Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಯೋಗ ಸೃಷ್ಟಿಗೆ ವಿಫಲ: ಬಿಜೆಪಿ...

ಉದ್ಯೋಗ ಸೃಷ್ಟಿಗೆ ವಿಫಲ: ಬಿಜೆಪಿ ವಿರುದ್ಧ 50 ನಗರಗಳಲ್ಲಿ ಪ್ರಚಾರ ನಡೆಸಲು 70 ಸಂಘಟನೆಗಳ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ21 March 2019 10:30 PM IST
share
ಉದ್ಯೋಗ ಸೃಷ್ಟಿಗೆ ವಿಫಲ: ಬಿಜೆಪಿ ವಿರುದ್ಧ 50 ನಗರಗಳಲ್ಲಿ ಪ್ರಚಾರ ನಡೆಸಲು 70 ಸಂಘಟನೆಗಳ ನಿರ್ಧಾರ

ಹೊಸದಿಲ್ಲಿ, ಮಾ.21: ಉದ್ಯೋಗ ಸೃಷ್ಟಿಸುವಲ್ಲಿ ನರೇಂದ್ರ ಮೋದಿ ಸರಕಾರದ ವೈಫಲ್ಯದ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ದೇಶದಾದ್ಯಂತ 70 ಸಂಘಟನೆಗಳು ಒಗ್ಗೂಡಿ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ನಡೆಸಲು ನಿರ್ಧರಿಸಿವೆ ಎಂದು ಸಂಘಟನೆಯ ಮುಖಂಡರು ಸೋಮವಾರ ತಿಳಿಸಿದ್ದಾರೆ.

ಬಹುತೇಕ ಎಡಪಕ್ಷಗಳ ಬೆಂಬಲಿತ ಸಂಘಟನೆಗಳ ವೇದಿಕೆಯಾಗಿರುವ ‘ಯಂಗ್ ಇಂಡಿಯಾ ನ್ಯಾಷನಲ್ ಕಾರ್ಡಿನೇಷನ್ ಕಮಿಟಿ’ (ವೈಐಎನ್‌ಸಿಸಿ)ಯು ಉತ್ತರಪ್ರದೇಶದ ಬದೌನ್‌ನಿಂದ ಎಪ್ರಿಲ್ ಮೊದಲ ವಾರದಲ್ಲಿ ಈ ಅಭಿಯಾನವನ್ನು ಆರಂಭಿಸಲಿದೆ ಎಂದು ಅವರು ತಿಳಿಸಿದ್ದಾರೆ. ಕಳೆದ ಫೆಬ್ರವರಿ 7ರಂದು ಸರಕಾರದ ವಿರುದ್ಧ ವೈಐಎನ್‌ಸಿಸಿ ರ್ಯಾಲಿಯನ್ನು ಆಯೋಜಿಸಿತ್ತು. ಇದರಲ್ಲಿ ಪಾಲ್ಗೊಂಡಿದ್ದ ಯುವಜನತೆ ಗುಣಮಟ್ಟದ ಶಿಕ್ಷಣ ಹಾಗೂ ಉದ್ಯೋಗದ ಕುರಿತು ಸರಕಾರ ನೀಡಿದ್ದ ಭರವಸೆ ಈಡೇರದ ಬಗ್ಗೆ ಸರಕಾರವನ್ನು ಪ್ರಶ್ನಿಸಿದ್ದರು.

