Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸರಕಾರದ ಚುನಾವಣಾ ಬಾಂಡ್, ವಿದೇಶಿ...

ಮೋದಿ ಸರಕಾರದ ಚುನಾವಣಾ ಬಾಂಡ್, ವಿದೇಶಿ ದೇಣಿಗೆ ಹೆಚ್ಚಳ ಕ್ರಮವನ್ನು ಸುಪ್ರೀಂ ಕೋರ್ಟ್‌ನಲ್ಲಿ ಟೀಕಿಸಿದ ಚು.ಆಯೋಗ

ವಾರ್ತಾಭಾರತಿವಾರ್ತಾಭಾರತಿ27 March 2019 11:34 PM IST
share
ಮೋದಿ ಸರಕಾರದ ಚುನಾವಣಾ ಬಾಂಡ್, ವಿದೇಶಿ ದೇಣಿಗೆ ಹೆಚ್ಚಳ ಕ್ರಮವನ್ನು ಸುಪ್ರೀಂ ಕೋರ್ಟ್‌ನಲ್ಲಿ ಟೀಕಿಸಿದ ಚು.ಆಯೋಗ

ಹೊಸದಿಲ್ಲಿ,ಮಾ.27: ದೇಶದಲ್ಲಿ ಚುನಾವಣೆಗಳ ಮೇಲೆ ಕಾರ್ಪೊರೇಟ್ ಪ್ರಭಾವದ ವಿರುದ್ಧ ಕಾನೂನು ಸಮರಕ್ಕೆ ರಂಗವನ್ನು ಸಜ್ಜುಗೊಳಿಸುವ ನಡೆಯೊಂದರಲ್ಲಿ ಚುನಾವಣಾ ಆಯೋಗವು ನರೇಂದ್ರ ಮೋದಿ ಸರಕಾರದ ಚುನಾವಣಾ ಬಾಂಡ್ ಯೋಜನೆ ಮತ್ತು ಭಾರತೀಯ ರಾಜಕೀಯ ಪಕ್ಷಗಳಿಗೆ ವಿದೇಶಿ ದೇಣಿಗೆಗಳಿಗೆ ಅವಕಾಶ ನೀಡುವ ನಿರ್ಧಾರವನ್ನು ಟೀಕಿಸಿದೆ.

ಚುನಾವಣಾ ಬಾಂಡ್ ಯೋಜನೆ ಮತ್ತು ಕಾರ್ಪೊರೇಟ್ ದೇಣಿಗೆಗಳ ಮೇಲಿನ ಮಿತಿಯನ್ನು ತೆಗೆದುಹಾಕಿರುವುದು ರಾಜಕೀಯ ಹಣಕಾಸು/ರಾಜಕೀಯ ಪಕ್ಷಗಳಿಗೆ ದೇಣಿಗೆಯ ಪಾರದರ್ಶಕತೆಯ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತದೆ ಎಂದು ಬುಧವಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿದಾವತ್ತಿನಲ್ಲಿ ಚುನಾವಣಾ ಆಯೋಗವು ಹೇಳಿದೆ.

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿಯನ್ನು ತರುವ ಕೇಂದ್ರದ ನಿರ್ಧಾರ ಕುರಿತಂತೆ ಆಯೋಗವು,ಇದು ಭಾರತದಲ್ಲಿಯ ರಾಜಕೀಯ ಪಕ್ಷಗಳಿಗೆ ಅನಿಯಂತ್ರಿತ ವಿದೇಶಿ ದೇಣಿಗೆಗಳು ಹರಿದುಬರಲು ಅವಕಾಶವನ್ನು ನೀಡುತ್ತದೆ ಮತ್ತು ಇದು ಭಾರತೀಯ ನೀತಿಗಳು ವಿದೇಶಿ ಕಂಪನಿಗಳ ಪ್ರಭಾವಕ್ಕೊಳಗಾಗಲು ಕಾರಣವಾಗಬಹುದು ಎಂದು ಬೆಟ್ಟು ಮಾಡಿದೆ.

ಭಾರತದಲ್ಲಿ ಚುನಾವಣಾ ಪ್ರಚಾರಕ್ಕೆ ಹಣಕಾಸು ದೇಣಿಗೆಗಳ ಚಿತ್ರಣವನ್ನು ಬದಲಿಸಿರುವ ಹಲವಾರು ಶಾಸನಾತ್ಮಕ ತಿದ್ದುಪಡಿಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಎನ್‌ಜಿಒಗಳು ಮತ್ತು ಸಿಪಿಎಂ ಸಲ್ಲಿಸಿರುವ ಹಲವಾರು ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ನಡೆಸುತ್ತಿದ್ದು,ಮುಂದಿನ ವಿಚಾರಣೆಯನ್ನು ಎ.2ಕ್ಕೆ ನಿಗದಿಗೊಳಿಸಲಾಗಿದೆ.

ಸರ್ವೋಚ್ಚ ನ್ಯಾಯಾಲಯದ ವಿಚಾರಣೆಯ ಅಂಗವಾಗಿ ಚುನಾವಣಾ ಆಯೋಗವು ತನ್ನ ಸ್ವಂತ ಅಫಿದಾವತ್ತನ್ನು ಸಲ್ಲಿಸಿದ್ದು,ಚುನಾವಣಾ ಬಾಂಡ್ ಯೋಜನೆಗೆ ತನ್ನ ವಿರೋಧವನ್ನು ಅದು ಪುನರುಚ್ಚರಿಸಿದೆ. ಅಲ್ಲದೆ ಹೆಚ್ಚಿನ ಪಾರದರ್ಶಕತೆಯನ್ನು ತರುವ ಅಗತ್ಯ ಕುರಿತು ತಾನು ಭಾರತ ಸರಕಾರಕ್ಕೆ ಕಳೆದ 15 ವರ್ಷಗಳಿಂದಲೂ ಎಚ್ಚರಿಕೆ ನೀಡುತ್ತಲೇ ಬಂದಿರುವುದಾಗಿ ಬೆಟ್ಟು ಮಾಡಿದೆ.

ತಾನು ಸಾಂವಿಧಾನಿಕ ಪ್ರಾಧಿಕಾರವಾಗಿರುವುದರಿಂದ ಸರ್ವೋಚ್ಚ ನ್ಯಾಯಾಲಯದ ಎದುರಿನಲ್ಲಿರುವ ಹಾಲಿ ಮೇಲ್ಮನವಿಗಳಿಗೆ ಸಂಬಂಧಿಸಿದಂತೆ ಯಾವುದೇ ಒಂದು ಪಕ್ಷವನ್ನು ಬೆಂಬಲಿಸಲು ತಾನು ಉದ್ದೇಶಿಸಿಲ್ಲ ಎಂದು ಆಯೋಗವು ಸ್ಪಷ್ಟಪಡಿಸಿದೆ.

ಚುನಾವಣಾ ಬಾಂಡ್‌ಗಳು ಮತ್ತು ಕಾರ್ಪೊರೇಟ್ ದೇಣಿಗೆಗೆ ಆಕ್ಷೇಪ ವ್ಯಕ್ತಪಡಿಸಿ ತಾನು ಮೋದಿ ಸರಕಾರಕ್ಕೆ 2017ರ ಆರಂಭದಲ್ಲಿ ಬರೆದಿದ್ದ ಎರಡು ಪತ್ರಗಳನ್ನೂ ಆಯೋಗವು ತನ್ನ ಅಫಿದಾವತ್ತಿನೊಂದಿಗೆ ಲಗತ್ತಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X