Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆಯಲ್ಲಿ ಮ್ಯಾರಥಾನ್ ಸ್ಪರ್ಧೆ,...

ಮೂಡುಬಿದಿರೆಯಲ್ಲಿ ಮ್ಯಾರಥಾನ್ ಸ್ಪರ್ಧೆ, ಸೌಹಾರ್ದ ನಡಿಗೆ

ವಾರ್ತಾಭಾರತಿವಾರ್ತಾಭಾರತಿ24 March 2019 6:55 PM IST
share
ಮೂಡುಬಿದಿರೆಯಲ್ಲಿ ಮ್ಯಾರಥಾನ್ ಸ್ಪರ್ಧೆ, ಸೌಹಾರ್ದ ನಡಿಗೆ

ಮೂಡುಬಿದಿರೆ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದ.ಕ ಜಿಲ್ಲಾ ಮಟ್ಟದ ಮ್ಯಾರಾಥಾನ್ ಸ್ಪರ್ಧೆ, ಹಿರಿಯ ನಾಗರಿಕರಿಗೆ ಸೌಹಾರ್ದ ನಡಿಗೆ ಕಾರ್ಯಕ್ರಮ ರವಿವಾರ ಬೆಳಗ್ಗೆ ಮೂಡುಬಿದಿರೆಯಲ್ಲಿ ಜರಗಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ದ.ಕ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನೇತೃತ್ವ ದಲ್ಲಿ ಸ್ವರಾಜ್ಯಮೈದಾನದಿಂದ ಆರಂಭಗೊಂಡ  ಈ ಮತದಾರರ ಜಾಗೃತಿ ಓಟ, ಮ್ಯಾರಥಾನ್ 2019 ಉದ್ಘಾಟನಾ ಸಮಾರಂಭದಲ್ಲಿ ಮೂಲ್ಕಿ ಚರ್ಚ್‍ನ ರೆ.ಫಾ. ಗೋಮ್ಸ್ ಮಾತನಾಡಿ ಮತದಾನವೇ ನಿಜವಾದ ಪ್ರಜಾಪ್ರಭುತ್ವ, ಮತದಾನದಿಂದ ಪ್ರಜಾಪ್ರಭುತ್ವ ಸದೃಢಗೊಳ್ಳಲು ಸಾಧ್ಯ ಎಂದರು.

16 ವರ್ಷ ಒಳಗಿನ ಮತ್ತು ಮೇಲ್ಪಟ್ಟ ಬಾಲಕ, ಬಾಲಕಿಯರ ಮ್ಯಾರಥಾನ್ 18.ಕಿ.ಮೀ ಓಟ, ಸಾರ್ವಜನಿಕರಿಗೆ ಮತದಾನದ ಕಡೆಗೆ ಸೌಹಾರ್ದ ನಡಿಗೆ ಕಾರ್ಯಕ್ರಮದಲ್ಲಿ 1350 ಓಟಗಾರರು ಸೇರಿದಂತೆ ಸಸಂಘ, ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡರು. 16 ವರ್ಷದ ಒಳಗಿನ ಬಾಲಕ, ಬಾಲಕಿಯರು ಸ್ವರಾಜ್ಯ ಮೈದಾನ ಬಳಿ ಮಾರಿಗುಡಿ ಆವರಣದಿಂದ ಓಟ ಆರಂಭಿಸಿ ಶ್ರೀ ಹನುಮಂತ ದೇವಸ್ಥಾನ ಎದುರಿನ ರಸ್ತೆಯಾಗಿ ಎಡಕ್ಕೆ ತಿರುಗಿ ಜೈನ್‍ಪೇಟೆ, ಅಲಂಗಾರು, ಕೊಡ್ಯಡ್ಕರಸ್ತೆಯಿಂದ ವರ್ತುಲ ರಸ್ತೆಯಾಗಿ ಸ್ವರಾಜ್ಯ ಮೈದಾನ , 16 ವರ್ಷದ ಮೇಲ್ಪಟ್ಟ ಬಾಲಕ, ಬಾಲಕಿಯರು ಸ್ವರಾಜ್ಯ ಮೈದಾನ, ಮುಖ್ಯರಸ್ತೆ, ಶ್ರೀ ಹನುಮಂತ ದೇವಸ್ಥಾನ ಮುಖ್ಯರಸ್ತೆಯಾಗಿ  ಹಳೆಪೊಲೀಸ್‍ಠಾಣೆ, ಜ್ಯೋತಿನಗರ, ಮಹಾವೀರ ಕಾಲೇಜು, ಕೊಡಂಗಲ್ಲು, ಕೋಟೆಬಾಗಿಲು, ಜೈನ್‍ಪೇಟೆ, ಅಲಂಗಾರು, ಕೊಡ್ಯಡ್ಕರಸ್ತೆ, ವರ್ತುಲರಸ್ತೆಯಾಗಿ ಸ್ವರಾಜ್ಯಮೈದಾನದವರೆಗಿನ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದರು. ಸಾರ್ವಜನಿಕರು ಸ್ವರಾಜ್ಯ ಮೈದಾನದಿಂದ ಮುಖ್ಯರಸ್ತೆಯಾಗಿ ಸಾವಿರ ಕಂಬದ ಬಸದಿವರೆಗೆ ಸೌಹಾರ್ದ ನಡಿಗೆಯಲ್ಲಿ ಗಮನ ಸೆಳೆದರು. 

