Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೊರಕದ ಮಳೆಹಾನಿ ಪರಿಹಾರ: ಚುನಾವಣೆ...

ದೊರಕದ ಮಳೆಹಾನಿ ಪರಿಹಾರ: ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಕೊಡಗು ಪ್ರಕೃತಿ ವಿಕೋಪ

ವಾರ್ತಾಭಾರತಿವಾರ್ತಾಭಾರತಿ22 March 2019 5:25 PM IST
share
ದೊರಕದ ಮಳೆಹಾನಿ ಪರಿಹಾರ: ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಮಡಿಕೇರಿ, ಮಾ.22: ಕಳೆದ ಸಾಲಿನ ಪ್ರಕೃತಿ ವಿಕೋಪದ ಸಂದರ್ಭ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿರುವ ನಗರದ ಮುಳಿಯ ಬಡಾವಣೆ ಹಾಗೂ ವಿದ್ಯಾನಗರ ರಸ್ತೆ ನಿವಾಸಿಗಳಿಗೆ ಅನಾಹುತ ನಡೆದು ಹಲವು ತಿಂಗಳುಗಳೇ ಕಳೆದಿದ್ದರೂ ಯಾವುದೇ ಪರಿಹಾರ ದೊರಕದೆ ಇರುವುದರಿಂದ ಮುಂಬರುವ ಲೋಕಸಭೆ ಮತ್ತು ನಗರಸಭೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಮುಳಿಯ ಬಡಾವಣೆಯ ನಿವಾಸಿಗಳ ಸಂಘದ ಅಧ್ಯಕ್ಷ ಪಿ.ಎಂ. ಸುರೇಶ್ ಹಾಗೂ ಇತರರು, ಕಳೆದ ಆಗಸ್ಟ್ 15ರಿಂದ ವಾರಗಳ ಕಾಲ ಸುರಿದ ಭಾರೀ ಮಳೆದ ಮುಳಿಯ ಬಡಾವಣೆ ಸೇರಿದಂತೆ ವಿದ್ಯಾನಗರ ರಸ್ತೆಯ ಆಸುಪಾಸಿನ ನೂರಕ್ಕೂ ಅಧಿಕ ಮನೆಗಳಿಗೆ  ನೀರು ನುಗ್ಗಿ, ಗೃಹೋಪಯೋಗಿ ವಸ್ತುಗಳು, ವಾಹನಗಳು ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಹಾನಿಗೀಡಾಗಿವೆ. ಅಲ್ಲದೆ, ಮನೆಗಳು, ತಡೆಗೋಡೆಗಳು ಬಿರುಕು ಬಿಟ್ಟು ನಿಂತಿವೆಯೆಂದು ತಿಳಿಸಿದರು.

ಮಳೆಗಾಲದಲ್ಲಿ ಮುಳಿಯ ಬಡಾವಣೆ ಮತ್ತು ಸುತ್ತಮುತ್ತಲ ಭಾಗ ಸಮುದ್ರದಂತೆ ಭಾಸವಾಗುತ್ತಿತ್ತು. ಇಂತಹ ಪರಿಸ್ಥಿತಿಯಲ್ಲಿ ದೋಣಿಯ ಮೂಲಕ ಅಲ್ಲಿನ ನಿವಾಸಿಗಳನ್ನು ಪಾರು ಮಾಡಲಾಗಿತ್ತಾದರು, ಆ ಬಳಿಕ ನಗರ ಸಭೆಯಿಂದ ಯಾವುದೇ ಸ್ಪಂದನ ದೊರಕಿಲ್ಲವೆಂದು ದೂರಿದರು. 

ಕುಶಾಲನಗರದಲ್ಲಿ ಕಾವೇರಿ ನದಿ ನೀರು ಮನೆಗಳಿಗೆ ನುಗ್ಗಿ ಹಾನಿಯಾದ ಸಂದರ್ಭ ಅಲ್ಲಿನ ಪಟ್ಟಣ ಪಂಚಾಯತ್ ನವರು ಮುತುವರ್ಜಿ ವಹಿಸಿ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡುವುದರೊಂದಿಗೆ ತಲಾ 53,800 ರೂ.ಗಳ ಪರಿಹಾರವನ್ನು ಒದಗಿಸಿದ್ದರು. ಅದೇ ರೀತಿ ನಗರಸಭೆಯಿಂದ ತಮಗೂ ಪರಿಹಾರ ಒದಗಿಸಬೇಕೆಂದು ನಗರಸಭೆಗೆ ಅರ್ಜಿ ಸಲ್ಲಿಸಲಾಗಿದ್ದರೂ, ಅಲ್ಲಿನ ಅಧಿಕಾರಿಗಳಾಗಲಿ, ಕಂದಾಯ ಅಧಿಕಾರಿಗಳಾಗಲಿ ಯಾವುದೇ ಸ್ಪಂದನೆ ನೀಡಿಲ್ಲ ಎಂದು ಆರೋಪಿಸಿದರು.

