Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾತ್ಯತೀತ ಪರಿಕಲ್ಪನೆಗೆ ಮೋದಿ ಮಾರಕ:...

ಜಾತ್ಯತೀತ ಪರಿಕಲ್ಪನೆಗೆ ಮೋದಿ ಮಾರಕ: ಡಿಸಿಎಂ ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ1 April 2019 7:46 PM IST
share
ಜಾತ್ಯತೀತ ಪರಿಕಲ್ಪನೆಗೆ ಮೋದಿ ಮಾರಕ: ಡಿಸಿಎಂ ಪರಮೇಶ್ವರ್

ತುರುವೇಕೆರೆ, ಎ.1: ಆರೆಸ್ಸೆಸ್ ಅಜೆಂಡಾಗಳನ್ನು ಮುಂದಿಟ್ಟುಕೊಂಡು ಆಡಳಿತ ನಡೆಸಿದ ಪ್ರಧಾನಿ ಮೋದಿ ಜಾತ್ಯತೀತ ಪರಿಕಲ್ಪನೆಗೆ ಮಾರಕವಾಗಿದ್ದು, ಜನರಿಗೆ ನೀಡಿದ್ದ ಯಾವುದೇ ಆಶ್ವಾಸನೆಗಳನ್ನು ಈಡೇರಿಸದೇ ಭಾವನಾತ್ಮಕವಾಗಿ ಜನರನ್ನು ಕೆರಳಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆರೋಪಿಸಿದರು.

ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರೈತನ ಪರವಾದ ಯಾವುದೇ ಶಾಶ್ವತ ಯೋಜನೆಗಳನ್ನು ಜಾರಿಗೆ ತರದ ಮೋದಿ ಸರ್ಕಾರ ರೈತ ವಿರೋದಿ ಸರ್ಕಾರ. ನೋಟು ಅಮಾನ್ಯೀಕರಣ ಜಾರಿಗೆ ತಂದು ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿ, ದೇಶದ ಬಂಡವಾಳ ಶಾಹಿಗಳ, ವರ್ತಕರ ಪರವಾದ ಕಾನೂನು ರೂಪಿಸಿದ್ದೇ ಮೋದಿ ಸರ್ಕಾರದ 5 ವರ್ಷಗಳ ಸಾಧನೆ ಎಂದು ಲೇವಡಿ ಮಾಡಿದರು.

ಲೋಕಸಭಾ ಚುನಾವಣೆ ಸೈದ್ದಾಂತಿಕ ನೆಲೆಗಟ್ಟಿನ ಹೋರಾಟವೆನಿಸಿದೆ. ಹಿಂದೂ ರಾಷ್ಟ್ರ ನಿರ್ಮಾಣ ಮಾಡಬೇಕೆಂಬ ಒಂದಂಶದ ಕಾರ್ಯಕ್ರಮ ಜಾರಿಗೆ ಮುಂದಾಗಿದ್ದಾರೆ, ಜಾತ್ಯಾತೀತ ರಾಷ್ಟ್ರವೆನಿಸಿರುವ ಭಾರತದಲಿರುವ ಕೈಸ್ತ, ಮುಸ್ಲಿಂ, ಸೇರಿದಂತೆ ಎಲ್ಲಾ ಧರ್ಮದವರು ಅಭದ್ರತೆಯ ನೆರಳಿನಲ್ಲಿ ಬದುಕುವಂತಾಗಿದೆ ಎಂದು ದೂರಿದರು.

