ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಮಹಾಸ್ವಾಮಿಯ ಭೇಟಿಯಾದ ಬಿ.ಕೆ.ಹರಿಪ್ರಸಾದ್
![ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಮಹಾಸ್ವಾಮಿಯ ಭೇಟಿಯಾದ ಬಿ.ಕೆ.ಹರಿಪ್ರಸಾದ್ ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಮಹಾಸ್ವಾಮಿಯ ಭೇಟಿಯಾದ ಬಿ.ಕೆ.ಹರಿಪ್ರಸಾದ್](https://www.varthabharati.in/sites/default/files/images/articles/2019/03/25/183786.gif)
ಬೆಂಗಳೂರು, ಮಾ.25: ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಅವರು ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದ ಮಹಾಸ್ವಾಮಿಯನ್ನು ಇಂದು ಭೇಟಿ ಮಾಡಿ ಆರ್ಶೀವಾದ ಪಡೆದರು.
ತೀವ್ರ ಕುತೂಹಲ ಮೂಡಿಸಿದ್ದ ಬೆಂಗಳೂರು ದ.ಕ. ಕ್ಷೇತ್ರದಿಂದ ಸ್ಪರ್ಧಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಹಾಲಿ ಸದಸ್ಯ ಬಿ.ಕೆ.ಹರಿಪ್ರಸಾದ್ ಟಿಕೆಟ್ ಪಡೆದಿದ್ದಾರೆ.