Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಾರತೀಯ ಭಾಷೆಯಲ್ಲಿಯೇ ಸಾಹಿತ್ಯ...

ಭಾರತೀಯ ಭಾಷೆಯಲ್ಲಿಯೇ ಸಾಹಿತ್ಯ ರಚನೆಯಾಗಲಿ: ಚಂದ್ರಶೇಖರ ಕಂಬಾರ

ವಾರ್ತಾಭಾರತಿವಾರ್ತಾಭಾರತಿ21 March 2019 9:08 PM IST
share
ಭಾರತೀಯ ಭಾಷೆಯಲ್ಲಿಯೇ ಸಾಹಿತ್ಯ ರಚನೆಯಾಗಲಿ: ಚಂದ್ರಶೇಖರ ಕಂಬಾರ

ಬೆಂಗಳೂರು, ಮಾ.21: ಭಾರತೀಯ ಭಾಷೆಗಳಲ್ಲಿಯೇ ಬಹುಪಾಲು ಸಾಹಿತ್ಯ ರಚನೆಯಾಗುವ ವಾತಾವರಣ ನಿರ್ಮಿಸಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ ಹೇಳಿದರು.

ಗುರುವಾರ ನಗರದ ಸೆಂಟ್ರಲ್ ಕಾಲೇಜಿನ ಕೆನರಾ ಬ್ಯಾಂಕ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಸಭಾಂಗಣದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಏರ್ಪಡಿಸಿದ್ದ, ವಿಶ್ವ ಕಾವ್ಯ ದಿನದ ಅಂಗವಾಗಿ ‘ಪೃಥ್ವಿ; ಕಾವೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಭಾಷೆಗಳಲ್ಲಿ ಬಹುಪಾಲು ಸಾಹಿತ್ಯ ರಚನೆಯಾಗಬೇಕು. ಆದರೆ, ಪಾಶ್ಚಿಮಾತ್ಯದ ಚಿಂತನೆಯಲ್ಲಿ ಮುಳುಗುವುದು ಸರಿಯಲ್ಲ. ನೆಲ ಸಂವೇದನೆ ಕಾಪಾಡಿಕೊಂಡು ಪಾಶ್ಚಿಮಾತ್ಯಕ್ಕೆ ಪರ್ಯಾಯ ಸಾಹಿತ್ಯ ರಚಿಸುವಲ್ಲಿ ಯಶಸ್ವಿ ಕಾಣಬೇಕು ಎಂದು ಅಭಿಪ್ರಾಯಪಟ್ಟರು.

ಗುಜರಾತಿ ಭಾಷೆಯ ಹಿರಿಯ ಕವಿ ಸೀತಾಂಶು ಯಶಸ್ಚಂದ್ರ ಮಾತನಾಡಿ, ಭೂಮಿ ಒಂದು ಭೋಗದ ವಸ್ತುವಲ್ಲ. ಅದಕ್ಕೆ ತನ್ನದೇ ಆದ ಅಸ್ತಿತ್ವವಿದೆ. ತಾಯಿ ಮತ್ತು ಮಾತೃ ಭೂಮಿ ಸ್ವರ್ಗಕ್ಕೆ ಸಮಾನವಾದದ್ದು ಎಂದರು.

ರಾಜರ ಆಳ್ವಿಕೆಯಲ್ಲಿ ಭೂಮಿಯನ್ನು ಒಂದು ಭೋಗದ ವಸ್ತುವಿನ ರೀತಿಯಲ್ಲಿ ನೋಡಲಾಗುತ್ತಿತ್ತು. ಭೂಪತಿ, ಭೂಮಿಯ ಒಡೆಯ ಎಂದು ಅಹಂಕಾರದಿಂದ ಜಂಭಪಟ್ಟುಕೊಳ್ಳುತ್ತಿದ್ದ ರಾಜರನ್ನು ವಿಮರ್ಶಕರು ತಾಯಿಗಂಡರು ಎಂಬ ಕಾರವಾದ ಪದ ಬಳಕೆಯಿಂದ ಕರೆದಿದ್ದಾರೆ ಎಂದು ನುಡಿದರು.

ರಾಜರ ಪ್ರಭುತ್ವ ಕೊನೆಗೊಳ್ಳುತ್ತಿದ್ದಂತೆ ಭೂಮಿ ಎಂಬ ಪದಕ್ಕೆ ವಿಶಾಲವಾದ ಅರ್ಥ ಬಂದಿತು. ರೈತನನ್ನು ಭೂಮಿ ತಾಯಿಯ ಚೊಚ್ಚಲ ಮಗ, ಮಣ್ಣಿನ ಮಗ ಎಂದೆಲ್ಲ ಕರೆಯಲಾಯಿತು. ಭೂಮಿಯನ್ನು ಪೂಜನೀಯ ಭಾವನೆಯಿಂದ ಕಾಣಲಾಯಿತು. ಜನಪದ ಸಾಹಿತ್ಯದಲ್ಲೂ ಭೂಮಿ ತಾಯಿಯೇ ಮೂಲ ದೇವತೆ ಎಂದು ಹೇಳಿದರು.

ತಾಯಿ ಎಂದರೆ ಮಹತ್ವವಾದ ಸಂಬಂಧ, ಅಮ್ಮ ಎನ್ನುವ ಪದಕ್ಕೆ ಎಲ್ಲಾ ಭಾಷಾ ಸಾಹಿತ್ಯದಲ್ಲೂ ಗಂಭೀರವಾದ ಚಿಂತನೆ ನಡೆಸಲಾಗಿದೆ. ಹಲವು ಕಾವ್ಯಗಳಲ್ಲಿ ತಾಯಿಯನ್ನು ಕಂಡುಕೊಂಡಿದ್ದಾರೆ, ಮೊದಲನೆಯವರಾಗಿ ಭೂಮಿ ತಾಯಿ, ವಿಶ್ವಮಾತೆ, ಭಾರತ ಮಾತೆ, ಮಾತೃಭಾಷೆ ಹಾಗೂ ಜನ್ಮ ನೀಡಿದ ತಾಯಿ ಎಂಬ ವಿಶಾಲವಾದ ಆರ್ಥ ನೀಡಿದ್ದಾರೆ ಎಂದು ಅಭಿಪ್ರಾಯಿಸಿದರು.

ಕಾವೋತ್ಸವದಲ್ಲಿ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿ ಕೆ.ಶ್ರೀನಿವಾಸರಾವ್, ಪ್ರಾದೇಶಿಕ ಕಾರ್ಯದರ್ಶಿ ಎಸ್.ಪಿ.ಮಹಾಲಿಂಗೇಶ್ವರ ಭಟ್, ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X