ಅರ್ಜಿ ಸಲ್ಲಿಸಿ ನಾಲ್ಕು ತಿಂಗಳು ಕಳೆದರು ನಗರಸಭೆಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ಶ್ರೀವಿದ್ಯಾ ಅವರನ್ನು ಸಂಪರ್ಕಿಸಿದಾಗ, ಇದುವರೆಗೂ ಅರ್ಜಿ ಸಲ್ಲಿಸದೆ ವಿಳಂಬ ಮಾಡಿರುವ ಬಗ್ಗೆ ತಿಳಿಸಿದ್ದರಲ್ಲದೆ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಹೇಳಿದ್ದರು ಮತ್ತು ಅರ್ಜಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದರು ಎಂದು ತಿಳಿಸಿದರು.

ಆ ಬಳಿಕ ನಗರಸಭೆ ಅಧ್ಯಕ್ಷರನ್ನು ಸಂಪರ್ಕಿಸಿದಾಗ ಅವರು ನಗರಸಭೆಯಿಂದ ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದರು ಎಂದು ಟೀಕಿಸಿದ ಅವರು, ಕುಶಾಲನಗರ ಪಟ್ಟಣ ಪಂಚಾಯತ್ ನ ಜನ ಪ್ರತಿನಿಧಿಗಳಿಗೆ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡಲು ಸಾಧ್ಯವಾಗಿರುವಾಗ ನಗರಸಭೆಯ ಜನಪ್ರತಿನಿಧಿಗಳಿಗೆ ಅದು ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರಲ್ಲದೆ, ಇಂತಹ ಜನಪ್ರತಿನಿಧಿಗಳ ಅಗತ್ಯ ಮಡಿಕೇರಿ ಜನತೆಗೆ ಇದೆಯೇ ಎಂದು ಬೇಸರ ವ್ಯಕ್ತಪಡಿಸಿದರು.

ಸಂತ್ರಸ್ತರ ಪೈಕಿ ಹಲವಾರು ಮಂದಿ ಮಾಜಿ ಸೈನಿಕರೂ ಇದ್ದು, ಮಡಿಕೇರಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ ಸಂದರ್ಭ ಮಾಜಿ ಸೈನಿಕರು ಅರ್ಜಿ ನೀಡಿದಾಗ, ಸೈನಿಕ ಇಲಾಖೆಯ ಮೂಲಕ ಅರ್ಜಿ ನೀಡುವಂತೆ ಸೂಚಿಸಿದ್ದರು. ಆ ಬಳಿಕ ಇಲಾಖೆಗೆ ಅರ್ಜಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ ಎಂದು ಹೇಳಿದರು. 

ಸಂತ್ರಸ್ತರಿಗೆ ಪರಿಹಾರ ದೊರಕಿಸಿಕೊಡುವಂತೆ ನಗರಸಭೆ, ಕಂದಾಯ ಇಲಾಖೆ, ಶಾಸಕರು, ಉಸ್ತುವಾರಿ ಸಚಿವರಾದಿಯಾಗಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿ ನೂರಾರು ಬಾರಿ ಕಚೇರಿಗಳಿಗೆ ಅಲೆದಾಡಿದರೂ ಸಂತ್ರಸ್ತರ ನೋವಿಗೆ ಯಾರಿಂದಲೂ ಸ್ಪಂದನೆ ದೊರಕಿಲ್ಲ. ಈ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭೆ ಹಾಗೂ ನಗರಸಭೆ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಅವರು ಹೇಳಿದರು.

ಮುಳಿಯ ಬಡಾವಣೆಯ ಮೂಲಕ ಹಾದು ಹೋಗುವ ರಾಜ ಕಾಲುವೆಯನ್ನು ಅಭಿವೃದ್ಧಿ ಪಡಿಸಬೇಕು. ವಿದ್ಯಾನಗರ ರಸ್ತೆಯಲ್ಲಿರುವ ಅತಿ ಕಿರಿದಾಗಿರುವ ಸೇತುವೆಯಿಂದಾಗಿ ಈ ಪ್ರದೇಶ ಮುಳುಗಡೆಯಾಗುತ್ತಿದ್ದು, ಅಲ್ಲಿ ದೊಡ್ಡ ಸೇತುವೆ ನಿರ್ಮಾಣ ಮಾಡಬೇಕು. ಅಲ್ಲದೆ, ರಾಜಕಾಲುವೆಯುದ್ದಕ್ಕೂ ತಡೆಗೋಡೆ ನಿರ್ಮಿಸಿ ಕಾಲುವೆಯ ನೀರು ಮನೆಗಳಿಗೆ ನುಗ್ಗದಂತೆ ತಡೆಯಬೇಕು ಎಂದು ಅವರು ಇದೇ ಸಂದರ್ಭ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಕೆ.ಟಿ. ಗಣೇಶ್, ಸಂಜು ಅಚ್ಚಯ್ಯ, ಪಿ.ಎನ್. ಬಸಪ್ಪ, ಜಯಂತಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X