ಸಣ್ಣ ಕೈಗಾರಿಕಾ ಸಚಿವರಾದ  ಶ್ರೀನಿವಾಸ್ ಮಾತನಾಡಿ ಮೋದಿಯ ಹೆಸರನ್ನು ಹೇಳಿಕೊಂಡು ಮತಹಾಕಿ ಎಂದು ಭಾಜಪ ಅಭ್ಯರ್ಥಿ ಜಿ. ಎಸ್. ಬಸವರಾಜು ಮುಂದಾಗಿದ್ದಾರೆ. ಕಳೆದ ಮೂರು ಅವಧಿಗೆ ಸಂಸದರಾಗಿದ್ದ ಅವಧಿಯಲ್ಲಿ ಅವರ ಸಾಧನೆಯನ್ನು ಹೇಳಿ ಮತ ಕೇಳಲಿ, ಕಳೆದ 20 ವರ್ಷಗಳಲ್ಲಿ ನೇತ್ರಾವತಿ ತಿರುವು ಹೆಸರಿನಲ್ಲಿ ಸುದ್ದಿಯಾಗಿದ್ದು ಬಿಟ್ಟರೇ ಯಾವುದನ್ನೂ ತಿರುಗಿಸಿಲ್ಲ. ಕಾಂಗ್ರೆಸ್ ಪಕ್ಷವನ್ನು ಮುಗಿಸಿದ ಬಸವರಾಜು ಬಿಜೆಪಿ ಯನ್ನು ಜಿಲ್ಲೆಯಲ್ಲಿ ಅತಿ ಶೀಘ್ರ ನಿರ್ನಾಮ ಮಾಡಲಿದ್ದಾರೆ. ಇದರೊಂದಿಗೆ ಅವರ ರಾಜಕೀಯ ಜೀವನವೂ ಮುಗಿಯುವ ಕಾಲ ಸನಿಹದಲ್ಲಿದೆ ಎಂದು ಭವಿಷ್ಯ ನುಡಿದರು.

ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ ಮಾತನಾಡಿ, ದೇವೇಗೌಡರು ಮೈತ್ರಿ ಅಭ್ಯರ್ಥಿಯಾಗಿರುವುದನ್ನು ಸಹಿಸದ ಬಿಜೆಪಿಯವರು ಕೈ ಮತ್ತು ತೆನೆ ಪಕ್ಷದವರು ಕಿತ್ತಾಡುತ್ತಿದ್ದಾರೆ ಎಂದು ಗಾಸಿಪ್ ಹಬ್ಬಿಸುತ್ತಿದ್ದಾರೆ. ಇದು ಊಹಾಪೋಹ. ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಹೋರಾಟ ನಡೆಸಲು ಮುಖಂಡರು, ಕಾರ್ಯಕರ್ತರು ಸಂಕಲ್ಪ ಕೈಗೊಂಡಿದ್ದಾರೆ ಎಂದರು.

ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರಿಗೆ ಮತ ಹಾಕುವುದು ಜಿಲ್ಲೆಯ ಮತದಾರ ಸೌಭಾಗ್ಯ ಎಂದು ಭಾವಿಸಿದ್ದೇನೆ. ಬಿಜೆಪಿ ಯವರು ವಿನಾಕಾರಣ ಗೌಡರು ಹೇಮಾವತಿ ನೀರಿನ ವಿಚಾರದಲ್ಲಿ ದೂರುತ್ತಿದ್ದಾರೆ. ಗೌಡರಿಗೆ ಮತಹಾಕಲು ಬಿಜೆಪಿ ಯವರು ಸೇರಿದಂತೆ ಎಲ್ಲರೂ ಪಕ್ಷ ಬೇಧ ಮರೆತು ಸಿದ್ಧರಾಗಿದ್ದಾರೆ. ತುರುವೇಕೆರೆಯಲ್ಲಿ ಗೌಡರಿಗೆ 1 ಲಕ್ಷಕ್ಕೂ ಹೆಚ್ಚು ಮತಗಳನ್ನು ಹಾಕುವ ಮೂಲಕ ಮಾಜಿ ಪ್ರಧಾನಿಯನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ ಎಂಎಲ್‍ಸಿಗಳಾದ ಬೆಮೆಲ್ ಕಾಂತರಾಜು, ಚೌಡರೆಡ್ಡಿ ತೋಪಲ್ಲಿ, ಮಾಜಿ ಶಾಸಕರಾದ ಷಫಿಅಹಮದ್, ಷಡಾಕ್ಷರಿ, ಹೆಚ್.ಬಿ. ನಂಜೇಗೌಡ, ಆರ್.ನಾರಾಯಣ್, ರಮೇಶ್‍ಬಾಬು, ಚೌದ್ರಿ ಟಿ,ರಂಗಪ್ಪ, ಚಂದ್ರೇಶ್, ಗೀತಾರಾಜಣ್ಣ, ತಾಲೂಕು ಜೆ.ಡಿ.ಎಸ್ ಅಧ್ಯಕ್ಷರಾದ ಸ್ವಾಮಿ, ಬ್ಲಾಕ್ ಕಾಂಗ್ರೆಸ್‍ನ  ಪ್ರಸನ್ನಕುಮಾರ್, ನಾಗೇಶ್, ವಸಂತಕುಮಾರ್, ರಮೇಶ್‍ಗೌಡ, ಶಂಕರೇಗೌಡ, ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X