Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಕ್ಷಿಪಣಿಯಿಂದಾಗಿ ನಮ್ಮದೇ...

ಭಾರತೀಯ ಕ್ಷಿಪಣಿಯಿಂದಾಗಿ ನಮ್ಮದೇ ವಾಯುಪಡೆಯ ಹೆಲಿಕಾಪ್ಟರ್ ಪತನವಾಯಿತೇ ?

ಆರು ಯೋಧರ ಸಹಿತ ಏಳು ಮಂದಿಯ ಸಾವಿನ ತನಿಖೆ ಮಹತ್ವದ ಘಟ್ಟಕ್ಕೆ

ವಾರ್ತಾಭಾರತಿವಾರ್ತಾಭಾರತಿ29 March 2019 12:54 PM IST
share
ಭಾರತೀಯ ಕ್ಷಿಪಣಿಯಿಂದಾಗಿ ನಮ್ಮದೇ ವಾಯುಪಡೆಯ ಹೆಲಿಕಾಪ್ಟರ್ ಪತನವಾಯಿತೇ ?

ಹೊಸದಿಲ್ಲಿ : ಶ್ರೀನಗರ ಸಮೀಪದ ಬುಡ್ಗಾಮ್ ಎಂಬಲ್ಲಿ ಫೆಬ್ರವರಿ 27ರಂದು ಆರು ಮಂದಿ ವಾಯು ಪಡೆಯ ಸಿಬ್ಬಂದಿ ಹಾಗೂ ಒಬ್ಬ ನಾಗರಿಕನ ಬಲಿ ಪಡೆದ ಭಾರತದ ಮಿ 17 ವಿ5 ಹೆಲಿಕಾಪ್ಟರ್ ಪತನಗೊಳ್ಳುವ ಕೆಲವೇ ಕ್ಷಣಗಳ ಮೊದಲು ಭಾರತೀಯ ವಾಯುಪಡೆ ಕ್ಷಿಪಣಿಯೊಂದನ್ನು ಪ್ರಯೋಗಿಸಿತ್ತು ಎಂದು ತನಿಖಾಕಾರರು ಕಂಡುಕೊಂಡಿದ್ದಾರೆ. ಈ ಹೆಲಿಕಾಪ್ಟರ್ ಪತನಗೊಳ್ಳುವುದಕ್ಕಿಂತ ಮುಂಚಿನ ಬೆಳವಣಿಗೆಗಳನ್ನು ತನಿಖಾಕಾರರು ಗಂಭೀರವಾಗಿ ಪರಿಶೀಲಿಸುತ್ತಿದ್ದಾರೆ.

ಕೊನೆಯ ಕ್ಷಣಗಳಲ್ಲಿ ಏನಾಯಿತು, ಐಎಫ್‍ಎಫ್ ( ಐಡೆಂಟಿಫೈ, ಫ್ರೆಂಡ್ ಆರ್ ಫೋ) ವ್ಯವಸ್ಥೆಯನ್ನು ಸ್ವಿಚ್ ಆನ್ ಮಾಡಲಾಗಿತ್ತೇ ಅಥವಾ ಇಲ್ಲವೇ ಎಂದು ತಿಳಿಯುವ ಪ್ರಯತ್ನಗಳೂ ನಡೆಯುತ್ತಿವೆ.

