Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಾಧವನ್ ನಾಯರ್ ಗೆ ಆಗ ಮಾರಕವಾಗಿದ್ದ...

ಮಾಧವನ್ ನಾಯರ್ ಗೆ ಆಗ ಮಾರಕವಾಗಿದ್ದ 'ಉಪಗ್ರಹ ನಾಶ ಸಾಧನೆ' ಈಗ ಪೂರಕ ಆಯಿತು!

ಇವರು ಬಿಜೆಪಿ ಸೇರಿದ ಮೇಲೆ ಅಂತರಿಕ್ಷದಲ್ಲಿ ಆದ ಬದಲಾವಣೆಗಳೇನು ಬಲ್ಲಿರಾ?

ವಾರ್ತಾಭಾರತಿವಾರ್ತಾಭಾರತಿ28 March 2019 10:14 PM IST
share
ಮಾಧವನ್ ನಾಯರ್ ಗೆ ಆಗ ಮಾರಕವಾಗಿದ್ದ ಉಪಗ್ರಹ ನಾಶ ಸಾಧನೆ ಈಗ ಪೂರಕ ಆಯಿತು!

ಇಸ್ರೋದ ಮಾಜಿ ಅಧ್ಯಕ್ಷ, ಕಳೆದ ವರ್ಷ ಬಿಜೆಪಿಗೆ ಸೇರ್ಪಡೆಯಾದ ಜಿ. ಮಾಧವನ್ ನಾಯರ್ ನಿನ್ನೆ ಹೇಳಿಕೆಯೊಂದನ್ನು ನೀಡಿದ, “ದಶಕಗಳ ಹಿಂದೆಯೇ ಭಾರತಕ್ಕೆ ಉಪಗ್ರಹ ವಿರೋಧಿ ಕ್ಷಿಪಣಿ ಸಾಮರ್ಥ್ಯವಿತ್ತು, ಆದರೆ ಅದನ್ನು ಕಾರ್ಯಗತಗೊಳಿಸಲು ರಾಜಕೀಯ ಇಚ್ಛಾಶಕ್ತಿಯ ಕೊರತೆಯಿತ್ತು” ಎಂದು ಹೇಳಿದ್ದರು.

ದೇಶದ ವಿಜ್ಞಾನಿಗಳು ದೇಶೀಯ ನಿರ್ಮಿತ ಕ್ಷಿಪಣಿಯಿಂದ ಭೂಮಿಯ ಕೆಳ ಕಕ್ಷೆಯಲ್ಲಿ ಸುತ್ತುತ್ತಿರುವ ಸಜೀವ ಉಪಗ್ರಹವನ್ನು ಹೊಡೆದುರುಳಿಸಿದ್ದಾರೆ. ಭಾರತ ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ ಎಂದು ಪ್ರಧಾನಿ ಘೋಷಿಸಿದ್ದ ನಂತರ ಜಿ. ಮಾಧವನ್ ಈ ಹೇಳಿಕೆ ನೀಡಿದ್ದರು.

“ಈಗ ಮೋದಿ ಜೀ ಕ್ರಮ ಕೈಗೊಂಡಿದ್ದಾರೆ.  ನಾವಿದನ್ನು ಮಾಡುತ್ತೇವೆ ಎಂದು ಹೇಳಲು ಅವರಿಗೆ ರಾಜಕೀಯ ಇಚ್ಛೆ ಮತ್ತು ಧೈರ್ಯವಿತ್ತು. ನಾವೀಗ ಇಡೀ ಜಗತ್ತಿಗೇ ನಮ್ಮ ಶಕ್ತಿ ಪ್ರದರ್ಶಿಸಿದ್ದೇವೆ” ಎಂದು ಜಿ ಮಾಧವನ್ ಹೇಳಿದ್ದರು.

ಮಾಧವನ್ ಹೇಳಿಕೆಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಲು ಆರಂಭಿಸಿದ್ದರು. ಕಾಂಗ್ರೆಸ್ ಗೆ ಇಚ್ಛಾಶಕ್ತಿಯ ಕೊರತೆಯಿತ್ತು ಎಂದಿದ್ದರು. ಮಾಧವನ್ ಅವರ ಹೇಳಿಕೆಯು ರಾಷ್ಟ್ರೀಯ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿತ್ತು.

