ಉಮೇಶ್ ಜಾಧವ್ ರಾಜೀನಾಮೆ ಅಂಗೀಕರಿಸಬೇಡಿ: ಸ್ಪೀಕರ್ ರಮೇಶ್ ಕುಮಾರ್ಗೆ ಕಾಂಗ್ರೆಸ್ ದೂರು
ಉಮೇಶ್ ಜಾಧವ್
ಬೆಂಗಳೂರು, ಮಾ. 20: ಕಲಬುರಗಿ ಜಿಲ್ಲೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಅವರ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಅಂಗೀಕರಿಸಬಾರದು ಎಂದು ವಿಧಾನಸಭಾ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರಿಗೆ ಕಾಂಗ್ರೆಸ್ ದೂರು ನೀಡಿದೆ.
ಬುಧವಾರ ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯದರ್ಶಿಯವರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಪಿ.ಆರ್.ರಮೇಶ್ ಅವರು ದೂರು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಆಯ್ಕೆಯಾಗಿರುವ ಉಮೇಶ್ ಜಾಧವ್ ಅವರು ರಾಜೀನಾಮೆ ನೀಡಿದ್ದಾರೆ. ಆದರೆ, ಅವರು ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗುವ ಮೂಲಕ ಪಕ್ಷದ ವಿಪ್ ಉಲ್ಲಂಘನೆ ಮಾಡಿದ್ದು, ಪಕ್ಷಾಂತರ ನಿಷೇಧ ಕಾಯ್ದೆಯಡಿ ಬರಲಿದೆ. ಆದುದರಿಂದ ಅವರ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ರಮೇಶ್ ತಮ್ಮ ದೂರಿನಲ್ಲಿ ಸ್ಪೀಕರ್ಗೆ ಮನವಿ ಮಾಡಿದ್ದಾರೆ.
Next Story