Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುರುತಿನ ಚೀಟಿ ತಮ್ಮ ಬಳಿಯೆ...

ಗುರುತಿನ ಚೀಟಿ ತಮ್ಮ ಬಳಿಯೆ ಇಟ್ಟುಕೊಳ್ಳಬೇಕು: ಮತದಾರರಿಗೆ ಸಂಜೀವ್‌ ಕುಮಾರ್ ಸಲಹೆ

ಮತದಾನ ಜಾಗೃತಿ ಬೀದಿ ನಾಟಕ-ಜಾಥಾಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ31 March 2019 5:23 PM IST
share
ಗುರುತಿನ ಚೀಟಿ ತಮ್ಮ ಬಳಿಯೆ ಇಟ್ಟುಕೊಳ್ಳಬೇಕು: ಮತದಾರರಿಗೆ ಸಂಜೀವ್‌ ಕುಮಾರ್ ಸಲಹೆ

ಬೆಂಗಳೂರು, ಮಾ. 31: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಅಧಿಕಾರಿ/ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಅಯೋಜಿಸಿದ್ದ ಮತದಾನ ಜಾಗೃತಿ ಬೀದಿ ನಾಟಕ ‘ಚುನಾವಣೆ ಸಮಯ’ ಎಂಬ ಸಾಮಾಜಿಕ ನಾಟಕ ಪ್ರದರ್ಶನ, ಮತದಾನ ಜಾಗೃತಿ ಜಾಥಾಕ್ಕೆ ಮುಖ್ಯ ಚುನಾವಣಾಧಿಕಾರಿಗಳು ಚಾಲನೆ ನೀಡಿದರು.

ರವಿವಾರ ಇಲ್ಲಿನ ಲಾಲ್‌ಬಾಗ್‌ನಲ್ಲಿ ಏರ್ಪಡಿಸಿದ್ದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮತದಾರರ ಜಾಗೃತಿ ಕಾರ್ಯವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ. ಇದರಿಂದಾಗಿ ಮತದಾನದಲ್ಲಿ ಜಾಗೃತಿ ಉಂಟಾಗಿ ಹೆಚ್ಚು ಮತದಾನ ಆಗಲಿಕ್ಕೆ ಸಹಕಾರಿ ಎಂದರು.

ಅಲ್ಲದೆ, ಇಂತಹ ನಾಟಕಗಳ ಪ್ರದರ್ಶನವನ್ನು ಹೆಚ್ಚಾಗಿ ನಗರದ ಕೊಳಚೆ ಪ್ರದೇಶಗಳಲ್ಲಿ ಹಮ್ಮಿಕೊಂಡು ಹೆಚ್ಚು-ಹೆಚ್ಚು ಜಾಗೃತಿ ಉಂಟು ಮಾಡಬೇಕೆಂದು ತಿಳಿಸಿದರು. ನಾಗರಿಕರು ತಮ್ಮ ಬಳಿಯೇ ಗುರುತಿನ ಚೀಟಿಗಳನ್ನು ಇಟ್ಟು ಕೊಳ್ಳಬೇಕೆಂದು ಸೂಚಿಸಿದರು.

ಕಳೆದ ಬಾರಿ ಒಂದೇ ಕಡೆ 7500 ಗುರುತಿನ ಚೀಟಿ ಸಿಕ್ಕಿದ್ದು, ಅವುಗಳನ್ನು ಮುಟ್ಟುಗೊಲು ಹಾಕಿಕೊಳ್ಳಲಾಗಿದ್ದು, ಈ ರೀತಿಯ ಅವಘಡಗಳು ಸಂಭವಿಸಬಾರದು. ಈ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಈ ರೀತಿಯ ಜಾಗೃತಿ ಕಾರ್ಯಕ್ರಮ ಬೆಂಗಳೂರಿನದ್ಯಾಂತ ನಡೆಯುತ್ತಿದ್ದು, ಗುರುತಿನ ಚೀಟಿಗಳನ್ನು ಮತದಾರರು ತಮ್ಮ ಬಳಿ ಇಟ್ಟುಕೊಳ್ಳಬೇಕು. ನಗರದ 700ಕ್ಕೂ ಹೆಚ್ಚು ಕೊಳಚೆ ಪ್ರದೇಶಗಳಲ್ಲಿ ಇಂತಹ ಜಾಗೃತಿ ಕಾರ್ಯಗಳ ಮೂಲಕ ಅರಿವು ಮೂಡಿಸಲಾಗುವುದು ಎಂದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಮಾತನಾಡಿ, ಈ ಸಾಲಿನ ಚುನಾವಣಾ ಅವಧಿ ರಜೆಗಳ ಮಧ್ಯೆ ಬಂದಿದ್ದು, ಬಹುತೇಕರು ರಜೆ ಅವಧಿ ಉಪಯೋಗಿಸಿಕೊಂಡು ಬೇರೆ ಕಡೆ ಪ್ರಯಾಣ ಮಾಡಲು ಬಯಸುತ್ತಿರುವುದು ದುರದೃಷ್ಟಕರ. ಅಂತಹವರು ಮತ್ತೊಮ್ಮೆ ಯೋಚಿಸಿ ಮತದಾನದ ಮಹತ್ವ ಅರಿತು ಮತದಾನ ಮಾಡಬೇಕೆಂದು ಸಲಹೆ ಮಾಡಿದರು.

ಅನಂತರ ಹಾಸ್ಯನಟರಾದ ಡಿಂಗ್ರಿ ನಾಗರಾಜ್, ಮೂಗು ಸುರೇಶ್, ರೇಖಾ ದಾಸ್ ಸೇರಿದಂತೆ ಇನ್ನಿತರರು ಮತದಾನ ಜಾಗೃತಿ ಮುಖಾಂತರ ಹೆಚ್ಚಿನ ಮತದಾನವಾದರೆ ನಮ್ಮ ಪ್ರಯತ್ನ ಸಾರ್ಥಕವೆಂದರು. ಕಾರ್ಯಕ್ರಮದಲ್ಲಿ ಬಿಬಿಎಂಪಿ ಅಧಿಕಾರಿ/ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್‌ರಾಜ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X