Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಡಿಯಾ ಓಪನ್: ಸಿಂಧು, ಶ್ರೀಕಾಂತ್...

ಇಂಡಿಯಾ ಓಪನ್: ಸಿಂಧು, ಶ್ರೀಕಾಂತ್ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ27 March 2019 11:59 PM IST
share

ಹೊಸದಿಲ್ಲಿ, ಮಾ.27: ಮಾಜಿ ಚಾಂಪಿಯನ್‌ಗಳಾದ ಪಿ.ವಿ.ಸಿಂಧು, ಕಿಡಂಬಿ ಶ್ರೀಕಾಂತ್ ಹಾಗೂ ಎಚ್.ಎಸ್.ಪ್ರಣಯ್ ಇಲ್ಲಿ ಬುಧವಾರ ನಡೆದ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಶುಭಾರಂಭ ಮಾಡಿದ್ದಾರೆ. ಕಳೆದ ಎರಡು ಆವೃತ್ತಿಯ ಟೂರ್ನಿಗಳಲ್ಲಿ ಫೈನಲ್‌ಗೆ ತಲುಪಿದ್ದ ಸಿಂಧು 2017ರಲ್ಲಿ ಪ್ರಶಸ್ತಿ ಜಯಿಸಿದ್ದರು. ಬುಧವಾರ ನಡೆದ ಮಹಿಳೆಯರ ಸಿಂಗಲ್ಸ್ ನ ಮೊದಲ ಸುತ್ತಿನ ಪಂದ್ಯದಲ್ಲಿ ಸಹ ಆಟಗಾರ್ತಿ ಮುಗ್ದಾ ಅಗ್ರೆ ಅವರನ್ನು 21-8, 21-13 ನೇರ ಗೇಮ್‌ಗಳಿಂದ ಮಣಿಸಿದರು.

ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ 2015ರ ಚಾಂಪಿಯನ್ ಶ್ರೀಕಾಂತ್ ಹಾಂಕಾಂಗ್‌ನ ವಾಂಗ್ ವಿಂಗ್ ಕಿ ವಿನ್ಸೆಂಟ್ ವಿರುದ್ಧ 21-16, 18-21, 21-19 ಗೇಮ್‌ಗಳ ಅಂತರದಿಂದ ಜಯ ಸಾಧಿಸಿದರು. ಈ ಮೂಲಕ ಸೋಲಿನ ಭೀತಿಯಿಂದ ಪಾರಾಗಿ ವಿನ್ಸೆಂಟ್ ವಿರುದ್ಧ ಸತತ ನಾಲ್ಕನೇ ಗೆಲುವು ದಾಖಲಿಸಿದರು.

ಮತ್ತೊಂದು ಸಿಂಗಲ್ಸ್ ಪಂದ್ಯದಲ್ಲಿ ಪ್ರಣಯ್ ಮೊದಲ ಗೇಮ್‌ನಲ್ಲಿ 14-21 ಅಂತರದಿಂದ ಸೋತಿದ್ದರೂ, ಆ ಬಳಿಕ 21-18 ಹಾಗೂ 21-14 ಗೇಮ್‌ಗಳಿಂದ ಥಾಯ್ಲೆಂಡ್‌ನ 8ನೇ ಶ್ರೇಯಾಂಕದ ಕಂಟಫೋನ್ ವಾಂಗ್‌ಚರೊಯೆನ್‌ರನ್ನು ಸೋಲಿಸಿದರು. 5ನೇ ಶ್ರೇಯಾಂಕದ ಸಮೀರ್ ವರ್ಮಾ ಡೆನ್ಮಾರ್ಕ್‌ನ ರಸ್ಮಸ್ ಗೆಮ್ಕೆ ಅವರನ್ನು 21-18, 21-12 ಗೇಮ್‌ಗಳಿಂದ ಸೋಲಿಸಿದರು. ರಿಯಾ ಮುಖರ್ಜಿ ಥಾಯ್ಲೆಂಡ್‌ನ ಫಿಟ್ಟಯಪರ್ನ್ ಚೈವಾನ್‌ರನ್ನು 21-17, 21-15 ಗೇಮ್‌ಗಳಿಂದ ಮಣಿಸಿದ್ದಾರೆ.

ಸ್ವಿಸ್ ಓಪನ್ ಫೈನಲಿಸ್ಟ್ ಬಿ.ಸಾಯಿ ಪ್ರಣೀತ್ ಮೊದಲ ಗೇಮ್ ಸೋಲಿನಿಂದ ಚೇತರಿಸಿಕೊಂಡು ಸಹ ಆಟಗಾರ ಕೆ.ಗುಲ್ಶನ್ ಕುಮಾರ್‌ರನ್ನು 22-24, 21-13, 21-8 ಗೇಮ್‌ಗಳಿಂದ ಸೋಲಿಸಿ ಎರಡನೇ ಸುತ್ತಿಗೆ ತಲುಪಿದ್ದಾರೆ.

ಡಬಲ್ಸ್‌ನಲ್ಲಿ ಆರನೇ ಶ್ರೇಯಾಂಕದ ಮನು ಅತ್ರಿ ಹಾಗೂ ಸುಮೀತ್ ರೆಡ್ಡಿ ತಮ್ಮದೇ ದೇಶದ ಯುವ ಆಟಗಾರರಾದ ರವಿ ಹಾಗೂ ಲಕ್ಷ ಸರೊಹಾರನ್ನು 21-14,21-7 ಗೇಮ್‌ಗಳಿಂದಲೂ, ಪ್ರಣಯ್ ಚೋಪ್ರಾ ಹಾಗೂ ಶಿವಂ ಶರ್ಮಾ ಜೋಡಿ ಸೆಂಥಿಲ್ ವೆಲ್ ಗೋವಿಂದಅರಸು ಹಾಗೂ ವೆಂಬರಸನ್ ವೆಂಕಟಾಚಲಂರನ್ನು 21-13, 21-13 ಅಂತರದಿಂದ ಗೆಲುವು ದಾಖಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X