Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಕತೆಗಳ ಹಿಂದಿನ ಕತೆ-ಸಂಶೋಧನಾ ಕೃತಿ

ಕತೆಗಳ ಹಿಂದಿನ ಕತೆ-ಸಂಶೋಧನಾ ಕೃತಿ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ22 March 2019 12:08 AM IST
share
ಕತೆಗಳ ಹಿಂದಿನ ಕತೆ-ಸಂಶೋಧನಾ ಕೃತಿ

ಕನ್ನಡ ಸಣ್ಣ ಕತೆಗಳಿಗೆ ಸುದೀರ್ಘ ಇತಿಹಾಸವಿದೆ. ವಡ್ಡಾರಾಧನೆಯಿಂದ ಹಿಡಿದು ಇತ್ತೀಚಿನ ನ್ಯಾನೋ ಕತೆಗಳವರೆಗೆ ಕಾಲಕಾಲಕ್ಕೆ ಕತೆಗಳು ವಿಭಿನ್ನವಾಗಿ ಸ್ಪಂದಿಸುತ್ತಾ ಬಂದಿವೆೆ. ಧಾರ್ಮಿಕ ಹಿನ್ನೆಲೆಯಾಗಿ ಹುಟ್ಟಿದ ಕತೆಗಳು ನಿಧಾನಕ್ಕೆ ಅಧ್ಯಾತ್ಮಿಕ, ಸಾಮಾಜಿಕ ವಿಷಯಗಳಿಗೆ ಸ್ಪಂದಿಸುತ್ತಾ ಹೋಯಿತು. ಕತೆಗಳು ಜನಕೇಂದ್ರಿತವಾದಂತೆಯೇ ಸಣ್ಣ ಕತೆಗಳು ತಮ್ಮ ವ್ಯಾಪ್ತಿಯನ್ನು ಹಿಗ್ಗಿಸಿದವು. ಕತೆಗಳೆನ್ನುವುದು ಕೇವಲ ಮನರಂಜನೆಗಷ್ಟೇ ಸೀಮಿತವಾಗುಳಿಯದೆ ಸಾಮಾಜಿಕ, ರಾಜಕೀಯ ಪ್ರತಿಕ್ರಿಯೆ ಗಳಾಗಿಯೂ ಹೊರಹೊಮ್ಮ ತೊಡಗಿದವು. ಇದೀಗ ಕನ್ನಡದ ಸಣ್ಣ ಕತೆಗಳ ಚರಿತ್ರೆಯನ್ನು ಒಟ್ಟುಗೂಡಿಸುವ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಡಿದೆ. ಡಾ. ಜಿ. ಆರ್. ತಿಪ್ಪೇಸ್ವಾಮಿ ಅವರು, ಸಣ್ಣ ಕತೆ ನಡೆದು ಬಂದ ದಾರಿಯನ್ನು ಅನ್ವೇಷಿಸಿದ್ದಾರೆ.
