Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ಟ್ವಿಟರ್ ಜನಪ್ರಿಯತೆ ಹೆಚ್ಚಿಸಲು...

ತನ್ನ ಟ್ವಿಟರ್ ಜನಪ್ರಿಯತೆ ಹೆಚ್ಚಿಸಲು ಸೆಲೆಬ್ರಿಟಿಗಳೊಂದಿಗೆ ಕಾಣಿಸಿಕೊಳ್ಳುತ್ತಿದ್ದ ಮೋದಿ: ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ24 March 2019 9:13 PM IST
share
ತನ್ನ ಟ್ವಿಟರ್ ಜನಪ್ರಿಯತೆ ಹೆಚ್ಚಿಸಲು ಸೆಲೆಬ್ರಿಟಿಗಳೊಂದಿಗೆ ಕಾಣಿಸಿಕೊಳ್ಳುತ್ತಿದ್ದ ಮೋದಿ: ಅಧ್ಯಯನ ವರದಿ

ಹೊಸದಿಲ್ಲಿ, ಮಾ. 24: ಭಾರತದಲ್ಲಿ 2014ರಲ್ಲಿ ನಡೆದ ಮಹಾ ಚುನಾವಣೆಯ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್‌ನಲ್ಲಿ ತನ್ನ ಜನಪ್ರಿಯತೆಯನ್ನು ವೃದ್ಧಿಸಿಕೊಳ್ಳುವ ಹಾಗೂ ಚುನಾವಣೆಯ ಮಹಾತ್ವಾಕಾಂಕ್ಷೆ ಈಡೇರಿಸಿಕೊಳ್ಳುವ ದೃಷ್ಟಿಯಿಂದ ಅಮಿತಾಬ್ ಬಚ್ಚನ್, ಸಚಿನ್ ತೆಂಡೂಲ್ಕರ್‌ರಂತಹ ಸೆಲೆಬ್ರಿಟಿಗಳ ಜೊತೆ ಸಂಪರ್ಕ ಬೆಳೆಸಿದ್ದರು ಎಂದು ಅಮೆರಿಕದ ಅಧ್ಯಯನ ವರದಿಯೊಂದು ತಿಳಿಸಿದೆ.

ಮಿಚಿಗನ್ ವಿವಿಯಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಜೊಯೊಜೀತ್ ಪಾಲ್ , 2009ರ ಫೆಬ್ರವರಿಯಿಂದ 2015ರ ಅಕ್ಟೋಬರ್‌ವರೆಗಿನ ಅವಧಿಯಲ್ಲಿ ನರೇಂದ್ರ ಮೋದಿಯವರ ಟ್ವಿಟರ್ ಖಾತೆಯ 9 ಸಾವಿರಕ್ಕೂ ಅಧಿಕ ಟ್ವೀಟ್‌ಗಳನ್ನು ಪರಿಶೀಲಿಸಿ ಚುನಾವಣೆಗೆ ಮುನ್ನ ಹಾಗೂ ಚುನಾವಣೆಯ ಬಳಿಕ ಪ್ರಸಿದ್ಧ ವ್ಯಕ್ತಿಗಳೊಂದಿಗೆ ಮೋದಿಯ ಸಂಬಂಧದ ಕುರಿತು ಅಧ್ಯಯನ ನಡೆಸಿದ್ದಾರೆ.

2009ರಲ್ಲಿ ಮೋದಿ ಟ್ವಿಟರ್ ಖಾತೆ ಆರಂಭಿಸಿದ್ದಾರೆ. 2012ರ ಅಕ್ಟೋಬರ್ ವೇಳೆಗೆ ಒಂದು ಮಿಲಿಯನ್‌ಗೂ ಹೆಚ್ಚಿನ ಫಾಲೋವರ್‌ಗಳಿದ್ದರೆ ಈಗ ಅವರು 46 ಮಿಲಿಯನ್‌ಗೂ ಅಧಿಕ ಟ್ವಿಟರ್ ಫಾಲೋವರ್‌ಗಳನ್ನು ಹೊಂದಿದ್ದಾರೆ.

2000ನೇ ಇಸವಿಯ ಆರಂಭ ಹಾಗೂ ಮಧ್ಯದ ಅವಧಿಯಲ್ಲಿ ಸಾರ್ವಜನಿಕ ಸಂಪರ್ಕಕ್ಕೆ ಸಂಬಂಧಿಸಿದ ಹಲವು ಘಟನೆಗಳು ಮೋದಿಯ ಪ್ರಭಾವ ವೃದ್ಧಿಸಿಕೊಳ್ಳಲು ತಡೆಯಾಗಿದ್ದವು. ಅಲ್ಲದೆ ಮುಖ್ಯವಾಹಿನಿಯ ಹಲವು ಸಿನೆಮಗಳಲ್ಲಿ 2002ರ ಗುಜರಾತ್ ಗಲಭೆಯ ಬಗ್ಗೆ ನೇರವಾಗಿ ಪ್ರಸ್ತಾವ ಮಾಡಲಾಗಿತ್ತು ಮತ್ತು ರಾಜಕಾರಣಿಗಳು ಹಾಗೂ ಆಡಳಿತ ವರ್ಗ ಈ ಗಲಭೆಗೆ ಕಾರಣಕರ್ತರಾದ ಅಪರಾಧಿಗಳೆಂದು ಬಿಂಬಿಸಲಾಗಿತ್ತು.

