Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪೋಲೆಂಡ್ ವಿರುದ್ಧ ಪಾರಮ್ಯ ಮೆರೆಯುವುದೇ...

ಪೋಲೆಂಡ್ ವಿರುದ್ಧ ಪಾರಮ್ಯ ಮೆರೆಯುವುದೇ ಭಾರತ?

ಅಝ್ಲಾನ್ ಶಾ ಕಪ್ ಹಾಕಿ

ವಾರ್ತಾಭಾರತಿವಾರ್ತಾಭಾರತಿ28 March 2019 11:19 PM IST
share
ಪೋಲೆಂಡ್ ವಿರುದ್ಧ ಪಾರಮ್ಯ ಮೆರೆಯುವುದೇ ಭಾರತ?

ಇಪೊ (ಮಲೇಶ್ಯ), ಮಾ.28: ಈಗಾಗಲೇ ಟೂರ್ನಿಯ ಫೈನಲ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿರುವ ಭಾರತ ಹಾಕಿ ತಂಡ, ಅಝ್ಲಾನ್ ಹಾಕಿ ಕಪ್‌ನ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಶುಕ್ರವಾರ ತನಗಿಂತ ಕೆಳ ರ್ಯಾಂಕಿನ ಪೋಲೆಂಡ್ ವಿರುದ್ಧ ಪಾರಮ್ಯ ಮೆರೆಯಲು ಸಜ್ಜಾಗಿದೆ.

ಮೂರು ಗೆಲುವು ಹಾಗೂ ಒಂದು ಪಂದ್ಯದ ಡ್ರಾನೊಂದಿಗೆ 6 ತಂಡಗಳ ಅಂಕಪಟ್ಟಿಯಲ್ಲಿ ಭಾರತ 10 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದೆ. 5 ಬಾರಿಯ ಚಾಂಪಿಯನ್ ಭಾರತದಂತೆ ಕೊರಿಯ ಕೂಡ ಶನಿವಾರ ನಡೆಯುವ ಪ್ರಶಸ್ತಿ ಸುತ್ತಿನ ಪಂದ್ಯಕ್ಕೆ ಸ್ಥಾನ ಖಚಿತಪಡಿಸಿಕೊಂಡಿದೆ. ಕೊರಿಯ 10 ಅಂಕಗಳನ್ನು ಹೊಂದಿದ್ದರೂ ಭಾರತಕ್ಕಿಂತ 5 ಗೋಲುಗಳನ್ನು ಕಡಿಮೆ ಬಾರಿಸಿದೆ.

ಲೀಗ್‌ನ ಕೊನೆಯ ಪಂದ್ಯ ಎಲ್ಲ ತಂಡಗಳಿಗೂ ಕೇವಲ ಔಪಚಾರಿಕವಾಗಿದ್ದರೂ ಕೊರಿಯ ಹಾಗೂ ಭಾರತ ತಮ್ಮ ಗೆಲುವಿನ ಅಭಿಯಾನವನ್ನು ಮುಂದುವರಿಸುವ ಹಂತದಲ್ಲಿವೆ. ವಿಶ್ವ ರ್ಯಾಂಕಿಂಗ್‌ನಲ್ಲಿ 5ನೇ ಸ್ಥಾನದಲ್ಲಿರುವ ಭಾರತಕ್ಕೆ 21ನೇ ಸ್ಥಾನದಲ್ಲಿರುವ ಪೋಲೆಂಡ್ ಸುಲಭ ತುತ್ತಾಗುವುದನ್ನು ನಿರೀಕ್ಷಿಸಲಾಗಿದೆ. ಈ ಟೂರ್ನಿಯಲ್ಲಿ ಭಾರತ ತಂಡ ಕೊರಿಯ ವಿರುದ್ಧ ಡ್ರಾ ಸಾಧಿಸಿದ್ದನ್ನು ಬಿಟ್ಟರೆ ಬಂಪರ್ ಬೆಳೆಯನ್ನೇ ತೆಗೆದಿದೆ. ಪ್ರಥಮ ಪಂದ್ಯದಲ್ಲಿ ಏಶ್ಯನ್ ಗೇಮ್ಸ್ ಚಾಂಪಿಯನ್ ಜಪಾನ್ ತಂಡವನ್ನು 2-0ಯಿಂದ ಬಗ್ಗುಬಡಿದಿದ್ದ ಭಾರತ ತಂಡ ಮಲೇಶ್ಯ ವಿರುದ್ಧ 4-2 ಹಾಗೂ ಕೆನಡಾ ವಿರುದ್ಧ ಭರ್ಜರಿ 7-3ರಿಂದ ಜಯ ಸಾಧಿಸಿದೆ. ಕೊರಿಯ ವಿರುದ್ಧದ ಫೈನಲ್‌ಗೂ ಮುನ್ನ ಶುಕ್ರವಾರ ಪೋಲೆಂಡ್ ವಿರುದ್ಧ ತನ್ನ ಆಕ್ರಮಣಕಾರಿ ಸಂಯೋಜನೆಯನ್ನು ಬಲಿಷ್ಠಗೊಳಿಸುವತ್ತ ಮಂದೀಪ್ ಪಡೆ ಗಮನಹರಿಸಬೇಕಿದೆ. ಕೆನಡಾ ವಿರುದ್ಧದ ಪಂದ್ಯದಲ್ಲಿ ಮಂದೀಪ್ ಸಿಂಗ್ ಹ್ಯಾಟ್ರಿಕ್ ಗೋಲು ಬಾರಿಸಿ ಗಮನಸೆಳೆದಿದ್ದು, ಅವರಿಗೆ ಇನ್ನುಳಿದ ಸ್ಟ್ರೈಕರ್‌ಗಳು ಬೆಂಬಲ ನೀಡಬೇಕಿದೆ. ಮಂದೀಪ್ ಹೊರತುಪಡಿಸಿ ವರುಣ್‌ಕುಮಾರ್ ಕೂಡ ಉತ್ತಮ ಪ್ರದರ್ಶನದಿಂದ ಮಿಂಚಿದ್ದಾರೆ. ಟೂರ್ನಿಯಲ್ಲಿ ಪೋಲೆಂಡ್ ತಾನಾಡಿದ ಎಲ್ಲ ಪಂದ್ಯಗಳನ್ನು ಹೀನಾಯವಾಗಿ ಸೋತಿದೆ. ಮಲೇಶ್ಯ ವಿರುದ್ಧ 1-5, ಕೆನಡಾ ವಿರುದ್ಧ 0-4, ಜಪಾನ್ ವಿರುದ್ಧ 0-3 ಅಂತರದಿಂದ ಸೋತಿರುವ ಅದು, ಕೊರಿಯ ವಿರುದ್ಧ ಮಾತ್ರ 2-3ರಿಂದ ಪೈಪೋಟಿ ನೀಡಿತ್ತು. ಶುಕ್ರವಾರದ ಇನ್ನುಳಿದ ಪಂದ್ಯಗಳಲ್ಲಿ ಕೊರಿಯ ತಂಡ ಜಪಾನ್‌ನ್ನು ಎದುರಿಸಿದರೆ, ಮಲೇಶ್ಯ ತಂಡ ಕೆನಡಾ ವಿರುದ್ಧ ಪಂದ್ಯದ ಮೂಲಕ ತನ್ನ ಲೀಗ್ ಅಭಿಯಾನ ಕೊನೆಗೊಳಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X