Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಬಿಸಿಲ ಧಗೆಗೆ ತಂಪೆರೆದ...

ಚಿಕ್ಕಮಗಳೂರು: ಬಿಸಿಲ ಧಗೆಗೆ ತಂಪೆರೆದ ಅಕಾಲಿಕ ಮಳೆ

ವಾರ್ತಾಭಾರತಿವಾರ್ತಾಭಾರತಿ29 March 2019 11:48 PM IST
share
ಚಿಕ್ಕಮಗಳೂರು: ಬಿಸಿಲ ಧಗೆಗೆ ತಂಪೆರೆದ ಅಕಾಲಿಕ ಮಳೆ

ಚಿಕ್ಕಮಗಳೂರು, ಮಾ.29: ಜಿಲ್ಲೆಯ ಮೆಲನಾಡು ತಾಲೂಕುಗಳ ವ್ಯಾಪ್ತಿಯಲ್ಲಿ ಶುಕ್ರವಾರ ಮಳೆಯ ಸಿಂಚನವಾಗಿದ್ದು, ಧಿಡೀರ್ ಸುರಿದ ಅಕಾಳಿಕ ಮಳೆಯು ಜಿಲ್ಲೆಯಾದ್ಯಂತ ಬಿಸಿಲ ಧಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರೆಯಿತು.

ಶುಕ್ರವಾರ ಚಿಕ್ಕಮಗಳೂರು ಮಧ್ಯಾಹ್ನದ ವೇಳೆಯಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕೆಲವು ಬಾರಿ ಗುಡುಗುಗಳ ಸದ್ದು ಕೇಳಿ ಬಂತು. ಈ ವಾತಾವರಣದಿಂದಾಗಿ ಸಂಜೆ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಬಿಸಿಲ ಧಗೆಗೆ ರೋಸಿ ಹೋಗಿದ್ದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದರು. ಆದರೆ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ಸಂಜೆಯಾದರೂ ವರ್ಷಧಾರೆಯ ಸುಳಿವಿರಲಿಲ್ಲ. ಇದರಿಂದಾಗಿ ಸಾರ್ವಜನರಿಕರು, ರೈತರು ನಿರಾಶರಾಗುವಂತಾಯಿತು.

ಆದರೆ ಜಿಲ್ಲೆಯ ಮಲೆನಾಡು ತಾಲೂಕುಗಳಾದ ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕು ವ್ಯಾಪ್ತಿಯಲ್ಲಿ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಹಾಗೂ ಗುಡುಗು, ಮಿಂಚು ಸದ್ದು ಮಾಡಿ ಮಳೆಯಾಗುವ ಮುನ್ಸೂಚನೆ ನೀಡಿತ್ತು. ನಿರೀಕ್ಷೆಯಂತೆ ಸಂಜೆಯಾಗುತ್ತಿದ್ದಂತೆ ಮೂಡಿಗೆರೆ ತಾಲೂಕಿನ ಗಬ್ಗಲ್, ಕೂವೆ, ಜಾವಳಿ, ಕಳಸ, ಹೊರನಾಡು, ಕೊಟ್ಟಿಗೆಹಾರ, ಬಾಳೆಹೊಳೆ, ಸಂಸೆ ಭಾಗಗಳಲ್ಲಿ ಸಾಧಾರಣ ಮಳೆ ಸುರಿಯಿತ. ಕೊಪ್ಪ ತಾಲೂಕು ವ್ಯಾಪ್ತಿಯ ಜಯಪುರ, ಹೇರೂರು, ಬಸರಿಕಟ್ಟೆ, ಕೊಗ್ರೆ ಮತ್ತಿತರ ಕಡೆಗಳಲಿ ಮಳೆಯಾದ ಬಗ್ಗೆ ವರದಿಯಾಗಿದೆ. 

ಇನ್ನು ಶೃಂಗೇರಿ ತಾಲೂಕು ವ್ಯಾಪ್ತಿಯ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಅಲಿಕಲ್ಲು ಮಳೆಯಾಗಿದೆ. ತಾಲೂಕಿನ ಸಸಿಮನೆ, ಮೆಣಸೆ, ಕಿಗ್ಗಾ, ನೆಮ್ಮಾರು, ಕೆರೆಮನೆ ಮುಂತಾದ ಕಡೆ ಮಳೆ ಧಾರಾಕಾರ ಮಳೆಯಾದರೆ ಶೃಂಗೇರಿ ಪಟ್ಟಣ, ಅಗಳಗಂಡಿ ಮತ್ತಿತರ ಕಡೆಗಳಲ್ಲಿ ಸಾಧಾರಣ ಮಳೆ ಸುರಿದಿದೆ.

ಕಳೆದ ಮೂರು ತಿಂಗಳಿನಿಂದ ಜಿಲ್ಲೆಯಾದ್ಯಂತ ಸೂರ್ಯನ ಬಿಸಿಲಿನ ಝಳಕ್ಕೆ ಸಾರ್ವಜನಿಕರು ರೋಸಿ ಹೋಗಿದ್ದರು. ಅಡಿಕೆ, ಕಾಫಿ ಬೆಳೆಗಾರರು ಅಕಾಲಿಕ ಮಳೆಯ ನಿರೀಕ್ಷೆಯಲ್ಲಿದ್ದರು. ತೋಟಗಳ ರಕ್ಷಣೆಗೆ ಹಳ್ಳಕೊಳ್ಳದ ನೀರನ್ನು ಕದ್ದಮುಚ್ಚಿ ತೋಟಕ್ಕೆ ಹಾಯಿಸಿ ತೋಟಗಳ ರಕ್ಷಣೆಗೆ ಹರಸಾಹಸ ಪಡುತ್ತಿದ್ದರು. ಮಲೆನಾಡಿಲ್ಲಿ ಅಡಿಕೆ ತೋಟಗಳಲ್ಲಿ ಅಡಿಕೆ ಮರದ ಸಿಂಗಾರಗಳು, ಕಾಳುಮೆಣಸಿನ ಬಳ್ಳಿಗಳು ನೀರಿಲ್ಲದೇ ಒಣಗಿದ್ದು, ಗಿಡಗಳ ರಕ್ಷಣೆಗೆ ಹಗಲಿರುಳು ಹರಸಾಹಸ ಪಡುತ್ತಿದ್ದರು. ಶುಕ್ರವಾರ ಮೋಡಕವಿದ ವಾತಾವರಣ ಕಂಡು ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿದ್ದ ರೈತರನ್ನು ವರುಣ ಕೊಂಚ ನಿರಾಶೆ ಮಾಡಿದ್ದರೂ ಸದ್ಯ ಬಿಸಿಲ ಧಗೆಯಾದರೂ ಕಡಿಮೆ ಮಾಡುವಷ್ಟು ಮಳೆ ಬಂತಲ್ಲ ಎಂದು ಸಮಾಧಾನ ಮಾಡಿಕೊಳ್ಳುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X