Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಕ್ರಮ ಭೂಕಬಳಿಕೆಯ ವಿರುದ್ಧ ಹೋರಾಟದ...

ಅಕ್ರಮ ಭೂಕಬಳಿಕೆಯ ವಿರುದ್ಧ ಹೋರಾಟದ ರೂವಾರಿ ಕೆ.ಪ್ರಭಾಕರ ರೆಡ್ಡಿ: ಎಚ್.ಎಸ್.ದೊರೆಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ24 March 2019 10:46 PM IST
share
ಅಕ್ರಮ ಭೂಕಬಳಿಕೆಯ ವಿರುದ್ಧ ಹೋರಾಟದ ರೂವಾರಿ ಕೆ.ಪ್ರಭಾಕರ ರೆಡ್ಡಿ: ಎಚ್.ಎಸ್.ದೊರೆಸ್ವಾಮಿ

ಬೆಂಗಳೂರು, ಮಾ.24: ಕನ್ನಡಪರ ಹೋರಾಟಗಾರ, ಮಾಜಿ ಶಾಸಕ ಕೆ.ಪ್ರಭಾಕರ ರೆಡ್ಡಿ ಬೆಂಗಳೂರಿನ ಲಕ್ಷಾಂತರ ಕೋಟಿ ರೂ.ಮೌಲ್ಯದ ಅಕ್ರಮ ಭೂ ಕಬಳಿಕೆದಾರರ ವಿರುದ್ಧ ಹೋರಾಟ ರೂಪಿಸಿದ ರೂವಾರಿ ಎಂದು ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸ್ಮರಿಸಿದರು.

ರವಿವಾರ ಕನ್ನಡ ವೇದಿಕೆ, ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ ನಗರದ ಸುಮಂಗಲಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಮಾಜಿ ಶಾಸಕ ಹಾಗೂ ಕನ್ನಡಪರ ಹೋರಾಟಗಾರ ಕೆ.ಪ್ರಭಾಕರ ರೆಡ್ಡಿ ಅವರ 5ನೆ ವರ್ಷದ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕನ್ನಡ ಕಟ್ಟುವುದೆಂದರೆ ಕೇವಲ ಘೋಷಣೆಗಳಿಂದ ಮಾತ್ರ ಸಾಧ್ಯವಾಗುವುದಿಲ್ಲ. ರಾಜ್ಯದಲ್ಲಿ ನಡೆಯುವ ಅನ್ಯಾಯಗಳನ್ನು ಸರಿಪಡಿಸುತ್ತಲೆ ಪ್ರಜ್ಞಾವಂತ ರಾಜ್ಯವನ್ನಾಗಿ ರೂಪಿಸಬೇಕಾದದ್ದು ಪ್ರತಿಯೊಬ್ಬ ಕನ್ನಡಪರ ಕಾರ್ಯಕರ್ತನ ಕರ್ತವ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಕೆ.ಪ್ರಭಾಕರ ರೆಡ್ಡಿ ಅವರ ಹೋರಾಟಗಳ ಮಾರ್ಗಗಳು ಇಂದಿನ ಯುವಜನತೆಗೆ ದಾರಿದೀಪವಾಗಲಿ ಎಂದು ಅವರು ಆಶಿಸಿದರು.

