Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ಮುಡಿಗೆ ಸತತ ಐದನೇ ಬಾರಿ ಪ್ರಶಸ್ತಿ...

ಭಾರತದ ಮುಡಿಗೆ ಸತತ ಐದನೇ ಬಾರಿ ಪ್ರಶಸ್ತಿ ಗರಿ

ಸ್ಯಾಫ್ ಮಹಿಳಾ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ22 March 2019 11:55 PM IST
share
ಭಾರತದ ಮುಡಿಗೆ ಸತತ ಐದನೇ ಬಾರಿ ಪ್ರಶಸ್ತಿ ಗರಿ

ವಿರಾಟ್‌ನಗರ(ನೇಪಾಳ), ಮಾ.22: ಆತಿಥೇಯ ನೇಪಾಳದ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತದ ಮಹಿಳಾ ತಂಡ ಸ್ಯಾಫ್ ಫುಟ್ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಪಾರಮ್ಯ ಮುಂದುವರಿಸಿ ಸತತ ಐದನೇ ಬಾರಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಶುಕ್ರವಾರ ಇಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೇಪಾಳವನ್ನು 3-1 ಗೋಲುಗಳ ಅಂತರದಿಂದ ಮಣಿಸಿದೆ. ಈ ಗೆಲುವಿನೊಂದಿಗೆ ಟೂರ್ನಮೆಂಟ್‌ನ ಇತಿಹಾಸದಲ್ಲಿ ತನ್ನ ಅಜೇಯ ಗೆಲುವಿನ ಓಟವನ್ನು 23 ಪಂದ್ಯಗಳಿಗೆ ವಿಸ್ತರಿಸಿದೆ.

ಸಾಹಿದ್ ರಂಗಶಾಲಾ ಸ್ಟೇಡಿಯಂನಲ್ಲಿ ನಡೆದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಭಾರತದ ಪರ ದಾಲಿಮಾ ಚಿಬ್ಬೆರ್, ಗ್ರೇಸ್ ಡಾಂಗ್‌ಮೆ ಹಾಗೂ ಬದಲಿ ಆಟಗಾರ್ತಿ ಅಂಜು ತಮಂಗ್ ತಲಾ ಒಂದು ಗೋಲು ದಾಖಲಿಸಿದರು.

ಬಾಂಗ್ಲಾದೇಶ ವಿರುದ್ಧ ಸೆಮಿ ಫೈನಲ್‌ನಲ್ಲಿ ದಾಲಿಮಾ ಭಾರತದ ಗೋಲಿನ ಖಾತೆ ತೆರೆದಿದ್ದರು. ಫೈನಲ್ ಪಂದ್ಯದಲ್ಲೂ ಉತ್ತಮ ಪ್ರದರ್ಶನ ಪುನರಾವರ್ತಿಸಿದ ದಾಲಿಮಾ 26ನೇ ನಿಮಿಷದಲ್ಲಿ ಫ್ರೀ-ಕಿಕ್‌ನಲ್ಲಿ ಗೋಲ್‌ಕೀಪರ್ ಕಣ್ಣು ತಪ್ಪಿಸಿ ಗೋಲು ಬಾರಿಸಿ ಹಾಲಿ ಚಾಂಪಿಯನ್ ಭಾರತಕ್ಕೆ 1-0 ಮುನ್ನಡೆ ಒದಗಿಸಿಕೊಟ್ಟರು. ಆರು ನಿಮಿಷಗಳ ಬಳಿಕ ರತನ್‌ಬಾಲಾ ದೇವಿ ಭಾರತದ ಮುನ್ನಡೆ ವೃದ್ಧಿಸಲು ಯತ್ನಿಸಿದರು. ಆದರೆ, ಅವರ ಪ್ರಯತ್ನವನ್ನು ನೇಪಾಳದ ಗೋಲ್‌ಕೀಪರ್ ವಿಫಲಗೊಳಿಸಿದರು.

34ನೇ ನಿಮಿಷದಲ್ಲಿ ಸಬಿತ್ರಾ ಹೆಡರ್ ಮೂಲಕ ಗೋಲು ಗಳಿಸಿ ಸ್ಕೋರನ್ನು 1-1ರಿಂದ ಸಮಬಲಗೊಳಿಸಿದರು. ಮೊದಲಾರ್ಧದ ಅಂತ್ಯಕ್ಕೆ ಉಭಯ ತಂಡಗಳು ತಲಾ ಒಂದು ಗೋಲು ಗಳಿಸಿದವು. 69ನೇ ನಿಮಿಷದಲ್ಲಿ ಭಾರತದ ಪ್ರಯತ್ನ ಫಲ ನೀಡಿದ್ದು, ಸಂಜು ಆಕರ್ಷಕ ಗೋಲು ಗಳಿಸಿ 2-1 ಮುನ್ನಡೆ ಒದಗಿಸಿಕೊಟ್ಟರು. ಕೋಚ್ ಮೈಮೊಲ್ ರಾಕಿ ದ್ವಿತೀಯಾರ್ಧದಲ್ಲಿ ಸಂಧ್ಯಾ ಬದಲಿಗೆ ಅಂಜು ತಮಂಗ್‌ಗೆ ಅವಕಾಶ ನೀಡಿದರು. ಕೋಚ್ ಅವರ ಈ ನಿರ್ಧಾರ ತಕ್ಷಣವೇ ಫಲ ನೀಡಿದ್ದು, 78ನೇ ನಿಮಿಷದಲ್ಲಿ ಅಂಜು ಭಾರತದ ಪರ ಮೂರನೇ ಆಕರ್ಷಕ ಗೋಲು ಗಳಿಸಿ 3-1 ಮುನ್ನಡೆ ಒದಗಿಸಿದರು.

ನೇಪಾಳ ಕೊನೆಯ ತನಕ ಎದುರಾಳಿಯ ರಕ್ಷಣಾಕೋಟೆಯನ್ನು ಬೇಧಿಸಲು ಯತ್ನಿಸಿದ್ದು, ಆದರೆ,ಭಾರತ ಯಾವುದಕ್ಕೂ ಜಗ್ಗದೇ ಟೂರ್ನಿಯಲ್ಲಿ ತನ್ನ ಅಜೇಯ ಓಟ ಮುಂದುವರಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X