Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2012ರಲ್ಲೇ ಬಾಹ್ಯಾಕಾಶದಲ್ಲಿ ಸಾಧನೆ...

2012ರಲ್ಲೇ ಬಾಹ್ಯಾಕಾಶದಲ್ಲಿ ಸಾಧನೆ ಮಾಡಿತ್ತು ಭಾರತ

7 ವರ್ಷಗಳ ಹಿಂದೆಯೇ ಪ್ರಕಟವಾಗಿತ್ತು ವರದಿ…

ವಾರ್ತಾಭಾರತಿವಾರ್ತಾಭಾರತಿ27 March 2019 9:03 PM IST
share
2012ರಲ್ಲೇ ಬಾಹ್ಯಾಕಾಶದಲ್ಲಿ ಸಾಧನೆ ಮಾಡಿತ್ತು ಭಾರತ

ಹೊಸದಿಲ್ಲಿ,ಮಾ.27: ಭಾರತ ಇದೇ ಮೊದಲ ಬಾರಿ ಬಾಹ್ಯಾಕಾಶ ಕಕ್ಷೆಯಲ್ಲೇ ಉಪಗ್ರಹವನ್ನು ಹೊಡೆದುರುಳಿಸಬಲ್ಲ ಕ್ಷಿಪಣಿಯನ್ನು ದೇಶೀಯವಾಗಿ ನಿರ್ಮಿಸಿ ಸಾಧನೆ ಮಾಡಿದೆ ಎಂದು ಬುಧವಾರ ಪ್ರಧಾನಿ ಮೋದಿ ದೂರದರ್ಶನದಲ್ಲಿ ಹೇಳಿಕೆ ನೀಡಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಹೊಸ ಕ್ರಾಂತಿ ಮಾಡಿದೆ ಎಂದು ತಿಳಿಸಿದ್ದಾರೆ.

ಆದರೆ ಭಾರತ ಇಂಥದ್ದೊಂದು ಸಾಧನೆಯನ್ನು 2012ರಲ್ಲೇ ಮಾಡಿತ್ತು ಎಂಬುದನ್ನು 2012ರ ಎಪ್ರಿಲ್ 28ರಂದು ಆಂಗ್ಲ ಪತ್ರಿಕೆ ಇಂಡಿಯಾ ಟುಡೆಯಲ್ಲಿ ಪ್ರಕಟವಾದ ವರದಿ ಬಹಿರಂಗಪಡಿಸಿದೆ.

ಈ ವರದಿಯಲ್ಲಿ, “ಇಂದು ನಾವು ಉಪಗ್ರಹನಿಗ್ರಹ (ಎಸ್ಯಾಟ್) ಸಾಮರ್ಥ್ಯ ಗಳಿಸಲು ಅಗತ್ಯವಿರುವ ಎಲ್ಲ ಸಾಧನಗಳನ್ನು ಅಭಿವೃದ್ಧಿಪಡಿಸಿದ್ದೇವೆ” ಎಂದು ಅಂದಿನ ರಕ್ಷಣಾ ಸಚಿವರ ವೈಜ್ಞಾನಿಕ ಸಲಹೆಗಾರ ಮತ್ತು ಡಿಆರ್‌ಡಿಒ ಮುಖ್ಯಸ್ಥ ವಿಜಯ್ ಸಾರಸ್ವತ್ ಇಂಟಿಯಾ ಟುಡೆಗೆ ಹೇಳಿಕೆ ನೀಡಿರುವುದನ್ನು ಉಲ್ಲೇಖಿಸಲಾಗಿದೆ.

2007ರ ಜನವರಿಯಲ್ಲಿ ಚೀನಾದ ಎಸ್ಯಾಟ್ ಕ್ಷಿಪಣಿ ಉಪಯೋಗವಿಲ್ಲದ ಹವಾಮಾನ ಉಪಗ್ರಹವನ್ನು ಹೊಡೆದುರುಳಿಸಿದ ನಂತರ ಆ ದೇಶದ ವಿರುದ್ಧ ತನ್ನ ಬಾಹ್ಯಾಕಾಶ ರಕ್ಷಣಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ತುರ್ತು ಅಗತ್ಯ ಭಾರತಕ್ಕಿತ್ತು ಮತ್ತು ಅದನ್ನು ಸದ್ಯ ಡಿಆರ್‌ಡಿಒ ಸಾಧಿಸಿದೆ ಎಂದು ಸಾರಸ್ವತ್ ತಿಳಿಸಿದ್ದರು.

ಸಾರಸ್ವತ್ ಅವರು ಗೇಮ್ ಚೇಂಜರ್ ಎಂದು ಕರೆದಿರುವ 5,500ಕಿ.ಮೀ ವ್ಯಾಪ್ತಿಯ ಅಗ್ನಿ ಮಧ್ಯಂತರ ವ್ಯಾಪ್ತಿಯ ಕ್ಷಿಪಣಿ ಬಾಹ್ಯಾಕಾಶದಲ್ಲಿ ವಸ್ತುಗಳನ್ನು ಗುರಿ ಮಾಡುವ ಸಾಮರ್ಥ್ಯದತ್ತ ಭಾರತ ಇಟ್ಟ ಮತ್ತೊಂದು ಹೆಜ್ಜೆ ಎಂದು ಬಣ್ಣಿಸಲಾಗಿತ್ತು.

2014ರ ವೇಳೆಗೆ ಡಿಆರ್‌ಡಿಒ ಅಗ್ನಿ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರತಿಬಂಧಕ ಆಧಾರಿತ ಸಂಪೂರ್ಣ ಎಸ್ಯಾಟ್ ಆಯುಧವನ್ನು ನಿಯೋಜಿಸಲಿದೆ ಎಂದು ಸರಕಾರಿ ಅಧಿಕಾರಿ ತಿಳಿಸಿದ್ದರು. ಆದರೆ ಈ ಅಸ್ತ್ರವನ್ನು ಸಾರ್ವಜನಿಕವಾಗಿ ಪರೀಕ್ಷೆ ನಡೆಸುವುದು ಅನುಮಾನ ಎಂದು ಅವರು ತಿಳಿಸಿದ್ದರು.

ಇದನ್ನು ದೃಢಪಡಿಸಿದ್ದ ಸಾರಸ್ವತ್, ಭಾರತ ಉಪಗ್ರಹವನ್ನು ದ್ವಂಸ ಮಾಡುವ ಮೂಲಕ ತನ್ನ ಕ್ಷಿಪಣಿ ಸಾಮರ್ಥ್ಯವನ್ನು ಪರೀಕ್ಷಿಸುವುದಿಲ್ಲ. ಇಂಥ ಪರೀಕ್ಷೆಗಳಿಂದ ಬಾಹ್ಯಾಕಾಶದಲ್ಲಿ ಮಾರಕ ತ್ಯಾಜ್ಯಗಳು ಹೆಚ್ಚಾಗಿ ಸದ್ಯ ಇರುವ ಉಪಗ್ರಹಗಳಿಗೆ ಹಾನಿಯುಂಟು ಮಾಡಬಹುದು. ಅದರ ಬದಲು ಭಾರತದ ಎಸ್ಯಾಟ್ ಸಾಮರ್ಥ್ಯವನ್ನು ವಿವಿಧ ಇಲೆಕ್ಟ್ರಾನಿಕ್ ಪರೀಕ್ಷೆಗಳ ಮೂಲಕ ಸಾಬೀತುಪಡಿಸಲಾಗುವುದು ಎಂದು ತಿಳಿಸಿದ್ದರು ಎಂದು ಇಂಡಿಯಾ ಟುಡೆ ವರದಿ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X