ಈ ಹೆಲಿಕಾಪ್ಟರ್ ಪತನಕ್ಕೆ ಯಾರೇ ಕಾರಣರಾಗಿದ್ದರೂ ಅವರ ವಿರುದ್ಧ ಕೋರ್ಟ್ ಮಾರ್ಷಲ್ ಪ್ರಕ್ರಿಯೆಗೆ ವಾಯು ಸೇನೆ  ಹಿಂಜರಿಯುವುದಿಲ್ಲ ಎಂದು ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನದ ಸುಮಾರು 25 ಯುದ್ಧ ವಿಮಾನಗಳು ಫೆಬ್ರವರಿ 27ರ ಬೆಳಗ್ಗಿನ ಜಾವ ಗಡಿ ಸಮೀಪ ಕಾಣಿಸಿಕೊಂಡ ನಂತರ ಅಲರ್ಟ್ ಘೋಷಿಸಲಾಗಿದ್ದ ಸಂದರ್ಭ ಈ ಕ್ಷಿಪಣಿಯನ್ನು ಪ್ರಯೋಗಿಸಲಾಗಿತ್ತೆಂದು ಮೂಲಗಳು ತಿಳಿಸಿವೆ. ಪಾಕ್ ಯುದ್ಧ ವಿಮಾನಗಳು ಗಡಿ ದಾಟಿ ಭಾರತೀಯ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸುವ ಸಂಭಾವ್ಯತೆಯಿದೆಯೆಂದು ತಿಳಿಯಲಾದ ಹಿನ್ನೆಲೆಯಲ್ಲಿ ಅಲರ್ಟ್ ಘೋಷಿಸಲಾಗಿತ್ತಲ್ಲದೆ  ಪಾಕಿಸ್ತಾನ ತನ್ನ ಬಳಿಯಿರುವ ಶಸ್ತ್ರಸಜ್ಜಿತ ಯುಎವಿಗಳನ್ನೂ ನಿಯೋಜಿಸಿರಬಹುದು ಎಂಬ ಶಂಕೆಯಿತ್ತು.

ಆ ಸಂದರ್ಭ ನಿಧಾನವಾಗಿ ಚಲಿಸುತ್ತಿದ್ದ ಮಿ 17 ವಿ5 ಹೆಲಿಕಾಪ್ಟರ್ ಅನ್ನು ಕೆಳಗಿನ ಮಟ್ಟದಲ್ಲಿ ಹಾರುತ್ತಿರುವ ಪಾಕ್ ಯುಎವಿ ಎಂದು ತಪ್ಪಾಗಿ ತಿಳಿದಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಹೆಲಿಕಾಪ್ಟರ್ ಪತನ ಘಟನೆಯನ್ನು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಹಾಗೂ ತನಿಖೆ ನಡೆಸುತ್ತಿರುವ ಹಿರಿಯ ಅಧಿಕಾರಿಗಲಿಗೆ ಲಭ್ಯ ಎಲ್ಲಾ ಮಾಹಿತಿ ಹಾಗೂ ದಾಖಲೆಗಳನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆ ದಿನ ನೌಶೇರಾ ಸೆಕ್ಟರಿನಲ್ಲಿರುವ ಗಡಿ ನಿಯಂತ್ರಣಾ ರೇಖೆಯ ಸಮೀಪ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳು ಪಾಕ್ ಯುದ್ಧ ವಿಮಾನಗಳ ಜತೆ ಹಣಾಹಣಿ ನಡೆಸಿದ ಹತ್ತು ನಿಮಿಷದಲ್ಲಿ ಹೆಲಿಕಾಪ್ಟರ್ ಪತನಗೊಂಡಿತ್ತು.

ಭಾರತೀಯ ವಾಯು ಸೇನೆ ಹೆಲಿಕಾಪ್ಟರ್ ಪತನವಾಗಿರುವುದನ್ನು ಒಪ್ಪಿಕೊಂಡಿದ್ದರೂ ಆ ಸಂದರ್ಭ ಎರಡೂ ಕಡೆಗಳ ಯುದ್ಧ ವಿಮಾನಗಳ ನಡುವೆ ಹಣಾಹಣಿ ನಡೆಯುತ್ತಿತ್ತೆಂಬುದನ್ನು ಉಲ್ಲೇಖಿಸಿರಲಿಲ್ಲ. ಅತ್ತ ಪಾಕ್ ಮಿಲಿಟರಿ ನೌಷೇರಾ ಸೆಕ್ಟರ್ ಸಮೀಪ ನಡೆದ ಈ ವಾಯು ಸಂಘರ್ಷದ ಬಗ್ಗೆ ಉಲ್ಲೇಖಿಸಿದೆಯಾದರೂ ಹೆಲಿಕಾಪ್ಟರ್ ಪತನದಲ್ಲಿ ತನ್ನ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X