ವಿಜೇತರು: 16 ವರ್ಷ ಮೇಲ್ಪಟ್ಟ  ಬಾಲಕರ ಮ್ಯಾರಥಾನ್: 1. ಶಶಿಧರ್ ಬಿ.ಎಲ್ 2. ಕೆ. ಹನುಮೇಶ,3. ಪ್ರಶಾಂತ್ ಕುಮಾರ್ ಎಂ.ಎಚ್, 4, ಬಸವರಾಜ ನೀಲಪ್ಪ ಗೋಡಿ,5. ಸತೀಶ್ ಹೆಚ್. ಎಂ. (ಎಲ್ಲರೂ ಆಳ್ವಾಸ್)  ಬಾಲಕಿಯರ ವಿಭಾಗದಲ್ಲಿ 1.ಚೈತ್ರಾ ದೇವಾಡಿಗ,2, ಪ್ರಿಯಾ ಎಲ್.ಡಿ, 3. ಮಾಲಾಶ್ರೀ ಎಂ.ಬಿ, 4, ಚೈತ್ರಾ ಪಿ, 5. ದೀಕ್ಷಾ ಬಿ (ಎಲ್ಲರೂ ಆಳ್ವಾಸ್).

16 ವರ್ಷದೊಳಗಿನ ಬಾಲಕರ ಮ್ಯಾರಥಾನ್: 1. ಅಂಜುಮಾನ್ (ಸರ್ಕಾರಿ ಪ್ರೌಢಶಾಲೆ ಬಡಗ ಎಕ್ಕಾರು)2. ಭರಮಪ್ಪ ಬಿ.ಎನ್,3. ರಾಘು ಎ. ಲಮಾಣಿ, 4, ದಶರಥ ,5.ಸೃಜನ್. (ಎಲ್ಲರೂ ಆಳ್ವಾಸ್)  ಬಾಲಕಿಯರ ವಿಭಾಗದಲ್ಲಿ 1.ಚೈತ್ರಾ ಎನ್.ಸಿ,2, ಪ್ರಣಮ್ಯ ಎನ್, 3. ವಿಂಧ್ಯಾ ಎನ್,4, ಪವಿತ್ರಾ ಹೆಚ್.ಕೆ. 5. ಅಂಕಿತಾ ಬಿ.ಐ(ಎಲ್ಲರೂ ಆಳ್ವಾಸ್).

ದ.ಕ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸ್ವೀಪ್ ನೋಡಲ್ ಅಧಿಕಾರಿ ಡಾ. ಸೆಲ್ವಮಣಿ, ಪೋಲೀಸ್ ಕಮಿಶನರ್ ಸಂದೀಪ್ ಪಾಟೀಲ್, ಎಸಿಪಿ ಶ್ರೀನಿವಾಸ್ ಗೌಡ, ತಹಶೀಲ್ದಾರ್ ಸುದರ್ಶನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಸ್ವೀಪ್ ಕಾರ್ಯದರ್ಶಿ ಸುಧಾಕರ್, ತಾಲೂಕು ಒಕ್ಕೂಟದ ಅಧ್ಯಕ್ಷ ಗಿರೀಶ್ ಶೆಟ್ಟಿ,ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ ಉಪಸ್ಥಿತರಿದ್ದರು.  

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ  ಪ್ರದೀಪ್ ಡಿ ಸೋಜಾ ಸ್ವಾಗತಿಸಿದರು. ತಾಲೂಕು ಸಹಾಯಕ ನಿರ್ದೇಶಕಿ ಲಿಲ್ಲಿ ಪಾಯಸ್ ವಂದಿಸಿದರು. ಕ್ರೀಡಾ ನಿರ್ದೇಶಕ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X