ಇದೀಗ ಲೋಕಸಭಾ ಚುನಾವಣೆಯಲ್ಲೂ ಈ ವಿಷಯವನ್ನು ಮುಂದಿಟ್ಟುಕೊಂಡು ಮೋದಿ ವಿರುದ್ಧ ಪ್ರಚಾರ ನಡೆಸಲು ನಿರ್ಧರಿಸಲಾಗಿದೆ ಎಂದು ವಿದ್ಯಾರ್ಥಿಗಳ ಸಂಘಟನೆ ‘ಎಐಎಸ್‌ಎ’ದ ಸದಸ್ಯ ಎನ್ ಸಾಯಿಬಾಲಾಜಿ ಹೇಳಿದ್ದಾರೆ. 2016ರ ಅಕ್ಟೋಬರ್‌ನಿಂದ ನಾಪತ್ತೆಯಾಗಿರುವ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಹುಟ್ಟೂರು ಬದೌನ್‌ನಿಂದ ಅಭಿಯಾನ ಆರಂಭಿಸಲು ನಿರ್ಧರಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಸರಕಾರ ಪ್ರತೀ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಮೋದಿ ಭರವಸೆ ನೀಡಿದ್ದರು. ಆದರೆ 2 ಸಾವಿರ ಉದ್ಯೋಗವನ್ನೂ ಅವರು ನೀಡಿಲ್ಲ. ಆದ್ದರಿಂದ ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕದಳವು ಮುಂಬರುವ ಚುನಾವಣೆಯಲ್ಲಿ ಸರಕಾರದ ವಿರುದ್ಧ ಮತ ಚಲಾಯಿಸುವಂತೆ ಜನತೆಯನ್ನು ಒತ್ತಾಯಿಸಲಿದೆ ಎಂದು ಸಮಾಜವಾದಿ ಯುವಜನ ಸಭಾದ ನಿಸಾರ್ ಅಹ್ಮದ್ ಹೇಳಿದ್ದಾರೆ.

ಅಲಹಾಬಾದ್‌ನಲ್ಲಿ ಸ್ವಚ್ಛತಾ ಕಾರ್ಮಿಕರ ಪಾದ ತೊಳೆಯುವ ಮೂಲಕ ಮೋದಿ ನಾಟಕವಾಡಿದ್ದಾರೆ. ಅವರಿಗೆ ಸ್ವಚ್ಛತಾ ಕಾರ್ಮಿಕರ ಬಗ್ಗೆ ನಿಜವಾಗಿಯೂ ಕಾಳಜಿಯಿದ್ದರೆ ಅವರಿಗೆ ಉದ್ಯೋಗ ಸೃಷ್ಟಿಸಲಿ ಎಂದು ‘ಆಲ್ ಇಂಡಿಯಾ ರೈಲ್ವೇ ಅಪ್ರೆಂಟಿಸಸ್’ನ ಮುಖಂಡ ಆಶಿಷ್ ಹೇಳಿದ್ದಾರೆ. ಸರಕಾರ ಆರೋಗ್ಯ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು ಸರಕಾರಿ ಆಸ್ಪತ್ರೆಗಳ ಕರುಣಾಜನಕ ಪರಿಸ್ಥಿತಿಯಿಂದಾಗಿ ರೋಗಿಗಳು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವಂತಾಗಿದೆ. ತಾವು ದ್ವಿತೀಯ ದರ್ಜೆಯ ಪ್ರಜೆಗಳೆಂದು ಬಡಜನರು ಭಾವಿಸುವಂತೆ ಸರಕಾರ ಮಾಡಿದೆ ಎಂದು ಎಐಐಎಂಎಸ್‌ನ ನಿವಾಸಿ ವೈದ್ಯರ ಸಂಘದ ಮಾಜಿ ಅಧ್ಯಕ್ಷ ಹರ್ಜಿತ್ ಸಿಂಗ್ ಭಟ್ಟಿ ಹೇಳಿದ್ದಾರೆ.

ತಾನು ಮೋದಿಯನ್ನು ವಿರೋಧಿಸುತ್ತಿಲ್ಲ. ಆದರೆ ಈಗಿನ ಸರಕಾರ ಆರೆಸ್ಸೆಸ್ ಸಿದ್ಧಾಂತದಂತೆ ಕಾರ್ಯ ನಿರ್ವಹಿಸುವುದನ್ನು ವಿರೋಧಿಸುತ್ತೇನೆ ಎಂದು ಎಸ್‌ಎಫ್‌ಐ ನಾಯಕಿ ದೀಪ್ಷಿತಾ ದತ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X