Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅರ್ಜೆಂಟೀನದ ಅಭಿಮಾನಿಗಳ ಟೀಕೆಗೆ ಮೆಸ್ಸಿ...

ಅರ್ಜೆಂಟೀನದ ಅಭಿಮಾನಿಗಳ ಟೀಕೆಗೆ ಮೆಸ್ಸಿ ಬೇಸರ

ವಾರ್ತಾಭಾರತಿವಾರ್ತಾಭಾರತಿ31 March 2019 12:44 AM IST
share
ಅರ್ಜೆಂಟೀನದ ಅಭಿಮಾನಿಗಳ ಟೀಕೆಗೆ ಮೆಸ್ಸಿ ಬೇಸರ

ಬ್ಯುನಸ್ ಐರಿಸ್, ಮಾ.30: ತಾಯ್ನಡಿನಲ್ಲಿ ತಾನು ಎದುರಿಸುತ್ತಿರುವ ನಿರಂತರ ಟೀಕೆಗಳಿಂದ ಬೇಸರಗೊಂಡಿರುವೆ ಎಂದು ಹೇಳಿರುವ ಅರ್ಜೆಂಟೀನದ ಸ್ಟಾರ್ ಆಟಗಾರ ಲಿಯೊನೆಲ್ ಮೆಸ್ಸಿ, ಏಕೆ ದೇಶದ ಜನರು ನಿಮ್ಮನ್ನು ಇಷ್ಟೊಂದು ಟೀಕಿಸುತ್ತಾರೆ ಎಂದು ತನ್ನ ಆರು ವರ್ಷದ ಮಗ ನನ್ನನ್ನು ಕೇಳುತ್ತಿದ್ದಾನೆ ಎಂದಿದ್ದಾರೆ.

ಮೆಸ್ಸಿ ಅವರು ತಾನು ಪ್ರತಿನಿಧಿಸುತ್ತಿರುವ ಬಾರ್ಸಿಲೋನ ಫುಟ್ಬಾಲ್ ಕ್ಲಬ್‌ನಲ್ಲಿ ತೋರಿಸುವಷ್ಟು ಉತ್ಸಾಹವನ್ನು ಅಂತರ್‌ರಾಷ್ಟ್ರೀಯ ಫುಟ್ಬಾಲ್‌ನಲ್ಲಿ ತೋರಿಸುತ್ತಿಲ್ಲ ಎಂದು ಅರ್ಜೆಂಟೀನ ಅಭಿಮಾನಿಗಳು ಟೀಕಿಸುತ್ತಿದ್ದಾರೆ.

ಕಳೆದ ವರ್ಷ ಫಿಫಾ ವಿಶ್ವಕಪ್‌ನಲ್ಲಿ ಅರ್ಜೆಂಟೀನ ತಂಡ ಫ್ರಾನ್ಸ್ ವಿರುದ್ಧ ಸೋತ ಬಳಿಕ ಮೆಸ್ಸಿ ವೌನಕ್ಕೆ ಶರಣಾಗಿರುವುದನ್ನು ಅರ್ಜೆಂಟೀನದ ಫುಟ್ಬಾಲ್ ಅಭಿಮಾನಿಗಳು ಪ್ರಶ್ನಿಸಿದ್ದರು. ‘‘ನಾನು ಆ ಸೋಲನ್ನು ಮರೆತು, ತಂಡದಿಂದ ಸ್ವತಃ ದೂರ ಉಳಿಯಲು ಬಯಸಿದ್ದೆ. ವೃತ್ತಿ ಜೀವನಚಕ್ರ ಈ ರೀತಿ ಕೊನೆಯಾಗಿದ್ದು ನೋಡಿ ನೋವಾಗುತ್ತದೆ. ನಾನು ತಂಡಕ್ಕೆ ವಾಪಸಾಗಬಾರದು ಎಂದು ಹೆಚ್ಚಿನವರ ಒತ್ತಾಯವಾಗಿದೆ. ಅವರು ನಿಮ್ಮನ್ನು ಅರ್ಜೆಂಟೀನದಲ್ಲಿ ಕೊಲ್ಲುತ್ತಿರುವುದೇಕೆ? ಎಂದು ಸ್ನೇಹಿತರು, ನನ್ನ ಆರು ವರ್ಷದ ಪುತ್ರ ನನ್ನನ್ನು ಪ್ರಶ್ನಿಸಿದ್ದಾನೆ’’ ಎಂದು 31ರ ಹರೆಯದ ಅರ್ಜೆಂಟೀನ ನಾಯಕ ಮೆಸ್ಸಿ ಹೇಳಿದ್ದಾರೆ.

‘‘ನನಗೆ ಪ್ರತಿಷ್ಠಿತ ಟೂರ್ನಮೆಂಟ್ ಗೆಲ್ಲಬೇಕೆಂಬ ಆಸೆಯಿದೆ. ಕೋಚ್ ಲಿಯೊನೆಲ್ ಸ್ಕಾಲೊನಿ ಮಾರ್ಗದರ್ಶನದಲ್ಲಿ ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸುವೆ. 2014ರ ವಿಶ್ವಕಪ್‌ನಲ್ಲಿ ಫೈನಲ್‌ಗೆ ತಲುಪಿರುವುದು, ಎರಡು ಬಾರಿ ಕೋಪಾ ಅಮೆರಿಕ ಟೂರ್ನಿಯಲ್ಲಿ ಫೈನಲ್‌ಗೆ ತಲುಪಿರುವುದು ಸೇರಿದಂತೆ ಈಗಾಗಲೇ ಅಮೋಘ ಸಾಧನೆ ಮಾಡಿದ್ದೇವೆ’’ ಎಂದು 5 ಬಾರಿ ಬ್ಯಾಲನ್ ಡಿ’ಒರ್ ಪ್ರಶಸ್ತಿ ಜಯಿಸಿರುವ ಮೆಸ್ಸಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X