Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಂಜಾಬ್ ಗೆ ರೋಚಕ ಜಯ

ಪಂಜಾಬ್ ಗೆ ರೋಚಕ ಜಯ

ಕ್ರಿಸ್ ಗೇಲ್ ಅರ್ಧಶತಕ, ಬಟ್ಲರ್ ಹೋರಾಟ ವ್ಯರ್ಥ

ವಾರ್ತಾಭಾರತಿವಾರ್ತಾಭಾರತಿ25 March 2019 11:46 PM IST
share
ಪಂಜಾಬ್ ಗೆ ರೋಚಕ ಜಯ

ಜೈಪುರ,ಮಾ.25: ಆರಂಭಿಕ ಆಟಗಾರ ಕ್ರಿಸ್ ಗೇಲ್ ಅಬ್ಬರದ ಬ್ಯಾಟಿಂಗ್ ಬೆಂಬಲದಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ನಾಲ್ಕನೇ ಐಪಿಎಲ್ ಪಂದ್ಯದಲ್ಲಿ 14 ರನ್‌ಗಳ ರೋಚಕ ಜಯ ದಾಖಲಿಸಿ ಶುಭಾರಂಭ ಮಾಡಿದೆ. ಸೋಮವಾರ ಗೆಲ್ಲಲು 185 ರನ್ ಗುರಿ ಪಡೆದ ರಾಜಸ್ಥಾನ ರಾಯಲ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 170 ರನ್ ಗಳಿಸಿದೆ.

ಇನಿಂಗ್ಸ್ ಆರಂಭಿಸಿದ ಜೋಸ್ ಬಟ್ಲರ್(69) ಹಾಗೂ ಅಜಿಂಕ್ಯ ರಹಾನೆ(27) ಮೊದಲ ವಿಕೆಟ್‌ಗೆ 78 ರನ್ ಜೊತೆಯಾಟ ನಡೆಸುವುದರೊಂದಿಗೆ ಉತ್ತಮ ಆರಂಭ ನೀಡಿದರು. 8.1ನೇ ಓವರ್‌ನಲ್ಲಿ ರಹಾನೆ ಔಟಾದರು. ಆಗ ಬಟ್ಲರ್‌ಗೆ ಜೊತೆಯಾದ ಸ್ಯಾಮ್ಸನ್ 2ನೇ ವಿಕೆಟ್‌ಗೆ 30 ರನ್ ಸೇರಿಸಿದರು.

ಸ್ಮಿತ್(20) ಜೊತೆ ಕೈಜೋಡಿಸಿದ ಸ್ಯಾಮ್ಸನ್(30) 3ನೇ ವಿಕೆಟ್‌ಗೆ 40 ರನ್ ಜೊತೆಯಾಟ ನಡೆಸಿದರು. ಸ್ಮಿತ್, ಸ್ಯಾಮ್ಸನ್ ಔಟಾದ ಬಳಿಕ ರಾಜಸ್ಥಾನ ಕುಸಿತದ ಹಾದಿ ಹಿಡಿಯಿತು.

ಸ್ಯಾಮ್ ಕರನ್(2-52),ಮುಜೀಬ್‌ವುರ್ರಹ್ಮಾನ್(2-31) ಹಾಗೂ ರಾಜ್‌ಪೂತ್(2-32) ತಲಾ ಎರಡು ವಿಕೆಟ್ ಪಡೆದರು. ಇದಕ್ಕೂ ಮೊದಲು ಟಾಸ್ ಜಯಿಸಿದ ರಾಜಸ್ಥಾನ ನಾಯಕ ಅಜಿಂಕ್ಯ ರಹಾನೆ ಪಂಜಾಬ್‌ನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಕೆಎಲ್ ರಾಹುಲ್(4)ರನ್ನು ಮೊದಲ ಓವರ್‌ನ ನಾಲ್ಕನೇ ಎಸೆತದಲ್ಲಿ ಕಳೆದುಕೊಂಡ ಪಂಜಾಬ್ ಕಳಪೆ ಆರಂಭ ಪಡೆದಿತ್ತು. ಈ ಹಂತದಲ್ಲಿ ಜೊತೆಯಾದ ಗೇಲ್(79, 47 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ಮಾಯಾಂಕ್ ಅಗರ್ವಾಲ್(22, 24 ಎಸೆತ, 1 ಬೌಂಡರಿ, 2 ಸಿಕ್ಸರ್)2ನೇ ವಿಕೆಟ್‌ಗೆ 56 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು.

33 ಎಸೆತಗಳಲ್ಲಿ 50 ರನ್ ಪೂರೈಸಿದ ಗೇಲ್ 3ನೇ ವಿಕೆಟ್‌ಗೆ ಯುವ ದಾಂಡಿಗ ಸರ್ಫರಾಝ್ ಖಾನ್ ಅವರೊಂದಿಗೆ 84 ರನ್ ಜೊತೆಯಾಟ ನಡೆಸಿದರು. 16ನೇ ಓವರ್‌ನಲ್ಲಿ ಸ್ಟೋಕ್ಸ್ ಅವರು ಗೇಲ್ ಅಬ್ಬರಕ್ಕೆ ತೆರೆ ಎಳೆದರು.

ಔಟಾಗದೆ 46(29 ಎಸೆತ, 6 ಬೌಂಡರಿ, 1 ಸಿಕ್ಸರ್)ರನ್ ಗಳಿಸಿದ ಖಾನ್ ಪಂಜಾಬ್ ಮೊತ್ತವನ್ನು 184ಕ್ಕೆ ತಲುಪಿಸಿದರು. ರಾಜಸ್ಥಾನದ ಪರ ವೇಗದ ಬೌಲರ್ ಬೆನ್ ಸ್ಟೋಕ್ಸ್(2-48) ಎರಡು ವಿಕೆಟ್‌ಪಡೆದರು.

► ಸಂಕ್ಷಿಪ್ತ ಸ್ಕೋರ್

ಪಂಜಾಬ್: 20 ಓವರ್‌ಗಳಲ್ಲಿ 184/4

(ಕ್ರಿಸ್ ಗೇಲ್ 79, ಮಾಯಾಂಕ್ 22, ಸರ್ಫರಾಝ್ ಖಾನ್ 35, ಸ್ಟೋಕ್ಸ್ 2-48)

ರಾಜಸ್ಥಾನ: 20 ಓವರ್‌ಗಳಲ್ಲಿ 170/9

(ಬಟ್ಲರ್ 69, ಸ್ಯಾಮ್ಸನ್ 30, ಸ್ಮಿತ್ 20, ರಹಾನೆ 27, ಕರನ್ 2-52, ರಹ್ಮಾನ್ 2-31, ರಾಜ್‌ಪೂತ್ 2-32)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X