Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಸರಕಾರದಿಂದ ಚುನಾವಣಾ ಅಧಿಕಾರಿಗಳ...

ರಾಜ್ಯ ಸರಕಾರದಿಂದ ಚುನಾವಣಾ ಅಧಿಕಾರಿಗಳ ದುರ್ಬಳಕೆ: ಎಸ್.ಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ31 March 2019 5:58 PM IST
share

ಬೆಂಗಳೂರು, ಮಾ.31: ರಾಜ್ಯ ಸರಕಾರ ಚುನಾವಣಾ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಇದೀಗ ಸ್ಪಷ್ಟವಾಗಿ ಬಯಲಾಗಿದೆ. ಜಿಲ್ಲಾಧಿಕಾರಿಗಳು ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಸನ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಸಹ ವಕ್ತಾರ ಎಸ್.ಪ್ರಕಾಶ್ ತಿಳಿಸಿದರು.

ರವಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಾಗೆಯೇ, ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ, ಮುಖ್ಯಮಂತ್ರಿ ಆದೇಶದ ಮೇರೆಗೆ ನಿಖಿಲ್ ಕುಮಾರಸ್ವಾಮಿ ನಾಮಪತ್ರವನ್ನು ಕಾನೂನು ಬಾಹಿರವಾಗಿ ಸಿಂಧುಗೊಳಿಸಿ, ಇದನ್ನು ಪ್ರಶ್ನೆ ಮಾಡಿದ ಅವರ ಪ್ರತಿಸ್ಪರ್ಧಿ ಸುಮಲತಾ ಅಂಬರೀಷ್‌ಗೆ ನೋಟಿಸ್ ನೀಡುವ ಉದ್ಘಟತನ ತೋರಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಮುಖ್ಯ ಚುನಾವಣಾಧಿಕಾರಿ, ಈ ಪ್ರಕರಣವನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ತಿಳಿಸಿರುವ ಹಿನ್ನೆಲೆಯಲ್ಲಿ, ನಿಷ್ಪಕ್ಷಪಾತ ಚುನಾವಣೆ ನಡೆಸಲು ಮಂಡ್ಯ ಜಿಲ್ಲಾಧಿಕಾರಿಯನ್ನು ಈ ಕೂಡಲೇ ವರ್ಗಾವಣೆ ಮಾಡಬೇಕು. ಹೊರ ರಾಜ್ಯದ ಜಿಲ್ಲಾಧಿಕಾರಿಯನ್ನು ಜಿಲ್ಲೆಗೆ ನೇಮಕ ಮಾಡಬೇಕು. ಮಂಡ್ಯ ಕ್ಷೇತ್ರವನ್ನು ಅತೀ ಸೂಕ್ಷ್ಮ ಕ್ಷೇತ್ರವೆಂದು ಘೋಷಿಸಬೇಕು ಎಂದು ಅವರು ಒತ್ತಾಯಿಸಿದರು.

ನಿಖಿಲ್ ಕುಮಾರಸ್ವಾಮಿಗೆ ವೋಟ್ ಹಾಕದಿದ್ದರೆ ದೇವರು ಒಳ್ಳೆಯದು ಮಾಡಲ್ಲ ಎಂದು ಸಚಿವ ತಮ್ಮಣ್ಣ ಬೇಕಾಬಿಟ್ಟಿ ಹೇಳಿಕೆಯನ್ನು ನೀಡಿದ್ದಾರೆ. ಈ ಮೂಲಕ ಮತದಾರರಿಗೆ ಬೆದರಿಕೆ ಹಾಕುವ ತಂತ್ರ ಅನುಸರಿಸುತ್ತಿದ್ದಾರೆ. ಚುನಾವಣಾ ಆಯೋಗವು ಇವರು ಪದೇ ಪದೇ ನೀಡುತ್ತಿರುವ ಆಕ್ಷೇಪಾರ್ಹ ಬೇಜವಾಬ್ದಾರಿ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿ, ತೆಗೆದುಕೊಂಡು ಕೂಡಲೇ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರಕಾಶ್ ಆಗ್ರಹಿಸಿದರು.

ಬಿಜೆಪಿ ಸಹ ವಕ್ತಾರ ಎ.ಎಚ್.ಆನಂದ್ ಮಾತನಾಡಿ, ಭ್ರಷ್ಟ ಅಧಿಕಾರಿಗಳ ಮೇಲೆ ಮತ್ತು ಗುತ್ತಿಗೆದಾರರ ಮೇಲೆ ಐಟಿ ಇಲಾಖೆಯಿಂದ ನಡೆಯುತ್ತಿರುವ ದಾಳಿಯನ್ನು ನಿಲ್ಲಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬರೆದಿರುವ ಪತ್ರ ಅತ್ಯಂತ ಖಂಡನಾರ್ಹ ಹಾಗೂ ತಲೆ ತಗ್ಗಿಸಬೇಕಾದ ವಿಚಾರವಾಗಿದೆ ಎಂದರು.

ಚುನಾವಣೆಯಲ್ಲಿ ಅಕ್ರಮ ಹಣದ ಪ್ರಭಾವವನ್ನು ಕಡಿತಗೊಳಿಸಲು ನಡೆಯುತ್ತಿರುವ ಪ್ರಯತ್ನವನ್ನು ವಿರೋಧಿಸುತ್ತಿರುವುದು ಚುನಾವಣೆಯಲ್ಲಿ ಅಕ್ರಮವೆಸಗಲು ದುಸ್ತರವಾಗಿರುವ ಕಾರಣ, ಸಹಾಯಕರಾಗಿ ಈ ಪತ್ರವನ್ನು ಬರೆದಿದ್ದಾರೆ. ತೋಳ್ಬಲ, ಹಣ ಬಲ ಮತ್ತು ಭ್ರಷ್ಟ ಅಧಿಕಾರಿಗಳ ಬಲದಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಲು ನಡೆಸಿದ್ದ ಷಡ್ಯಂತರ ವಿಫಲವಾಗಿ ಕಂಗಾಲಾಗಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X