Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಾವ ಚಿಕಿತ್ಸೆ ನೀಡಬೇಕೆಂಬ ಆಯ್ಕೆ ರೋಗಿಯ...

ಯಾವ ಚಿಕಿತ್ಸೆ ನೀಡಬೇಕೆಂಬ ಆಯ್ಕೆ ರೋಗಿಯ ಹಕ್ಕು: ಶಾನುಭಾಗ್

ವಾರ್ತಾಭಾರತಿವಾರ್ತಾಭಾರತಿ30 March 2019 8:27 PM IST
share
ಯಾವ ಚಿಕಿತ್ಸೆ ನೀಡಬೇಕೆಂಬ ಆಯ್ಕೆ ರೋಗಿಯ ಹಕ್ಕು: ಶಾನುಭಾಗ್

ಉಡುಪಿ, ಮಾ. 30: ಪ್ರತಿಯೊಬ್ಬ ರೋಗಿಗೂ ತನ್ನ ರೋಗದ ಬಗ್ಗೆ ತಿಳಿದು ಕೊಳ್ಳುವ, ಯಾವ ರೋಗಕ್ಕೆ ಯಾವ ಚಿಕಿತ್ಸೆ ನೀಡಬೇಕೆಂಬ ಆಯ್ಕೆ ಮಾಡುವ ಮತ್ತು ಯಾವುದೇ ಚಿಕಿತ್ಸೆ ಬೇಡ ಎಂಬುದಾಗಿ ತಿರಸ್ಕರಿಸುವ ಹಕ್ಕುಗಳಿವೆ. ಯಾವುದೇ ರೋಗಿಗೂ ಒತ್ತಾಯ ಪೂರ್ವಕವಾಗಿ ಚಿಕಿತ್ಸೆ ನೀಡಲು ಅವಕಾಶವೇ ಇಲ್ಲ ಎಂದು ಉಡುಪಿ ಮಾನವ ಹಕ್ಕುಗಳ ರಕ್ಷಣಾ ಫೌಂಡೇಶನ್ ಅಧ್ಯಕ್ಷ ಡಾ.ರವೀಂದ್ರನಾಥ್ ಶಾನುಭಾಗ್ ತಿಳಿಸಿದ್ದಾರೆ.

ಜಮೀಯ್ಯುತುಲ್ ಫಲಾಹ್ ಉಡುಪಿ ಘಟಕದ ವತಿಯಿಂದ ಉಡುಪಿ ಜಾಮೀಯ ಮಸೀದಿಯಲ್ಲಿ ಶನಿವಾರ ಆಯೋಜಿಸಲಾದ ‘ಆರೋಗ್ಯವೇ ಭಾಗ್ಯ’ ಜನಜಾಗೃತಿ ಕಾರ್ಯಕ್ರಮದಲ್ಲಿ ‘ಆರೋಗ್ಯ ರಂಗದ ವ್ಯಾಪಾರೀಕರಣ, ಬಳಕೆದಾರರ ರಕ್ಷಣಾ ಕಾಯಿದೆ ಮತ್ತು ರೋಗಿಗಳ ಹಕ್ಕುಗಳು’ ಕುರಿತು ಅವರು ಮಾತನಾಡುತಿದ್ದರು.

ಭಾರತದ ವೈದ್ಯಕೀಯ ಶಾಸ್ತ್ರದಲ್ಲಿ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಬೇಕೆಂಬ ನಿಯಮ ಇದೆ. ಆದರೆ ಆಸ್ಪತ್ರೆಗಳು ಇಂದು ವಯೋವೃದ್ಧರನ್ನು ಚಿಕಿತ್ಸೆ ಹೆಸರಿನಲ್ಲಿ ಒಳರೋಗಿಗಳಾಗಿ ದಾಖಲಿಸಿ ಹಣ ಗಳಿಸುವ ಕೆಲಸ ಮಾಡುತ್ತಿವೆ. ವಯೋ ವೃದ್ಧತೆ ಎಂಬುದು ಜೀವನದ ಭಾಗವೇ ಹೊರತು ರೋಗ ಅಲ್ಲ. ಸಾಯುವ ವೃದ್ಧರನ್ನು ಯಾವುದೇ ಚಿಕಿತ್ಸೆಯಿಂದಲೂ ಬದುಕಿಸಲು ಸಾಧ್ಯವೇ ಇಲ್ಲ ಎಂದರು.

ಹಿಂದೆ ಯಾವುದೇ ಹಣ ಗಳಿಸುವ ಉದ್ದೇಶ ಹೊಂದಿರದ ವೈದ್ಯಕೀಯ ಕ್ಷೇತ್ರವು ಸೇವೆಯಾಗಿತ್ತು. ಆದರೆ ಇಂದು ಅದು ವ್ಯಾಪಾರೀಕರಣವಾಗಿರುವುದು ದುರಂತ. ಆದುದರಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳು ಅಥವಾ ಅವರ ಮನೆಯವರು ಚಿಕಿತ್ಸೆ ಕುರಿತು ವೈದ್ಯರನ್ನು ಪ್ರಶ್ನಿಸುವ ಮನೋಭಾವವನ್ನು ಬೆಳೆಸಿ ಕೊಳ್ಳಬೇಕು ಎಂದು ಅವರು ಹೇಳಿದರು.

ಮಾನಸಿಕ ತಜ್ಞ ಡಾ.ವಿ.ಪಿ.ಭಂಡಾರಿ ‘ಮಾನಸಿಕ ಒತ್ತಡ ನಿವಾರಣೆಯ ವಿಧಾನಗಳು’ ಕುರಿತು ಮಾತನಾಡಿದರು. ಮಸೀದಿಯ ಅಧ್ಯಕ್ಷ ಸೈಯ್ಯದ್ ಯಾಸೀನ್ ಉಪಸ್ಥಿತರಿದ್ದರು. ವೈದ್ಯ ಡಾ.ಮುಹಮ್ಮದ್ ರಫೀಕ್ ಪ್ರಾಸ್ತಾವಿಕ ವಾಗಿ ಮಾತನಾಡಿದರು.

ಜಮೀಯ್ಯುತುಲ್ ಫಲಾಹ್ ಉಡುಪಿ ಘಟಕದ ಅಧ್ಯಕ್ಷ ಖತೀಬ್ ಅಬ್ದುರ್ರಶೀದ್ ವಂದಿಸಿದರು. ಸದಸ್ಯ ಮುಹಮ್ಮದ್ ಮೌಲಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X