Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಭಾರತೀಯ ಯೋಗಮೀಮಾಂಸೆಯ ಹಿಂದೆ...

ಭಾರತೀಯ ಯೋಗಮೀಮಾಂಸೆಯ ಹಿಂದೆ...

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ30 March 2019 12:02 AM IST
share
ಭಾರತೀಯ ಯೋಗಮೀಮಾಂಸೆಯ ಹಿಂದೆ...

‘ಯೋಗ’ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಸುದ್ದಿಯಲ್ಲಿರುವ ಪದ. ರಾಜಕೀಯವಾಗಿ, ಉದ್ಯಮವಾಗಿ, ಸಾಂಸ್ಕೃತಿಕವಾಗಿ ಇದು ಚರ್ಚೆಯಲ್ಲಿದೆ. ಶ್ರೀಮಂತರಿಗೆ ಯೋಗವೆನ್ನುವುದು ‘ಫ್ಯಾಶನ್’ ಆಗಿದೆ. ಯೋಗವನ್ನು ಬೇರೆ ಬೇರೆ ನೆಲೆಗಳಲ್ಲಿ ನೋಡುವವರಿದ್ದಾರೆ. ಯೋಗ ಯಾವುದು ಎನ್ನುವುದರ ಕುರಿತಂತೆಯೇ ಯೋಗ ಪಟುಗಳಲ್ಲಿ ಸ್ಪಷ್ಟತೆ, ಒಮ್ಮತವಿಲ್ಲ. ಯೋಗ ತೀರಾ ಪ್ರಾಚೀನವಾದುದು ಎನ್ನುವುದರ ಕುರಿತಂತೆಯೂ ಭಿನ್ನಮತವಿದೆ. ಹಾಗೆಯೇ ಅದಕ್ಕೊಂದು ಶಾಸ್ತ್ರೀಯ ಹಿನ್ನೆಲೆಯನ್ನು ಕೆಲವರು ನಿರಾಕರಿಸುತ್ತಾರೆ. ನಾಗ ಸಾಧುಗಳಿಂದ ಯೋಗ ಬೆಳೆಯಿತು ಎನ್ನುವವರೂ ಇದ್ದಾರೆ. ಡಾ. ಎನ್ ಎಂ. ಗಿರಿಜಾಪತಿಯವರು ‘ಭಾರತೀಯ ಯೋಗ ಮೀಮಾಂಸೆ’ ಕೃತಿಯಲ್ಲಿ ಅದರ ಹಿನ್ನೆಲೆ ಮುನ್ನೆಲೆಗಳನ್ನು ಕಾಣಿಸುವ ಪ್ರಯತ್ನ ಮಾಡಿದ್ದಾರೆ. ಅವರು ಯೋಗದ ಪ್ರಾಚೀನತೆಯನ್ನು ಗುರುತಿಸುವ ಪ್ರಯತ್ನ ಮಾಡುತ್ತಾರೆ. ಅದಕ್ಕೊಂದು ಮೀಮಾಂಸೆಯನ್ನು ಬರೆಯುತ್ತಾರೆ.
  ಯೋಗ ಇದು ವೇದ ಪೂರ್ವ ಕಾಲದ ಪ್ರಾಚೀನ ಭಾರತದಲ್ಲಿ ರೂಢಿಗತವಾಗಿದ್ದ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಸಾಧನೆಗಳ ಜ್ಞಾನ ಶಿಸ್ತು ಎಂದು ಇಲ್ಲಿ ಲೇಖಕರು ಅಭಿಪ್ರಾಯ ಪಡುತ್ತಾರೆ. ಜೊತೆಗೆ ವೈದಿಕ ಮತ್ತು ವೈದಿಕೇತರ ಅಥವಾ ವೇದ ವಿರೋಧಿ ನಿಲುವುಗಳಿಂದ ರೂಪಿತಗೊಂಡ ಮತ, ತತ್ವ ಅವುಗಳನ್ನು ಪ್ರತಿಪಾದಿಸಿದ ಸಿದ್ಧಾಂತಗಳನ್ನು ಅವರು ಬೆಟ್ಟು ಮಾಡುತ್ತಾರೆ. ಯೋಗ ಪದ ನಿಷ್ಪತ್ತಿ ಅದರ ಅರ್ಥ ವ್ಯಾಪ್ತಿ, ಯೋಗಗಳ ಕುರಿತ ವಿವಿಧ ವ್ಯಾಖ್ಯೆಗಳು, ಯೋಗದ ಪ್ರಕಾರಗಳು, ಯೋಗ ಸಾಹಿತ್ಯದ ಬೆಳವಣಿಗೆ, ಯೋಗ ಮೀಮಾಂಸೆಯ ಪ್ರಯೋಜನ ಇತ್ಯಾದಿಗಳನ್ನು ಮೊದಲ ಅಧ್ಯಾಯದಲ್ಲಿ ಲೇಖಕರು ಚರ್ಚಿಸುತ್ತಾರೆ. ಎರಡನೆ ಅಧ್ಯಾಯದಲ್ಲಿ ಯೋಗ ಮೀಮಾಂಸೆಯ ಚರಿತ್ರೆ ಮತ್ತು ಯೋಗಾಚಾರ್ಯರ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡುತ್ತಾರೆ. ಮೂರನೇ ಅಧ್ಯಾಯ ಯೋಗ ಮತ್ತು ವ್ಯಕ್ತಿತ್ವಕ್ಕೆ ಸಂಬಂಧಪಟ್ಟುದು. ಮನೋವಿಜ್ಞಾನವನ್ನು ಇಟ್ಟುಕೊಂಡು ಯೋಗ ವ್ಯಕ್ತಿತ್ವದ ಮೇಲೆ ಬೀರುವ ಪರಿಣಾಮಗಳನ್ನು ವಿವರಿಸುವ ಪ್ರಯತ್ನ ಮಾಡುತ್ತಾರೆ. ನಾಲ್ಕನೇ ಅಧ್ಯಾಯದಲ್ಲಿ ಯೋಗದರ್ಶನ, ಯೋಗಾಂಗಗಳು ಮತ್ತು ಯೋಗ ಸಾಧಕರ ಕುರಿತಂತೆ ಲೇಖಕರು ಬರೆಯುತ್ತಾರೆ.ಯೋಗಾಭ್ಯಾಸವನ್ನು ನಡೆಸುವ ಬಗೆಯನ್ನೂ ಇಲ್ಲಿ ವಿವರಿಸುತ್ತಾರೆ. ಐದನೇ ಅಧ್ಯಾಯದಲ್ಲಿ ಯೋಗ-ಸಮಾಧಿಸ್ಥಿತಿ ಹಾಗೂ ಅಧಿಕಾರ ಲಕ್ಷಣಗಳ ಕುರಿತಂತೆ ಚರ್ಚಿಸುತ್ತಾರೆ. ಒಟ್ಟಿನಲ್ಲಿ ಯೋಗವನ್ನು ಲೇಖಕರು ಆಧ್ಯಾತ್ಮಿಕತೆಗೆ ತಳಕು ಹಾಕುವ ಮೂಲಕ ಅದನ್ನು ಲೌಕಿಕತೆಯಿಂದ ಅಲೌಕಿಕ ಕ್ರಿಯೆಯಾಗಿ ನೋಡುತ್ತಾರೆ. ಯೋಗದ ಕುರಿತಂತೆ ಗಂಭೀರವಾಗಿ ಚಿಂತಿಸುವ, ವೈದಿಕ ಹಿನ್ನೆಲೆಯಲ್ಲಿ ಯೋಗವನ್ನು ಅಧ್ಯಯನ ಮಾಡುವವರಿಗೆ ಈ ಕೃತಿ ಉಪಯುಕ್ತ.
ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 73. ಮುಖಬೆಲೆ 70 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X