಬಂಡವಾಳವಾಗಿಸುತ್ತಿದ್ದಾರೆ. ಅದನ್ನು ದುರ್ಬಲಗೊಳಿಸಲು ಹವಣಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹಲವು ಚಿಂತಕರು ಸಂವಿಧಾನವನ್ನು ಪರಿಚಯಿಸುವ ಆಂದೋಲನವನ್ನು ನಡೆಸುತ್ತಿದ್ದಾರೆ. ಅದರ ಭಾಗವಾಗಿದೆ, ಎಂ. ಅಬ್ದುಲ್ ರೆಹಮಾನ್ ಪಾಷ ಬರೆದಿರುವ ‘ಭಾರತ ಸಂವಿಧಾನ-ಅರ್ಥ ಅರಿವು ಜಾಗೃತಿ’ ಕೃತಿ. ಸಂವಿಧಾನ ಸಾಕ್ಷರತೆಯ ಕೈಪಿಡಿ ಎಂದು ಅವರು ಇದನ್ನು ಕರೆದಿದ್ದಾರೆ. ಯುವಕರಿಗಾಗಿ, ವಿದ್ಯಾರ್ಥಿಗಳಿಗಾಗಿ ಸರಳವಾಗಿ ರೂಪುಗೊಂಡ ಸಂವಿಧಾನದ ಸಾರಾಂಶವನ್ನು ಹೊಂದಿದ ಕೃತಿ ಇದಾಗಿದೆ.
ಭಾರತ ಸಂವಿಧಾನವನ್ನು ಓದಿ, ಅರ್ಥ ಮಡಿಕೊಂಡು ಆ ಮೂಲಕ ಈ ದೇಶದ ನಾಗರಿಕರಾಗಿ ನಮ್ಮ ಹೊಣೆಗಾರಿಕೆಗಳನ್ನು ಅರಿತುಕೊಳ್ಳುವ ತುರ್ತು ಎಂದಿಗಿಂತ ಹೆಚ್ಚಾಗಿದೆ. ಸ್ವಾತಂತ್ರ ಸಂಗ್ರಾಮ ಮತ್ತು ಅದರ ಫಲವಾಗಿ ಸ್ವಾತಂತ್ರ ಬಂದ ವಿದ್ಯಮಾನಗಳ ತೀವ್ರತೆ ಸ್ವಲ್ಪವೂ ತಟ್ಟಿರದ ನಮ್ಮ ಈಗಿನ ಪೀಳಿಗೆಗೆ ಅದರ ಮಹತ್ವವನ್ನು ಅರ್ಥ ಮಾಡಿಸುವ ಮೂಲಕ ಭಾರತ ಸಂವಿಧಾನದ ಪ್ರಸ್ತುತತೆಯನ್ನು ಮನವರಿಕೆ ಮಾಡಿಸುವ ಪ್ರಯತ್ನ ಇಲ್ಲಿದೆ. ಕೃತಿಯಲ್ಲಿ ಒಟ್ಟು ಹನ್ನೊಂದು ಅಧ್ಯಾಯಗಳಿವೆ. ಆರಂಭದಲ್ಲಿ ಸಂವಿಧಾನ ಎಂದರೆ ಏನು ಎನ್ನುವುದನ್ನು ಕೃತಿ ವಿವರಿಸುತ್ತದೆ. ಅದನ್ನು ನಾವು ಏಕೆ ತಿಳಿದುಕೊಳ್ಳಬೇಕು, ಸಂವಿಧಾನಕ್ಕಾಗಿ ನಾವು ತೆತ್ತ ಬೆಲೆಯೇನು, ಸಂವಿಧಾನದ ಸ್ವಭಾವ, ಅದರ ಉಗಮ, ವಿಕಾಸ, ಹಿನ್ನೆಲೆ ಇತ್ಯಾದಿಗಳನ್ನು ಆನಂತರದ ಅಧ್ಯಾಯಗಳು ವಿವರಿಸುತ್ತವೆ. ಉಳಿದಂತೆ ಸಂವಿಧಾನ ನಮಗೆ ನೀಡಿರುವ ಹಕ್ಕು, ಕರ್ತವ್ಯಗಳು, ರಾಜ್ಯನೀತಿಯ ನಿರ್ದೇಶಕ ತತ್ವಗಳ ಸಾರಾಂಶವನ್ನು ನೀಡಲಾಗಿದೆ. ಯುವಕರು ಮತ್ತು ವಿದ್ಯಾರ್ಥಿಗಳು ಅವಶ್ಯವಾಗಿ ಹೊಂದಿರಬೇಕಾದ ಕೈ ಪಿಡಿ ಇದು.
ನವಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು64. ಮುಖಬೆಲೆ 50 ರೂ.

 

share
-ಕಾರುಣ್ಯಾ
-ಕಾರುಣ್ಯಾ
Next Story
X