 ಆರಂಭದಲ್ಲಿ ಸಣ್ಣ ಕತೆಗಳ ಪ್ರಾಚೀನತೆಯನ್ನು ಲೇಖಕರು ಗುರುತಿಸುತ್ತಾರೆ. ಜೈನಧರ್ಮದ ಪ್ರಚಾರದ ಹಿನ್ನೆಲೆಯಲ್ಲಿ ಹುಟ್ಟಿಕೊಂಡ ವಡ್ಡಾರಾಧನೆ ಕತೆಗಳು ನಿಧಾನಕ್ಕೆ ಪಡೆಯುವ ವಿಕಾಸದ ಹಂತಗಳನ್ನು ಅವರು ವಿವರಿಸುತ್ತಾರೆ. ಮುದ್ದಣನ ಕಾಲಘಟ್ಟದಲ್ಲಿ ಗದ್ಯ ಪಡೆದುಕೊಳ್ಳುವ ತಿರುವು, ಕನ್ನಡ ಕತೆಗಳ ಮೇಲಿನ ಪಾಶ್ಚಾತ್ಯ ಪ್ರಭಾವ ಇತ್ಯಾದಿಗಳನ್ನು ಮೊದಲ ಅಧ್ಯಾಯದಲ್ಲಿ ಲೇಖಕರು ಚರ್ಚಿಸುತ್ತಾರೆ. ಪಂಜೆ ಮಂಗೇಶರಾಯರು, ಕೆರೂರು ವಾಸುದೇವಾಚಾರ್ಯರು, ಎಂ. ಎನ್. ಕಾಮತ್, ಮಾಸ್ತಿ, ನವರತ್ನ ರಾಮರಾಯ, ಅಜ್ಜಂಪುರ ಸೀತಾರಾಮ್...ಹೀಗೆ ಕನ್ನಡದ ಹಿರಿಯ ೇಖಕರ ಮೂಲಕ ಕನ್ನಡ ಕತೆಗಳು ನಿಧಾನಕ್ಕೆ ಹೇಗೆ ಪುಷ್ಟಿಗೊಳ್ಳುತ್ತಾ ಹೋದವು   ಎನ್ನುವುದನ್ನು ವಿವರಿಸುತ್ತಾರೆ.
 ಬಳಿಕ ನವೋದಯ, ಪ್ರಗತಿಶೀಲ, ನವ್ಯದ ಮೂಲಕ ಕತೆಗಳನ್ನು ಗುರುತಿಸುತ್ತಾರೆ. ಸ್ವಾತಂತ್ರ ಹೋರಾಟವೂ ಕತೆಗಳ ಮೇಲೆ ತನ್ನದೇ ಪ್ರಭಾವವನ್ನು ಬೀರಿದ್ದು, ನವೋದಯ ಕಾಲದಲ್ಲಿ ಹುಟ್ಟಿದ ಕತೆಗಾರರು ಈ ಹೋರಾಟಗಳನ್ನು ತಮ್ಮ ವಸ್ತುವಾಗಿ ಆರಿಸಿರುವುದನ್ನು ಲೇಖಕರು ಗಮನಿಸುತ್ತಾರೆ. ನವೋದಯದಲ್ಲಿ ಅತ್ಯುತ್ಸಾಹದಿಂದ ತೊಡಗಿಕೊಂಡ ಮಹಿಳಾ ಲೇಖಕಿಯರ ಪಟ್ಟಿಯನ್ನು, ಅವರ ಹಿನ್ನೆಲೆಗಳನ್ನು ಕೃತಿ ದಾಖಲಿಸುತ್ತದೆ. 1970ರಿಂದ 2000ದ ವರೆಗಿನ ಕತೆಗಳಲ್ಲಿನ ದಲಿತ ಬಂಡಾಯ, ದಲಿತ ಸಂವೇದನೆ, ಸ್ತ್ರೀ ಸಂವೇದನೆ, ಮುಸ್ಲಿಮ್ ಸಂವೇದನೆಗಳನ್ನು ಲೇಖಕರು ಗುರುತಿಸುತ್ತಾರೆ. ಹೊಸ ಕತೆಗಾರರ ಹೊಸ ಪ್ರಯೋಗಗಳ ಕಡೆಗೂ ಅವರು ಬೆಳಕು ಚೆಲ್ಲುತ್ತಾರೆ. ಕನ್ನಡ ಕತೆಗಳ ಇತಿಹಾಸವನ್ನು ನಮ್ಮದಾಗಿಸಿಕೊಳ್ಳುವ ನಿಟ್ಟಿನಲ್ಲಿ ಈ ಕೃತಿ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು, ಬರಹಗಾರರಿಗೆ ಈ ಕೃತಿ ಪ್ರಯೋಜನಕಾರಿಯಾಗಿದೆ.456 ಪುಟಗಳ ಈ ಕೃತಿಯ ಮುಖಬೆಲೆ 350 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X