ಮೋದಿ ಪ್ರಮುಖ ರಾಜಕೀಯ ಮುಖಂಡರಾಗಿ ಪ್ರವರ್ಧಮಾನಕ್ಕೆ ಬರುವ ಸಂದರ್ಭದಲ್ಲೇ ಕಾಕತಾಳೀಯವಾಗಿ ಭಾರತದಲ್ಲಿ ಸಾಮಾಜಿಕ ಮಾಧ್ಯಮದ ಬಳಕೆಯೂ ವಿಸ್ತಾರಗೊಂಡಿತ್ತು. ಇದರಿಂದಾಗಿ ಚುನಾವಣಾ ಸಂದರ್ಭ ಹಾಗೂ ಆ ಬಳಿಕ ಸರಕಾರದ ನಾಯಕನಾಗಿ ವಿಶಾಲ ಶ್ರೇಣಿಯ ಸೆಲೆಬ್ರಿಟೀಸ್‌ಗಳ ಜೊತೆ ಮೋದಿಯ ಅನುಬಂಧ ಬೆಳೆಯಿತು ಹಾಗೂ ಆನ್‌ಲೈನ್ ಮೂಲಕ ಪ್ರಭಾವ ಹೆಚ್ಚಿಸಿಕೊಳ್ಳಲು ಸಾಧ್ಯವಾಯಿತು ಎಂದು ಪಾಲ್ ವಿವರಿಸಿದ್ದಾರೆ.

   ಆರು ವರ್ಷಗಳಲ್ಲಿ ಮೋದಿಯ ಟ್ವೀಟ್‌ಗಳನ್ನು ಅಧ್ಯಯನ ನಡೆಸಿದ್ದು ಈ ಅವಧಿಯಲ್ಲಿ ಮೂರು ವಿಶಿಷ್ಟ ಹಂತದ ಅನುಬಂಧಗಳನ್ನು ಗಮನಿಸಬಹುದು. ಪ್ರಥಮ ಹಂತದಲ್ಲಿ , ರಾಷ್ಟ್ರೀಯ ಆಕರ್ಷಣೆಯಿಲ್ಲದ ಓರ್ವ ಪ್ರಾದೇಶಿಕ ಮುಖಂಡನೆಂಬ ಇಮೇಜಿನಿಂದ ಹೊರ ಬರುವುದು ಮೋದಿಗೆ ಮುಖ್ಯವಾಗಿತ್ತು.

  ಎರಡನೇ ಹಂತದಲ್ಲಿ ಅವರು ನಟ ಅಮಿತಾಬ್ ಬಚ್ಚನ್, ಉದ್ಯಮಿ ನಾರಾಯಣ ಮೂರ್ತಿ, ಕ್ರಿಕೆಟರ್ ಸಚಿನ್ ತೆಂಡೂಲ್ಕರ್, ರವಿಶಂಕರ್‌ರಂತಹ ಸೆಲೆಬ್ರಿಟಿಗಳ ಜೊತೆ ಸಂಪರ್ಕ ಸಾಧಿಸಿದರು. ಇವರೊಂದಿಗೆ ಸಂಪರ್ಕ ಸಾಧಿಸಿದ ಬಳಿಕ , ತನ್ನ ಬೆಂಬಲಿಗರ ಗುಂಪಿನಿಂದ ಹೊರಗಿರುವವರೂ(ಹೆಚ್ಚಿನ ಹಿಂಬಾಲಕರನ್ನು ಹೊಂದಿರುವವರು) ತನ್ನೊಂದಿಗೆ ಅನುಬಂಧ ಹೊಂದಿರಲು ಬಯಸುತ್ತಿದ್ದಾರೆ ಎಂಬ ಭಾವನೆಯನ್ನು ಪ್ರಸ್ತುತಪಡಿಸಿದರು ಎಂದು ವರದಿ ತಿಳಿಸಿದೆ.

 2013ರ ವೇಳೆಗೆ ತನ್ನ ಅಭಿಯಾನಕ್ಕೆ ಸೆಲೆಬ್ರಿಟಿ‌ಗಳ ಬೆಂಬಲ ಪಡೆಯುವ ಪ್ರಯತ್ನ ನಡೆಸಿದ ಮೋದಿ ವಿವಿಧ ಸೆಲೆಬ್ರಿಟೀಸ್‌ಗಳ ಹೆಸರನ್ನು ಟ್ವೀಟ್‌ನಲ್ಲಿ ಪ್ರಸ್ತಾವಿಸಿದರು. ಅವರೊಂದಿಗೆ ತೆಗೆಸಿಕೊಂಡ ಫೋಟೋಗಳನ್ನು ಪ್ರಸಾರ ಮಾಡಿದರು. ಕೆಲವು ಸಂದರ್ಭದಲ್ಲಿ ತನ್ನ ಅಭಿಯಾನಕ್ಕೆ ಅವರ ಸಂಪೂರ್ಣ ಅನುಮೋದನೆ ಗಳಿಸಿಕೊಂಡರು. ಚುನಾವಣೆಯ ಬಳಿಕದ ಮೂರನೇ ಹಂತದಲ್ಲಿ ಮೋದಿ ಸೆಲೆಬ್ರಿಟಿಗಳನ್ನು ತನ್ನ ಅಭಿಯಾನದ ಚಾಂಪಿಯನ್‌ಗಳು ಎಂದು ಕರೆದಿದ್ದರು ಎಂದು ಪಾಲ್ ತಮ್ಮ ಅಧ್ಯಯನ ವರದಿಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X