Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ ಸರಕಾರದ ಮುಖ್ಯ ಕಾರ್ಯದರ್ಶಿಗೆ...

ಅಸ್ಸಾಂ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ತೀವ್ರ ತರಾಟೆ

ವಿದೇಶಿಯರ ಬಂಧನ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ1 April 2019 9:46 PM IST
share
ಅಸ್ಸಾಂ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ತೀವ್ರ ತರಾಟೆ

ಹೊಸದಿಲ್ಲಿ,ಎ.1: ಭಾರತವನ್ನು ಅಕ್ರಮವಾಗಿ ಪ್ರವೇಶಿಸಿರುವ ವಿದೇಶಿಯರ ಬಂಧನಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಅಸ್ಸಾಂ ಸರಕಾರದ ಮುಖ್ಯ ಕಾರ್ಯದರ್ಶಿಗಳನ್ನು ಸರ್ವೋಚ್ಚ ನ್ಯಾಯಾಲಯವು ಸೋಮವಾರ ತೀವ್ರ ತರಾಟೆಗೆತ್ತಿಕೊಂಡಿತು. ವಿಚಾರಣೆಗೆ ಮುಖ್ಯ ಕಾರ್ಯದರ್ಶಿಗಳ ಗೈರುಹಾಜರಿಯನ್ನು ಪ್ರಶ್ನಿಸಿದ ನ್ಯಾಯಾಲಯವು,ಎ.8ರಂದು ತನ್ನೆದುರು ಹಾಜರಾಗುವಂತೆ ಅವರಿಗೆ ಆದೇಶಿಸಿತು. ಅಸ್ಸಾಂ ಸರಕಾರವು ಸಲ್ಲಿಸಿದ ಅಫಿದಾವತ್ತನ್ನು ‘ವ್ಯರ್ಥ ಕಸರತ್ತು’ ಎಂದು ಬಣ್ಣಿಸಿದ ಸರ್ವೋಚ್ಚ ನ್ಯಾಯಾಲಯವು,ವಿದೇಶಿಯರ ನ್ಯಾಯಾಧಿಕರಣವು ವಿದೇಶಿಗಳೆಂದು ಘೋಷಿಸಿರುವ ಎಷ್ಟು ಜನರು ಸ್ಥಳೀಯರೊಂದಿಗೆ ಬೆರೆತಿದ್ದಾರೆ ಎನ್ನುವುದನ್ನು ತಿಳಿಯಲು ಬಯಸಿತು.

ನಾವು ಅನುಮತಿ ನೀಡಿದರೆ ಮಾತ್ರ ಮುಖ್ಯ ಕಾರ್ಯದರ್ಶಿಗಳು ರಾಜ್ಯಕ್ಕೆ ಮರಳುತ್ತಾರೆ ಎಂದು ಮು.ನ್ಯಾ.ರಂಜನ ಗೊಗೊಯಿ ನೇತೃತ್ವದ ಪೀಠವು ತಿಳಿಸಿತು.

ಕಳೆದ 10 ವರ್ಷಗಳಲ್ಲಿ ಸುಮಾರು 70,000 ಅಕ್ರಮ ವಿದೇಶಿ ವಲಸಿಗರು ರಾಜ್ಯದ ಜನರಲ್ಲಿ ಸೇರಿಕೊಂಡಿದ್ದಾರೆ ಎಂದು ಅಫಿದಾವತ್ತಿನಲ್ಲಿ ತಿಳಿಸಿರುವ ಅಸ್ಸಾಂ ಸರಕಾರವು,ಅಕ್ರಮ ವಿದೇಶಿಯರಿಗೆ ರೇಡಿಯೊ ಫ್ರೀಕ್ವೆನ್ಸಿ ಚಿಪ್‌ನ್ನು ಅಳವಡಿಸುವ ಪರಿಕಲ್ಪನೆಯನ್ನು ಪರಿಶೀಲಿಸಲು ಸಮಿತಿಯನ್ನು ರಚಿಸುವ ಪ್ರಸ್ತಾವವೊಂದನ್ನ್ನು ತಾನು ಹೊಂದಿದ್ದೇನೆ ಎಂದೂ ತಿಳಿಸಿದೆ.

“ಕಳೆದ 10 ವರ್ಷಗಳಲ್ಲಿ ನೀವೇನು ಮಾಡುತ್ತಿದ್ದೀರಿ? ನಿಮ್ಮ ಅಂಕಿಅಂಶಗಳು ತಪ್ಪಾಗಿವೆ” ಎಂದು ಪೀಠವು ಹೇಳಿತು.

ಬಂಧನ ಕೇಂದ್ರಗಳಲ್ಲಿರುವ ವಿದೇಶಿಯರ ಸ್ಥಿತಿಯ ಕುರಿತು ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ನಡೆಸುತ್ತಿದೆ. ಅವರು ಭಾರತೀಯರಲ್ಲವೆಂಬ ಏಕೈಕ ಕಾರಣದಿಂದ ಅವರನ್ನು ಅನಿರ್ದಿಷ್ಟಾವಧಿಗೆ ಬಂಧನದಲ್ಲಿಡಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಅಸ್ಸಾಮ್‌ನಲ್ಲಿ ಸಾವಿರಾರು ಅಕ್ರಮ ವಲಸಿಗರನ್ನು ಅವರ ತವರು ದೇಶಗಳಿಗೆ ಗಡಿಪಾರುಗೊಳಿಸದೆ ವರ್ಷಗಳಿಂದಲೂ ಬಂಧನ ಕೇಂದ್ರಗಳಲ್ಲಿರಿಸಿರುವ ಬಗ್ಗೆ ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಕಳವಳವನ್ನು ವ್ಯಕ್ತಪಡಿಸಿತ್ತು. ಬಂಧನ ಕೇಂದ್ರಗಳಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನೆತ್ತಿದ್ದ ಅದು,ಅಕ್ರಮ ವಲಸಿಗರನ್ನು ಅನಿರ್ದಿಷ್ಟಾವಧಿಗೆ ಬಂಧನದಲ್ಲಿಡುವಂತಿಲ್ಲ ಎಂದು ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X