ಪೌರಾಡಳಿತ ಸಚಿವ ಶಿವಳ್ಳಿ ನಿಧನ: ಮುಖ್ಯಮಂತ್ರಿ ಕುಮಾರಸ್ವಾಮಿ ದಿಗ್ಭ್ರಮೆ
![ಪೌರಾಡಳಿತ ಸಚಿವ ಶಿವಳ್ಳಿ ನಿಧನ: ಮುಖ್ಯಮಂತ್ರಿ ಕುಮಾರಸ್ವಾಮಿ ದಿಗ್ಭ್ರಮೆ ಪೌರಾಡಳಿತ ಸಚಿವ ಶಿವಳ್ಳಿ ನಿಧನ: ಮುಖ್ಯಮಂತ್ರಿ ಕುಮಾರಸ್ವಾಮಿ ದಿಗ್ಭ್ರಮೆ](https://www.varthabharati.in/sites/default/files/images/articles/2019/03/22/183360.jpg)
ಸಿ.ಎಸ್.ಶಿವಳ್ಳಿ
ಬೆಂಗಳೂರು, ಮಾ. 22: ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರ ನಿಧನ ತೀವ್ರ ಆಘಾತ ಉಂಟುಮಾಡಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.
ಧಾರವಾಡದ ಕಟ್ಟಡ ದುರಂತ ಸ್ಥಳದಲ್ಲಿ ಮೂರು ದಿನಗಳಿಂದ ಉಪಸ್ಥಿತರಿದ್ದು ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದ ಶಿವಳ್ಳಿ ಅವರು ಇನ್ನಿಲ್ಲ ಎನ್ನುವುದನ್ನು ನನಗೆ ನಂಬಲಾಗುತ್ತಿಲ್ಲ. ನಿನ್ನೆಯಷ್ಟೇ ನಾನು ಅವರನ್ನು ಭೇಟಿಯಾಗಿ ರಕ್ಷಣಾ ಕಾರ್ಯಾಚರಣೆ ಕುರಿತು ಚರ್ಚಿಸಿದ್ದೆ ಎಂದು ಅವರು ನೆನಪು ಮಾಡಿಕೊಂಡಿದ್ದಾರೆ.
ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದ ಶಿವಳ್ಳಿ ಅವರು ಜನಾನುರಾಗಿಗಳಾಗಿದ್ದರು. ಅವರ ಸಮಾಜಮುಖಿ ಕೆಲಸ ಅವರಿಗೆ ಹೆಸರು ತಂದಿತ್ತು. ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ನೀಡಲಿ ಎಂದು ಕುಮಾರಸ್ವಾಮಿ ಪ್ರಕಟಣೆಯಲ್ಲಿ ಪ್ರಾರ್ಥಿಸಿದ್ದಾರೆ.
Next Story