ಆದರೆ 2007ರಲ್ಲಿ ಇದೇ ಜಿ. ಮಾಧವನ್ ನಾಯರ್ ಬಾಹ್ಯಾಕಾಶದಲ್ಲಿ ಕ್ಷಿಪಣಿ ದಾಳಿಗೆ ಸಂಬಂಧಿಸಿ ವ್ಯತಿರಿಕ್ತ ಹೇಳಿಕೆ ನೀಡಿದ್ದಲ್ಲದೆ, ಇಂತಹ ಪ್ರಯತ್ನಗಳು ಸಂಪೂರ್ಣ ತಪ್ಪು ಎಂದಿದ್ದರು, 2007ರಲ್ಲಿ ಚೀನಾವು ಹವಾಮಾನ ಉಪಗ್ರಹವನ್ನು ಹೊಡೆದುರುಳಿಸಿದ್ದಾಗ ಈ ಬಗ್ಗೆ ಅಂದು ಪ್ರತಿಕ್ರಿಯಿಸಿದ್ದ ಮಾಧವನ್ ನಾಯರ್, “ಚೀನಾ ಹಾಗೆ ಮಾಡಬಾರದಿತ್ತು. ಇದು ಅಂತಾರಾಷ್ಟ್ರೀಯ ಒಡಂಬಡಿಕೆಯ ವಿರುದ್ಧವಾಗಿದೆ. ನಮ್ಮ ಬಾಹ್ಯಾಕಾಶವನ್ನು ಶಸ್ತ್ರಮಯವಾಗಿಸಬಾರದು. ಉಪಗ್ರಹವೊಂದನ್ನು ಕೊಲ್ಲುವ ಮೂಲಕ ನೀವು ಹೆಚ್ಚಿನ ಅವಶೇಷಗಳನ್ನು ಸೃಷ್ಟಿಸಿದ್ದೀರಿ. ಇಂದು ಕಕ್ಷೆಯಲ್ಲಿ 8,000 ವಸ್ತುಗಳಿವೆ. ಒಂದು ಉಪಗ್ರಹವನ್ನು ಧ್ವಂಸ ಮಾಡುವ ಮೂಲಕ ನೀವು ನೂರಾರು ವಸ್ತುಗಳನ್ನು ಸೃಷ್ಟಿಸಿದ್ದೀರಿ. ಅವರು ಏಕೆ ಹೀಗೆ ಮಾಡಿದರು ಎನ್ನುವುದು ನನಗೆ ಗೊತ್ತಿಲ್ಲ” ಎಂದು ಹೇಳಿದ್ದರು.

ಆದರೆ ಇಂದು ಅದೇ ನಾಯರ್ ಬಾಹ್ಯಾಕಾಶದಲ್ಲಿ ಕ್ಷಿಪಣಿ ವಿರೋಧಿ ಸಾಮರ್ಥ್ಯವನ್ನು ಮೆಚ್ಚಿದ್ದಾರಲ್ಲದೆ, ವಿಜ್ಞಾನಿಗಳ ಸಾಧನೆಯ ಕ್ರೆಡಿಟನ್ನು ಮೋದಿಯವರಿಗೆ ನೀಡಿದ್ದಾರೆ.

ಇಸ್ರೋ ಮುಖ್ಯಸ್ಥರಾಗಿದ್ದ ನಾಯರ್, 2003ರಿಂದ 2009ರವರೆಗೆ ಬಾಹ್ಯಾಕಾಶ ವಿಭಾಗದ ಕಾರ್ಯದರ್ಶಿಯಾಗಿದ್ದರು. 2018 ಅಕ್ಟೋಬರ್ ನಲ್ಲಿ ಅವರು ಬಿಜೆಪಿ ಸೇರ್ಪಡೆಗೊಂಡಿದ್ದರು.

ಮಂಗಳಯಾನ ‘ಪಬ್ಲಿಸಿಟಿ ಸ್ಟಂಟ್’ ಎಂದಿದ್ದ ನಾಯರ್

2013ರಲ್ಲಿ ಮಂಗಳಯಾನದ ಬಗ್ಗೆ ಮಾತನಾಡಿದ್ದ ಮಾಧವನ್ ನಾಯರ್ , “ಮಂಗಳಯಾನ ಪಬ್ಲಿಸಿಟಿ ಸ್ಟಂಟ್” ಎಂದಿದ್ದರು. ಅಂದು ಅವರ ಹೇಳಿಕೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.

578 ಕೋಟಿ ರೂ. ಹಗರಣದ ಆರೋಪ

ಇಸ್ರೋ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ನಾಯರ್ ಆಂಟ್ರಿಕ್ಸ್ ನ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಬಹುಕೋಟಿ ವ್ಯಾಪಾರ ಒಪ್ಪಂದವನ್ನು ಲಾಭಕ್ಕಾಗಿ ಪಡೆದು ಅಂತಿಮಗೊಳಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಆಂಟ್ರಿಕ್ಸ್ ಗಾಗಿ ಖಾಸಗಿ ಮಲ್ಟಿಮೀಡಿಯಾ ಸಂಸ್ಥೆ ದೇವಾಸ್ ಗೆ ಲಾಭ ಮಾಡಿಕೊಡುವ ದೃಷ್ಟಿಯಿಂದ ಅಕ್ರಮವಾಗಿ 578 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ನಾಯರ್ ವಿರುದ್ಧ ನಂತರ ಚಾರ್ಜ್ ಶೀಟ್ ಸಲ್ಲಿಸಿತ್ತು.  ಈ ಬಗ್ಗೆ ವಿಚಾರಣೆ ನಡೆಸಿದ್ದ ದಿಲ್ಲಿ ಕೋರ್ಟ್ 2017ರ ಡಿಸೆಂಬರ್ ನಲ್ಲಿ ಜಾಮೀನು ಮಂಜೂರು ಮಾಡಿತ್ತು.

ಜಾಮೀನಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಸಿಬಿಐ, ಆರೋಪಿಗೆ ಜಾಮೀನು ನೀಡಿದರೆ ದೇಶದಿಂದ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿದೆ ಎಂದಿತ್ತು. ಇದಾದ ನಂತರ 2018ರಲ್ಲಿ ಅವರು ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X