Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ಅಭ್ಯರ್ಥಿಯಾದ ಬೆನ್ನಿಗೇ...

ಕಾಂಗ್ರೆಸ್ ಅಭ್ಯರ್ಥಿಯಾದ ಬೆನ್ನಿಗೇ ಊರ್ಮಿಳಾ ಮಾತೋಂಡ್ಕರ್ ರನ್ನು ಮತಾಂತರ ಮಾಡಿದ ಟ್ರೋಲ್ ಗಳು!

ವಾರ್ತಾಭಾರತಿವಾರ್ತಾಭಾರತಿ31 March 2019 8:06 PM IST
share
ಕಾಂಗ್ರೆಸ್ ಅಭ್ಯರ್ಥಿಯಾದ ಬೆನ್ನಿಗೇ ಊರ್ಮಿಳಾ ಮಾತೋಂಡ್ಕರ್ ರನ್ನು ಮತಾಂತರ ಮಾಡಿದ ಟ್ರೋಲ್ ಗಳು!

ಮುಂಬೈ, ಮಾ. 31 : ಮುಂಬೈ ಉತ್ತರದಿಂದ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಣೆಯಾದ ಬೆನ್ನಿಗೇ ಖ್ಯಾತ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಅವರನ್ನು ಇಂಟರ್ನೆಟ್ ಟ್ರೋಲ್ ಗಳು ಮತಾಂತರ ಮಾಡಿಸಿಬಿಟ್ಟಿದ್ದಾರೆ ! 

ಊರ್ಮಿಳಾ ಅವರ ವಿಕಿಪೀಡಿಯದಲ್ಲಿರುವ ಪರಿಚಯ ಪೇಜ್ ಅನ್ನು ಎಡಿಟ್ ಮಾಡಿರುವ ಟ್ರೋಲ್ ಗಳು ಆಕೆಯ ಹೆಸರು, ಧರ್ಮ ಹಾಗು ಇತರ ಪ್ರಮುಖ ವಿವರಗಳನ್ನು ತಿರುಚಿ ಬದಲಾಯಿಸಿಬಿಟ್ಟಿದ್ದಾರೆ.

ಊರ್ಮಿಳಾ ಹೆಸರನ್ನು ಮರ್ಯಮ್ ಅಕ್ತರ್ ಮೀರ್ ಎಂದು ಬದಲಾಯಿಸಿರುವ ಟ್ರೋಲ್ ಗಳು ಆಕೆಯ ತಂದೆಯ ಹೆಸರನ್ನು ಶಿವೇಂದರ್ ಸಿಂಗ್ ಹಾಗು ರುಕ್ಸನಾ ಸುಲ್ತಾನ ಎಂದು ಬದಲಾಯಿಸಿಬಿಟ್ಟಿದ್ದಾರೆ. ಆಕೆಯ ತಂದೆಯ ನಿಜ ಹೆಸರು ಶ್ರೀಕಾಂತ್ ಮಾತೋಂಡ್ಕರ್. ಆಕೆ ಮೊಹಸಿನ್ ಅಕ್ತರ್ ಮೀರ್ ಅವರನ್ನು ಮುಸ್ಲಿಂ ಧರ್ಮದ ವಿಧಿವಿಧಾನಗಳಂತೆ ವಿವಾಹವಾಗಿ ಮುಸ್ಲಿಂ ಆಗಿದ್ದಾರೆ ಎಂದು ಟ್ರೋಲ್ ಗಳು ಇಲ್ಲಿ ಮಾಹಿತಿ ತಿರುಚಿದ್ದಾರೆ. 

ಇದು ಸಮಾಜ ವಿರೋಧಿ ಶಕ್ತಿಗಳು ಮಾಡಿರುವ ಕೆಲಸ. ವಿಕಿಪೀಡಿಯ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಊರ್ಮಿಳಾ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಲು ಸ್ಪರ್ಧಿಸುತ್ತಿದ್ದಾರೆ. ಆಕೆ ತನ್ನ ಪ್ರತಿಸ್ಪರ್ಧಿ ಬಗ್ಗೆ ಇಂತಹ ಕೀಳು ಅಭಿರುಚಿಯ ಕೆಲಸ ಮಾಡುವುದಿಲ್ಲ ಎಂದು ಊರ್ಮಿಳಾ ತಂದೆ ಶ್ರೀಕಾಂತ್ ಮಾತೋಂಡ್ಕರ್ ಹೇಳಿದ್ದಾರೆ. 

ಮುಂಬೈ ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ಮಾತಾಡಿ ಇದು ಬಿಜೆಪಿ ಊರ್ಮಿಳಾ ಅವರ ಸ್ಪರ್ಧೆಯಿಂದ ವಿಚಲಿತವಾಗಿರುವುದನ್ನು ತೋರಿಸುತ್ತದೆ. ಆಕೆಯ ಸ್ಪರ್ಧೆ ಘೋಷಣೆ ಬಳಿಕ ಜನರಿಂದ ಅತ್ಯುತ್ತಮ ಪ್ರತಿಕ್ರಿಯೆ ಬರುತ್ತಿದೆ. ಹಾಗಾಗಿ ಬಿಜೆಪಿಯ ಟ್ರೋಲ್ ಗಳು ಈ ಕೀಳು ಮಟ್ಟದ ಅಪಪ್ರಚಾರ ಅಭಿಯಾನ ನಡೆಸುತ್ತಿದ್ದಾರೆ. ಅವರಿಗೆ ಧರ್ಮೇಂದ್ರ - ಹೇಮಮಾಲಿನಿ ಮದುವೆಯನ್ನು ನೆನಪಿಸಬೇಕೆ ( ಎರಡನೇ ಮದುವೆ ಮಾಡಿಕೊಳ್ಳಲು ಇಸ್ಲಾಂ ಸ್ವೀಕರಿಸಿದ್ದು ) ಎಂದು ಹೇಳಿದ್ದಾರೆ.

ಮೊಹಸಿನ್ ಅಕ್ತರ್ ಮೀರ್ ಅವರನ್ನು ವಿವಾಹವಾಗಿರುವ  ಊರ್ಮಿಳಾ  ಇಸ್ಲಾಂ ಧರ್ಮ ಸ್ವೀಕರಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X