Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೊಲೀಸರನ್ನು ಗುಂಡು ಪಾರ್ಟಿಗೆ ಕರೆದೊಯ್ದು...

ಪೊಲೀಸರನ್ನು ಗುಂಡು ಪಾರ್ಟಿಗೆ ಕರೆದೊಯ್ದು ಪರಾರಿಯಾದ ಗ್ಯಾಂಗ್‍ಸ್ಟರ್!

ಉತ್ತರ ಪ್ರದೇಶದಲ್ಲಿ ನಡೆದ ಘಟನೆ

ವಾರ್ತಾಭಾರತಿವಾರ್ತಾಭಾರತಿ29 March 2019 4:11 PM IST
share
ಪೊಲೀಸರನ್ನು ಗುಂಡು ಪಾರ್ಟಿಗೆ ಕರೆದೊಯ್ದು ಪರಾರಿಯಾದ ಗ್ಯಾಂಗ್‍ಸ್ಟರ್!

ಮೀರತ್ : ವಕೀಲರೊಬ್ಬರನ್ನು 1996ರಲ್ಲಿ ಹತ್ಯೆಗೈದಿದ್ದಕ್ಕಾಗಿ ಜೀವಾವಧಿ ಶಿಕ್ಷೆ ಎದುರಿಸುತ್ತಿರುವ 50 ವರ್ಷದ ಬಡ್ಡನ್ ಸಿಂಗ್ ಅಲಿಯಾಸ್ ಬಡ್ಡೊ ಎಂಬ  ಕೈದಿಯನ್ನು ಗುರುವಾರ ಪೊಲೀಸ್ ಬೆಂಗಾವಲಿನಲ್ಲಿ ಗಾಝಿಯಾಬಾದ್ ನ್ಯಾಯಾಲಯಕ್ಕೆ ಕೊಂಡು ಹೋಗುತ್ತಿರುವ ಸಂದರ್ಭ ಆತ ಪೊಲೀಸರನ್ನು ಮೀರತ್ ನ ದಿಲ್ಲಿ ರಸ್ತೆಯ ಹೋಟೆಲ್ ನಲ್ಲಿ ತನ್ನ ಸಹಚರರು ಆಯೋಜಿಸಿದ್ದ ಗುಂಡು ಪಾರ್ಟಿಗೆ ಕರೆದೊಯ್ದು ನಂತರ ಪರಾರಿಯಾಗಿದ್ದಾನೆ.

ಘಟನೆ ಸಂಬಂಧ ಒಬ್ಬ ಇನ್‍ಸ್ಪೆಕ್ಟರ್ ಸಹಿತ ಏಳು ಮಂದಿ ಪೊಲೀಸ್ ಸಿಬ್ಬಂದಿಯನ್ನು ವಶಪಡಿಸಿಕೊಳ್ಳಲಾಗಿದ್ದು ಅವರ ನಶೆ ಇನ್ನೂ ಇಳಿದಿಲ್ಲ ಎಂದು ಮೀರತ್ ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ನಿತಿನ್ ತಿವಾರಿ ತಿಳಿಸಿದ್ದಾರೆ.

ಫತೇಘರ್ ಕಾರಾಗೃಹದಲ್ಲಿದ್ದ ಬಡ್ಡೊನನ್ನು ಪ್ರಕರಣವೊಂದರ ವಿಚಾರಣೆಗಾಗಿ ಗಝಿಯಾಬಾದ್ ನ್ಯಾಯಾಲಯಕ್ಕೆ ಕರೆದೊಯ್ಯಲಾಗುತ್ತಿದ್ದಾಗ ಈ ಘಟನೆ ನಡೆದಿದ್ದು ಆತನನ್ನು ಶೀಘ್ರ ಬಂಧಿಸುವ ವಿಶ್ವಾಸವನ್ನು ತಿವಾರಿ ವ್ಯಕ್ತಪಡಿಸಿದ್ದಾರೆ.

ಕ್ರೈಂ ಬ್ರ್ಯಾಂಚ್ ಅಧಿಕಾರಿ ಸಂಜಯ್ ಮಿಶ್ರಾ ಅವರು ಘಟನೆಯ ವರದಿ ಸಲ್ಲಿಸಿದ ನಂತರ  ತಪ್ಪಿತಸ್ಥರ  ವಿರುದ್ಧ  ಸೂಕ್ತ ಕ್ರಮ ಕೈಗೊಳ್ಳಬಹುದು ಎಂದು ಫರುಕ್ಕಾಬಾದ್ ಹಿರಿಯ ಎಸ್ಪಿ ಅನಿಲ್ ಕುಮಾರ್ ಮಿಶ್ರಾ ಹೇಳಿದ್ದಾರೆ.

ಬಡ್ಡೋನನ್ನು ಕಳೆದ ವರ್ಷ ಮೀರತ್ ಪೊಲೀಸರು ಬಂಧಿಸಿದ್ದರು. ಆರಂಭದಲ್ಲಿ ಒಂದು ತಿಂಗಳು ಆತನನ್ನು ಮೀರತ್ ಜೈಲಿನಲ್ಲಿರಿಸಲಾಗಿದ್ದರೆ ನಂತರ ಆತನದ್ದೇ ಸಹಚರರಿಂದ ಆತನ ಜೀವಕ್ಕೆ ಬೆದರಿಕೆಯಿದೆಯೆಂದು ಅರಿತ ಪೊಲೀಸರು ಆತನನ್ನು ಫತೇಘರ್ ಜೈಲಿಗೆ ಸ್ಥಳಾಂತರಿಸಿದ್ದರು.

ಆಸ್ಟ್ರೇಲಿಯಾದಲ್ಲಿ ಎಂಬಿಎ ಶಿಕ್ಷಣ ಪಡೆಯುತ್ತಿರುವ ತನ್ನ ಪುತ್ರ ಸಿಕಂದರ್ ಮೀರತ್ ನಗರಕ್ಕೆ ಬಂದಿರುವುದರಿಂದ ಆತನನ್ನು ಭೇಟಿಯಾಗಲೆಂದು ಕಳೆದ ತಿಂಗಳು ಆತ ಸುಪ್ರೀಂ ಕೋರ್ಟಿನ ಮುಂದೆ ಪೆರೋಲ್ ಗೆ ಅಪೀಲು ಸಲ್ಲಿಸಿದ್ದು ಅದು ಇನ್ನೂ ಬಾಕಿಯಿದೆ ಎಂದು ತಿಳಿದು ಬಂದಿದೆ.

ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದ ದ್ವೇಷದಲ್ಲಿ ಬಡ್ಡೊ 1996ರಲ್ಲಿ ಮೀರತ್  ಕಲೆಕ್ಟರೇಟ್ ಕಚೇರಿ ಸಮೀಪ ವಕೀಲ ರವೀಂದ್ರ ಗುರ್ಜರ್ ಎಂಬವರನ್ನು ಕೊಲೆಗೈದ ಆರೋಪದ ಮೇಲೆ ಬಂಧಿತನಾಗಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X