ರಾಜಕೀಯ ಲಾಭಕ್ಕಾಗಿ ಮಿಶನ್ ಶಕ್ತಿ ಪ್ರಯೋಗ: ಮಲ್ಲಿಕಾರ್ಜುನ ಖರ್ಗೆ
![ರಾಜಕೀಯ ಲಾಭಕ್ಕಾಗಿ ಮಿಶನ್ ಶಕ್ತಿ ಪ್ರಯೋಗ: ಮಲ್ಲಿಕಾರ್ಜುನ ಖರ್ಗೆ ರಾಜಕೀಯ ಲಾಭಕ್ಕಾಗಿ ಮಿಶನ್ ಶಕ್ತಿ ಪ್ರಯೋಗ: ಮಲ್ಲಿಕಾರ್ಜುನ ಖರ್ಗೆ](https://www.varthabharati.in/sites/default/files/images/articles/2019/03/27/184184.jpg)
ಕಲಬುರಗಿ, ಮಾ. 27: ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದಲೇ ಮಿಶನ್ ಶಕ್ತಿ ಪ್ರಯೋಗವನ್ನು ಜನರಿಗೆ ತೋರಿಸಲಾಗಿದೆ. ದೇಶದಲ್ಲಿ ಇಂತಹ ಪ್ರಯೋಗಗಳು ನಿರಂತರವಾಗಿ ನಡೆಯುತ್ತಿರುತ್ತವೆ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಬುಧವಾರ ಜಿಲ್ಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 2012ರಲ್ಲಿಯೇ ಪ್ರಯೋಗಿಸಲಾಗಿರುವ ಸ್ಯಾಟ್ಲೈಟ್ ತಯಾರಾಗಿತ್ತು. ಇದರಿಂದ ಬೇರೆ ದೇಶದ ಉಪಗ್ರಹಗಳಿಗೆ ತೊಂದರೆ ಆಗಬಾರದೆಂಬ ಉದ್ದೇಶದಿಂದ ಪ್ರಯೋಗಿಸಿರಲಿಲ್ಲ.
ಇಂದು ಜನರಿಗೆ ತೋರಿಸುವ ಉದ್ದೇಶಕ್ಕಾಗಿ ಪ್ರಯೋಗ ಮಾಡಿ ಪ್ರಚಾರ ತೆಗೆದುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ದೇಶದ ಹಿತದೃಷ್ಟಿಯಿಂದಲೇ ಡಿಆರ್ಡಿಒ ಸಂಸ್ಥೆಯನ್ನು ಕಟ್ಟಲಾಗಿದೆ. ಯುಪಿಎ ಅವಧಿಯಲ್ಲಿ ಹಲವು ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಬಿಡಲಾಗಿದೆ. ಆದರೆ ಇಂದು ಬಂದು ನಾನೇ ಮಾಡಿದ್ದೇನೆಂದು ಹೇಳುತ್ತಾರೆಂದು ಖರ್ಗೆ, ಮೋದಿ ವಿರುದ್ಧ ಟೀಕಿಸಿದರು.
Next Story