ಬೆಂಗಳೂರಿನಲ್ಲಿ ಸಾವಿರಾರು ಎಕರೆ ಸರಕಾರಿ ಭೂಮಿ, ನೂರಾರು ಎಕರೆ ಕೆರೆಗಳ ಜಾಗವನ್ನು ಭೂಗಳ್ಳರು ಆಕ್ರಮಿಸಿಕೊಂಡಿದ್ದರು. ಇವರಿಗೆ ರಾಜಕೀಯ ಬೆಂಬಲಿಗರು ಹಾಗೂ ಅಧಿಕಾರಿಗಳ ಬೆಂಬಲವು ಇತ್ತು. ಇಂತಹ ಸಂದರ್ಭದಲ್ಲಿ ಕೆ.ಪ್ರಭಾಕರ ರೆಡ್ಡಿಯವರು ಕನ್ನಡ ಕಾರ್ಯಕರ್ತರನ್ನು ಕಟ್ಟಿಕೊಂಡು ಅಕ್ರಮ ಭೂಗಳ್ಳರ ವಿರುದ್ಧ ಹೋರಾಟ ರೂಪಿಸಿದ್ದರು. ಇದರ ಪರಿಣಾಮವಾಗಿ ವಿಧಾನಸೌಧದಲ್ಲಿ ಸರಕಾರಿ ಭೂ ಕಬಳಿಕೆಯ ಬಗ್ಗೆ ತನಿಖೆ ಮಾಡಲು ಸಮಿತಿ ರಚಿಸಲಾಯಿತು ಎಂದು ಅವರು ನೆನಪು ಮಾಡಿಕೊಂಡರು.

ಜನಪರವಾದ ಮೌಲ್ಯಗಳು ನಶಿಸುತ್ತಿರುವ ಇವತ್ತಿನ ಸಂದರ್ಭದಲ್ಲಿ ಯುವ ಜನತೆಯನ್ನು ಸರಿದಾರಿಗೆ ತರುವುದು ಸವಾಲಿನ ಕೆಲಸವಾಗಿದೆ. ದೇಶ ಹಾಗೂ ರಾಜ್ಯಕ್ಕಾಗಿ ದುಡಿದ ಮಹಾನ್ ವ್ಯಕ್ತಿಗಳ ಜೀವನಗಾತೆಗಳನ್ನು ಯುವ ಜನತೆಗೆ ತಲುಸುವಂತಹ ಕೆಲಸವಾಗಬೇಕು. ಆ ನಿಟ್ಟಿನಲ್ಲಿ ಹಿರಿಯ ಲೇಖಕ ರು.ಬಸಪ್ಪ ಕನ್ನಡ ಚಳವಳಿ ನೆನಪಿನ ಪುಟುಗಳಿಂದ ಕೃತಿ ಬಿಡುಗಡೆಗೊಳ್ಳುತ್ತಿರುವುದು ಸಂತಸದ ವಿಚಾರವೆಂದು ಅವರು ಹೇಳಿದರು.

ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ ಮಾತನಾಡಿ, ನಾಡು, ನುಡಿಯ ಉಳಿವಿಗಾಗಿ ಕನ್ನಡ ಕಾರ್ಯಕರ್ತರ ಪಡೆಯನ್ನು ಹುಟ್ಟು ಹಾಕಿದ ಕೆ.ಪ್ರಭಾಕರ ರೆಡ್ಡಿ ಪ್ರತಿಯೊಬ್ಬರ ಭಾವನೆಗಳನ್ನು ಗೌರವಿಸುತ್ತಾ ಬಂದವರು. ಒಂದು ಕಡೆ ಕನ್ನಡ ಕಾರ್ಯಕರ್ತರ ಪಡೆಯನ್ನು ಕಟ್ಟುವುದು, ಮತ್ತೊಂದೆಡೆ ಶಾಸಕರಾಗಿ ಶಾಸನ ಸಭೆಗಳಲ್ಲಿ ಕನ್ನಡಪರವಾದ ಕಾನೂನು ಜಾರಿಗೆ ತರುಲು ಶ್ರಮಿಸಿದವರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಲೇಖಕ ರು.ಬಸಪ್ಪ, ಕನ್ನಡಪರ ಹೋರಾಟಗಾರ ಟಿ.ಪಿ.ಪ್ರಸನ್ನ ಕುಮಾರ, ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ಎಂ.ತಿಮ್ಮಯ್ಯ, ಹೋರಾಟಗಾರರಾದ ಸಿದ್ದಯ್ಯ, ಎನ್.ಜಯರಾಮ್, ಚಳವಳಿ ರಾಮಕೃಷ್ಣ, ದ.ವಿನಾಯಕ, ವಿ.ನಾರಾಯಣ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X